Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅನರ್ಹರಿಗೆ ರಿಲೀಫ್ ಅಲ್ಲ ಶಾಕ್ – ಬೀಸೋ ದೊಣ್ಣೆಯಿಂದ ಪಾರಾದ ಬಿಜೆಪಿ

Public TV
Last updated: September 26, 2019 7:02 pm
Public TV
Share
3 Min Read
BSY 4
SHARE

ಬೆಂಗಳೂರು: ಉಪ ಚುನಾವಣೆಗೆ ತಡೆ ನೀಡುವ ಮೂಲಕ ಸುಪ್ರೀಂ ಅನರ್ಹರಿಗೆ ಈಗ ರಿಲೀಫ್ ಸಿಕ್ಕಿದೆ. ಆದರೆ ಮುಂದೆ ಉಪಚುನಾವಣೆ ರಾಜ್ಯದಲ್ಲಿ ನಡೆಯುತ್ತಾ ಎನ್ನುವ ಅನುಮಾನ ಈಗ ಎದ್ದಿದೆ.

ಸುಪ್ರೀಂ ಕೋರ್ಟಿನಲ್ಲಿ ತಮ್ಮ ಪರವಾಗಿ ತೀರ್ಪು ಬಂದರೆ ಅನರ್ಹರು ಚುನಾವಣೆ ನಿಂತು ಜಯಗಳಿಸಿ ಮಂತ್ರಿಯಾಗುವ ಕನಸಿನಲ್ಲಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಉಪ ಚುನಾವಣೆ ನಡೆಸದೇ ವಿಧಾನಸಭೆಯಲ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಲು ಚಿಂತಿಸಿದೆ ಎನ್ನಲಾಗುತ್ತಿದೆ.

rebel congress jds resigns 4 1

ಹೌದು, ರಾಜ್ಯ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಬಿಜೆಪಿ ಬೀಸೋ ದೊಣ್ಣೆಯಿಂದ ಪಾರಾಗಿದೆ. ಆದರೆ ಇದೇ ವೇಳೆ ಬಿಎಸ್ ಯಡಿಯೂರಪ್ಪ ಅವರ ಸರ್ಕಾರದ ಅವಧಿ ಕೇವಲ 9 ತಿಂಗಳು ಮಾತ್ರವೇ ಎನ್ನುವ ಪ್ರಶ್ನೆ ಎದ್ದಿದೆ.

ಸದ್ಯ ಚುನಾವಣೆಗೆ ನ್ಯಾಯಾಲಯ ಬ್ರೇಕ್ ಹಾಕಿರುವುದರಿಂದ ಪಕ್ಷದಲ್ಲಿ ಉಂಟಾಗಿದ್ದ ಬಂಡಾಯವನ್ನು ಶಮನ ಮಾಡಲು ನಾಯಕರಿಗೆ ಅವಕಾಶ ಸಿಕ್ಕಿದೆ. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಬಂಡಾಯ ನಡುವೆ ಸರ್ಕಾರ ನಡೆಸುವುದು ಅಗತ್ಯತೆ ಹಾಗೂ ಪಕ್ಷದ ವರ್ಚಸ್ಸಿಗೆ ಉಂಟಾಗಬಹುದಾದ ಹಾನಿಯ ಬಗ್ಗೆಯೂ ಚರ್ಚೆ ನಡೆಸಿದೆ. ಈ ಹಿನ್ನೆಲೆಯಲ್ಲಿಯೇ ಉಪಚುನಾವಣೆಗೆ ಅವಕಾಶ ನೀಡದೆ ನೇರ ಚುನಾವಣೆ ಎದುರಿಸುವ ಕುರಿತು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

rebel congress jds resigns A

ಹೈಕಮಾಂಡ್ ಚುನಾವಣೆಯೇ ಸರಿ ಎನ್ನುವ ನಿರ್ಧಾರ ತಗೆದು ಜನವರಿ ಬಳಿಕ ಚುನಾವಣೆ ಹೋಗುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪರಿಣಾಮ ಫೆಬ್ರವರಿಯಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ ಇದೆ. ಏಕೆಂದರೆ ಶಾಸಕರ ತಮ್ಮ ಅನರ್ಹತೆಯನ್ನು ಪ್ರಶ್ನೆ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಪ್ರಕರಣ ಸುದೀರ್ಘ ವಿಚಾರಣೆಗೆ ನ್ಯಾಯಾಲಯ ಮುಂದಾಗಿ ಸಾಂವಿಧಾನಿಕ ಪೀಠ ರಚನೆ ಮಾಡಿದರೆ ಪ್ರಕರಣ ಇತ್ಯರ್ಥವಾಗಬೇಕಾದರೆ ಹಲವು ದಿನಗಳು ಬೇಕಾಗಬಹುದು. ತೆರವಾದ ವಿಧಾನಸಭಾ ಕ್ಷೇತ್ರಗಳನ್ನು 6 ತಿಂಗಳ ಕಾಲ ಖಾಲಿ ಬಿಡುವಂತಿಲ್ಲ. ಹೀಗಾಗಿ ದೀರ್ಘ ಸಮಯಗಳ ಕಾಲ ವಿಚಾರಣೆ ನಡೆಸಲು ಬರುವುದಿಲ್ಲ.

ಕರ್ನಾಟಕ ಉಪಚುನಾವಣೆ ಮಾತ್ರ ಮುಂದೂಡಿರುವುದರಿಂದ ಬಿಜೆಪಿ ಹೈಕಮಾಂಡ್ ಮಹಾರಾಷ್ಟ್ರ ಚುನಾವಣೆಯತ್ತ ಹೆಚ್ಚು ಗಮನಹರಿಸಿದ್ದು, ಇಲ್ಲೂ ಬಹುಮತ ಸಿಕ್ಕರೆ ಕರ್ನಾಟಕದಲ್ಲೂ ಮಧ್ಯಂತರ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಅನರ್ಹರ ಪ್ರಕರಣ ಇತ್ಯರ್ಥಕ್ಕೆ ಕೆಲ ತಿಂಗಳ ಅವಧಿ ಅಗತ್ಯ ಇರುವ ಕಾರಣ ಅಲ್ಲಿಯವರೆಗೂ ರಾಜ್ಯದಲ್ಲಿ ಬಿಎಸ್‍ವೈ ಅವರ ಸರ್ಕಾರ ಆಡಳಿತ ನಡೆಯನ್ನು ತುಲನೆ ಮಾಡಿ ಚುನಾವಣೆಗೆ ಹೋಗುವ ಅಂತಿಮ ನಿರ್ಧಾರ ಮಾಡುವ ಚಿಂತನೆ ಹೈಕಮಾಂಡ್ ಮುಂದಿದೆ.

Amit Shah Modi

ಯಾಕೆ ಚುನಾವಣೆ?
ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಗೆಲುವು ಸಾಧಿಸಿದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರು ಕರ್ನಾಟಕವನ್ನ ಟಾರ್ಗೆಟ್ ಮಾಡಲಿದ್ದಾರೆ. ಕೇಂದ್ರದಂತೆ ರಾಜ್ಯದಲ್ಲಿ ಕೂಡ ಸ್ಪಷ್ಟ ಬಹುಮತದ ಬಿಜೆಪಿ ಸರ್ಕಾರವನ್ನು ರಚಿಸಲು ಬಿಜೆಪಿ ಹೈಕಮಾಂಡ್ ಯೋಚಿಸಿದೆ ಎನ್ನಲಾಗಿದೆ.

ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆಯಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಬೇಕಾದರೆ ಉಪಚುನಾವಣೆಯಲ್ಲಿ 6 ಕ್ಷೇತ್ರಗಳಲ್ಲಿ ಜಯಗಳಿಸಬೇಕು. ಕರ್ನಾಟಕ ವಿಧಾನಸಭೆಯಲ್ಲಿ ಒಟ್ಟು ಈಗ ಬಿಜೆಪಿಯ ಸಂಖ್ಯಾ ಬಲ 105(ಪಕ್ಷೇತರ ಸೇರಿದರೆ 106) ಇದೆ. ಸರಳ ಬಹುಮತಕ್ಕೆ 112 ಸ್ಥಾನಗಳ ಅವಶ್ಯಕತೆಯಿದೆ. ಹೀಗಾಗಿ 15 ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕನಿಷ್ಟ 6 ಕ್ಷೇತ್ರಗಳಲ್ಲಿ ಜಯಗಳಿಸಲೇಬೇಕಾದ ಅನಿವಾರ್ಯತೆಗೆ ಬಿಜೆಪಿ ಸಿಲುಕಿದೆ.

yeddyurappa bsy serious thinking

ಸದ್ಯ ವಿಧಾನಸಭೆಯಲ್ಲಿ ಬಿಎಸ್‍ಪಿ 1, ಬಿಜೆಪಿ 105, ಕಾಂಗ್ರೆಸ್ 66, ಜೆಡಿಎಸ್ 34 ಶಾಸಕರ ಬಲಾಬಲವನ್ನು ಹೊಂದಿದೆ. ಒಂದು ವೇಳೆ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲದೇ ಇದ್ದರೆ ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ. ಒಂದೊಮ್ಮೆ 6 ಸ್ಥಾನ ಗೆದ್ದರು ಬಿಜೆಪಿ ಅಲ್ಪ ಬಹುಮತದ ಸರ್ಕಾರ ಮುಂದುವರಿಯುತ್ತದೆ. ಈ ಅವಧಿಯಲ್ಲಿ ಬಿಜೆಪಿಯ ಯಾವುದೇ ಶಾಸಕರು ಕೈಕೊಟ್ಟರು ಮತ್ತೆ ಸರ್ಕಾರ ಪತನವಾಗುತ್ತದೆ. ಪರಿಣಾಮ ಇಂತಹ ಸರ್ಕಾರ ಹೊಂದಿರುವುದಕ್ಕಿಂತ ಚುನಾವಣೆ ಎದುರಿಸಿ ಬಹುಮತದ ಸ್ಪಷ್ಟ ಸರ್ಕಾರ ರಚನೆ ಮಾಡುವುದು ಉತ್ತಮ ಎಂಬ ಚರ್ಚೆ ಹೈಕಮಾಂಡ್ ಮಾಡುತ್ತಿದೆ ಎನ್ನಲಾಗುತ್ತಿದೆ.

TAGGED:bengalurubjpby electionHigh CommandInterim ElectionPublic TVಅನರ್ಹ ಶಾಸಕರುಉಪಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮಧ್ಯಂತರ ಚುನಾವಣೆಹೈಕಮಾಂಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
14 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
17 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
18 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
18 hours ago

You Might Also Like

PM Modi 1
Latest

ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

Public TV
By Public TV
9 minutes ago
ashok kumaraswamy Vijayendra
Bengaluru City

ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾಯಕ್ರಮ ಆಗ್ಬೇಕು – ಆಯುಕ್ತರಿಗೆ ಗದರಿದ್ದಕ್ಕೆ ಭದ್ರತೆ ಎಂದ ಹೆಚ್‌ಡಿಕೆ

Public TV
By Public TV
19 minutes ago
Lakshmi Hebbalkar 1
Belgaum

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

Public TV
By Public TV
1 hour ago
Lucknow Accused in rape of toddler killed in encounter with UP police near Alambagh border
Crime

3 ವರ್ಷದ ಬಾಲಕಿಯ ಮೇಲೆ ರೇಪ್‌ – UP ಪೊಲೀಸರ ಗುಂಡಿಗೆ ಕಾಮಿ ದೀಪಕ್‌ ಬಲಿ

Public TV
By Public TV
1 hour ago
Repo Rate
Latest

ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

Public TV
By Public TV
2 hours ago
BJP MLA Sharanu Salagar and Team 40 cattle in basavakalyan in Bidar 2
Bidar

ಶರಣು ಸಲಗರ್ ದಾಳಿ – ಬಲಿಗೆ ಸಿದ್ಧವಾಗಿದ್ದ 40 ಗೋವುಗಳ ರಕ್ಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?