ಪುತ್ರನಿಗೆ ಕೈ ತಪ್ಪಿದ ಟಿಕೆಟ್‌ – ಮೌನಕ್ಕೆ ಜಾರಿದ ಯಡಿಯೂರಪ್ಪ

Public TV
1 Min Read
yeddyurappa bsy serious thinking

ಬೆಂಗಳೂರು: ವಿಜಯೇಂದ್ರಗೆ ಪರಿಷತ್ ಟಿಕೆಟ್ ಕೈತಪ್ಪಿದ ನಂತರ ಯಡಿಯೂರಪ್ಪ ಮೌನ ವಹಿಸಿರುವುದು ಬಿಜೆಪಿಯನ್ನು ಕಂಗೆಡಿಸಿದೆ.

ಗುರುವಾರ ಬೆಳಗಾವಿ ಕಾರ್ಯಕ್ರಮಕ್ಕೆ ಗೈರಾಗಿದ್ದ ಬಿಎಸ್‍ವೈ, ಮುಂದಿನ 10 ದಿನ ವಿಶ್ರಾಂತಿಯಲ್ಲಿ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದಿಂದ ಬಂದ ಶೇ.87 ಮಂದಿಗೆ ಭಾರತದ ಪೌರತ್ವ 

yediyurappa Vijayendra

ಇದು ಪರಿಷತ್ ಚುನಾವಣಾ ಪ್ರಚಾರದ ಮೇಲೆ ಪ್ರಭಾವ ಬೀರುವ ಸಂಭವ ಇದೆ ಅಂತಾ ಹೇಳಲಾಗ್ತಿದೆ. ಅತ್ತ ಬೆಳಗಾವಿ ಬಿಜೆಪಿಯಲ್ಲಿ ಬಣ ಜಗಳ ಜೋರಾಗಿದೆ. ಎಂಎಲ್‍ಸಿ ಲಖನ್ ಜಾರಕಿಹೊಳಿ ಬಿಜೆಪಿ ಬೆಂಬಲಿಸಲು ಸಿದ್ಧರಿದ್ದರೂ, ನಮಗೆ ಅವರ ಬೆಂಬಲ ಬೇಕಿಲ್ಲ ಎಂದು ಸಚಿವ ಉಮೇಶ್ ಕತ್ತಿ ಬಹಿರಂಗವಾಗಿ ಘೋಷಿಸಿದ್ದಾರೆ.

ವಿಜಯೇಂದ್ರಗೆ ಟಿಕೆಟ್ ನೀಡದ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಸಿಎಂ ಬೊಮ್ಮಾಯಿ ನಿರಾಕರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *