Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಹೋರಾಟದ ಬಿಸಿಗೆ ಕಾಂಗ್ರೆಸ್ ಸರ್ಕಾರ ಒಂಟಿ ಕಾಲಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಮ ಹೋರಾಟದ ಬಿಸಿಗೆ ಕಾಂಗ್ರೆಸ್ ಸರ್ಕಾರ ಒಂಟಿ ಕಾಲಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Districts

ನಮ್ಮ ಹೋರಾಟದ ಬಿಸಿಗೆ ಕಾಂಗ್ರೆಸ್ ಸರ್ಕಾರ ಒಂಟಿ ಕಾಲಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Public TV
Last updated: August 5, 2024 5:33 pm
Public TV
Share
2 Min Read
BY Vijayendra
SHARE

ರಾಮನಗರ: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ (Congress), ರಾಜ್ಯ ಸರ್ಕಾರಕ್ಕೆ ಮುಟ್ಟಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಸರ್ಕಾರ ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

ರಾಮನಗರದ ಕೆಂಗಲ್‍ನಲ್ಲಿ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಈ ವೇಳೆ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಳುಹಿಸಿದ ವೇಣುಗೋಪಾಲ್, ಸುರ್ಜೇವಾಲಾ ಅವರು ಬಂದು ಶಾಸಕರಿಗೆ ಪಾಠ ಹೇಳಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳನ್ನು ರಕ್ಷಿಸಲು ಸೂಚಿಸಿದ್ದಾರೆ. ಹಗರಣದಲ್ಲಿ ಮುಳುಗಿದ ಸರ್ಕಾರದ ಮತ್ತು ಮುಖ್ಯಮಂತ್ರಿಗಳನ್ನು ಬಲವಾಗಿ ಸಮರ್ಥನೆ ಮಾಡಲು ದೆಹಲಿ ಗಾಂಧಿ ಕುಟುಂಬದ ಸಂದೇಶವನ್ನು ನೀಡಿ ಹೋಗಿದ್ದಾರೆ ಎಂದು ಅವರು ಕುಟುಕಿದ್ದಾರೆ.

ಕೆಂಗಲ್ ಶ್ರೀ ಹನುಮಂತ ಸ್ವಾಮಿಗೆ ಪೂಜೆ ಸಲ್ಲಿಸಿ ನಮ್ಮ 3ನೇ ದಿನದ ಪಾದಯಾತ್ರೆ ಆರಂಭಿಸುತ್ತಿದ್ದೇವೆ. ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಮ್ಮೆಲ್ಲ ಶಾಸಕ ಮಿತ್ರರು, ಬಿಜೆಪಿ- ಜೆಡಿಎಸ್ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ದಿನೇದಿನೇ ನಮ್ಮ ಪಾದಯಾತ್ರೆಯಲ್ಲಿ ಹೆಚ್ಚು ವಿಶ್ವಾಸ, ಉತ್ಸಾಹದಿಂದ ಹೆಜ್ಜೆಗೆ ಹೆಜ್ಜೆ ಇಡುತ್ತಿದ್ದಾರೆ. ಇದರ ಪರಿಣಾಮವಾಗಿ ಆಡಳಿತ ಪಕ್ಷಕ್ಕೆ ನಿದ್ರೆ ಬರುತ್ತಿಲ್ಲ ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

VIJAYENDRA

ಇದು ನೆಪಮಾತ್ರಕ್ಕೆ ಮಾಡುವ ಹೋರಾಟವಲ್ಲ, ಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರದಿಂದ ನಾಡಿನ ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯವಾಗಿದೆ. ಇಂಥ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸಬೇಕಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅಭಿವೃದ್ಧಿ ಶೂನ್ಯ, ಲೂಟಿ ಹೊಡೆಯುವ ಸರ್ಕಾರ
ವಯನಾಡಿನಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳು 100 ಮನೆಗಳನ್ನು ಘೋಷಿಸಿದ್ದಾರೆ. ಇದು ತಪ್ಪೇನಲ್ಲ, ಒಳ್ಳೆಯ ಕ್ರಮವೇ ಆಗಿದೆ. ಆದರೆ, ಮುಖ್ಯಮಂತ್ರಿಗಳಿಗೆ ಶಕ್ತಿ ನೀಡಿದ ಮೈಸೂರು ಜಿಲ್ಲೆಯಲ್ಲಿ ಲಕ್ಷಾಂತರ ಬಡವರು, ನಿರ್ಗತಿಕರು ಸಲ್ಲಿಸಿದ ನಿವೇಶನಕ್ಕೆ ಸಂಬಂಧಿಸಿದ ಅರ್ಜಿಗಳು ಹಾಗೇ ಬಿದ್ದಿವೆ. ಇದರ ಬಗ್ಗೆ ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದು ರಾಜ್ಯದ ಜನರ ಪ್ರಶ್ನೆ. ಅಭಿವೃದ್ಧಿ ಶೂನ್ಯ, ಲೂಟಿ ಹೊಡೆಯುವ ಸರ್ಕಾರ ಇಲ್ಲಿದೆ. ಜನರು ಈ ಸರ್ಕಾರ ಮತ್ತು ಸಿದ್ದರಾಮಯ್ಯ ಅವರಿಗೆ ಶಾಪ ಹಾಕುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಜನರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಈ ಪಾದಯಾತ್ರೆ ಸಾಗುತ್ತಿದೆ. ಡಿ.ಕೆ.ಶಿವಕುಮಾರ್ (D.K Shivakumar) ಅವರು ಮಾತು ಈಗ ಪ್ರಸ್ತುತವಲ್ಲ. ರಾಜ್ಯದ ಜನರ ಪ್ರಶ್ನೆ ಈಗ ಪ್ರಸ್ತುತ. ಅಹಿಂದ ಸಮುದಾಯಗಳ ಹೆಸರು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಮಾಡಿದ ವಂಚನೆ ಕುರಿತು ಜನರು ಪ್ರಶ್ನಿಸುತ್ತಿದ್ದಾರೆ. ಹಗಲುದರೋಡೆ ಬಗ್ಗೆ ಜನರು ಪ್ರಶ್ನೆ ಮುಂದಿಟ್ಟಿದ್ದಾರೆ. ಅದಕ್ಕೆ ಉತ್ತರಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ಸಿಗೆ ಬೆದರಿಕೆ ಹಾಕಲು ನಾವ್ಯಾರು? 136 ಶಾಸಕರಿದ್ದಾರೆ. ಸರ್ಕಾರದ ಅಸ್ಥಿರತೆ ಕುರಿತು ಮುಖ್ಯಮಂತ್ರಿಗಳಿಗೆ ಅನಿಸಿದ್ದರೆ ಎಲ್ಲೋ ಒಂದೆಡೆ ಅವರು ಸೋಲನ್ನು ಒಪ್ಪಿಕೊಂಡಿದ್ದಾರೆ. ಹಗರಣಗಳಲ್ಲಿ ಸರ್ಕಾರ ಮುಳುಗಿದೆ. ತಾವೇನು ಮಾಡಬೇಕೆಂದು ತೋಚುತ್ತಿಲ್ಲ ಎಂದು ಸಿಎಂ ಅವರಿಗೆ ಮನವರಿಕೆ ಆಗಿದೆ. ನಾವು ಅವರನ್ನು ಬೆದರಿಸುವ ತಂತ್ರ ಮಾಡುತ್ತಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ಈ ನಾಡಿನ ಜನತೆಗೆ ನ್ಯಾಯ ಕೊಡಿಸಲು ನಾವು ಮುಂದಾಗಿದ್ದೇವೆ ಎಂದಿದ್ದಾರೆ.

TAGGED:B.Y vijayendrabjpcongressSiddaramaiah D.K Shivakumar
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
16 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
44 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?