Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ – ರಾಜ್ಯ ಬಿಜೆಪಿ ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ – ರಾಜ್ಯ ಬಿಜೆಪಿ ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು

Latest

ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ – ರಾಜ್ಯ ಬಿಜೆಪಿ ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು

Public TV
Last updated: December 4, 2025 4:22 pm
Public TV
Share
3 Min Read
BY Vijayendra
SHARE

ನವದೆಹಲಿ: ರಾಜ್ಯ ಬಿಜೆಪಿ (BJP) ಅಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ಸಮರ ಸಾರಿದ್ದ ಭಿನ್ನ ನಾಯಕರು ಈಗ ತಮ್ಮ ಹೋರಾಟದ ದಾರಿಯನ್ನು ಬದಲಿಸಿದ್ದಾರೆ. ಕೂಡಲೇ ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಲು ಒತ್ತಡ ಹೇರುವ ಬದಲು ಮುಂಬರುವ ವಿಧಾನಸಭೆ ಚುನಾವಣೆಗೆ ಅವರು ನೇತೃತ್ವ ವಹಿಸದಂತೆ ನೋಡಿಕೊಳ್ಳುವ ಪ್ರಯತ್ನ ಆರಂಭಿಸಿದ್ದಾರೆ.

ಕಳೆದ ಮೂರ ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿರುವ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ನೇತೃತ್ವದ ಭಿನ್ನರ ತಂಡ ರಾಜ್ಯ ಬಿಜೆಪಿ ಉಸ್ತುವಾರಿ ರಾಧ ಮೋಹನ್ ದಾಸ್ ಅಗರವಾಲ್, ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ ಸುಧಾಕರ್ ಸೇರಿದಂತೆ ಹಲವರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜೆಸಿಬಿಗಳ ಘರ್ಜನೆ – 47 ಮನೆಗಳು ನೆಲಸಮ

ಬಿಜೆಪಿ ಪ್ರತ್ಯೇಕ ಬಣದ ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ವಿಜಯೇಂದ್ರ ಪಕ್ಷದ ಹೋರಾಟಗಳನ್ನು ಸಮರ್ಪಕವಾಗಿ ನಡೆಸುತ್ತಿಲ್ಲ. ರಾಜ್ಯದ ಪ್ರಸಕ್ತ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಂಘಟನೆ ಬಲಪಡಿಸುವಲ್ಲಿ ವಿಫಲರಾಗಿದ್ದಾರೆ. ಮಾಧ್ಯಮ ಹೇಳಿಕೆಗಳ ಮಟ್ಟಕ್ಕೆ ಮಾತ್ರ ಸೀಮಿತವಾಗಿದ್ದಾರೆ ಎಂದು ರೆಬೆಲ್ ತಂಡ ಹೈಕಮಾಂಡ್ ನಾಯಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ನಾಳೆಯಿಂದ ಮಂಡ್ಯದಲ್ಲಿ ಅದ್ಧೂರಿ ಕೃಷಿ ಮೇಳ – ಸಿಎಂ ಸಿದ್ದರಾಮಯ್ಯರಿಂದ ಚಾಲನೆ, 5 ಲಕ್ಷ ಜನ ಸೇರುವ ನಿರೀಕ್ಷೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷ, ಸಿಎಂ ಬದಲಾವಣೆ ಗೊಂದಲ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ಸಮಸ್ಯೆ ಇತ್ಯಾದಿ ಪ್ರಮುಖ ಸಮಸ್ಯೆಗಳ ವಿರುದ್ಧ ರಾಜ್ಯ ಘಟಕ ಸಮರ್ಪಕ ಹೋರಾಟ ನಡೆಸಿಲ್ಲ ಎಂದು ಪ್ರತ್ಯೇಕ ಬಣದ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ? ಹೊಸ ನಿಯಮಗಳು ಏನು?

ಈಗಾಗಲೇ ಎರಡು ವರ್ಷ ಬಿ.ವೈ ವಿಜಯೇಂದ್ರ ಪೂರ್ಣಗೊಳಿಸಿದ್ದು, ಇನ್ನೊಂದು ವರ್ಷದ ಅವಧಿ ಬಾಕಿ ಉಳಿದಿದೆ. ಮುಂದೆ ಪಂಚರಾಜ್ಯಗಳ ಚುನಾವಣೆ ಆರಂಭವಾಗುವ ಹಿನ್ನಲೆ ಬದಲಾವಣೆ ಸಾಧ್ಯತೆ ಮಂದವಾಗಿವೆ. ಈ ಹಿನ್ನಲೆ ಕೂಡಲೇ ಬದಲಾವಣೆಗೆ ಒತ್ತಡ ಹೇರುವ ಬದಲು ಮುಂಬರುವ ಚುನಾವಣೆ ಸಂದರ್ಭಕ್ಕೆ ಅವರ ಅವಧಿಯನ್ನು ಹೆಚ್ಚಿಸಬಹುದಾದ ಹೈಕಮಾಂಡ್ ನಿರ್ಧಾರವನ್ನು ಬದಲಿಸಬೇಕು ಮತ್ತು ವಿಜಯೇಂದ್ರ ಚುನಾವಣೆವರೆಗೂ ಮುಂದುವರಿಯದಂತೆ ನೋಡಿಕೊಳ್ಳುವ ಲೆಕ್ಕಚಾರ ಹಾಕಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಮದೀನಾ, ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ – ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ

ಇನ್ನು ದೆಹಲಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರತ್ಯೇಕ ಬಣದ ನಾಯಕ ಕುಮಾರ್ ಬಂಗಾರಪ್ಪ, ಅದು ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ. ಅದರ ಬಗ್ಗೆ ಪದೇಪದೆ ಮಾತಾಡುವ ಕೆಲಸಕ್ಕೆ ಹೋಗಿಲ್ಲ. ನಾವು ಪ್ರಸ್ತುತ ರಾಜಕೀಯದತ್ತ ಗಮನ ಹರಿಸುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಕೇಂದ್ರದ ಮುಂದಿಟ್ಟ ಕೆ.ಸುಧಾಕರ್

ಸಂಘಟನೆಯನ್ನು ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಬಲಪಡಿಸಬೇಕು ಎಂದು ಅಮಿತ್ ಶಾ ಸೂಚನೆ ಇದೆ. ನಿಮ್ಮ ಬೂತ್ ಅನ್ನು ಬಲಪಡಿಸಿ, ನಿಮ್ಮ ಮಂಡಲವನ್ನು ಸಿದ್ಧಪಡಿಸಿಕೊಳ್ಳಿ. ರಾಷ್ಟ್ರ ನಿರ್ಮಾಣಕ್ಕೆ ಮಂಡಲ ಮತ್ತು ಬೂತ್ ಮುಖ್ಯವೇ ಹೊರತು, ರಾಷ್ಟ್ರದ ರಾಜಕಾರಣವಲ್ಲ ಎಂದು ಶಾ ಹೇಳಿರುವುದಾಗಿ ಕುಮಾರ್ ಬಂಗಾರಪ್ಪ ಉಲ್ಲೇಖಿಸಿದ್ದಾರೆ. ಪಕ್ಷವು ಇದೇ ತತ್ವವನ್ನು ಅನುಸರಿಸುತ್ತಿದ್ದು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಕಾರ್ಪೊರೇಷನ್ ಚುನಾವಣೆಗಳಿಗೆ ಬೂತ್ ಮಟ್ಟದಲ್ಲಿ ಸಿದ್ಧತೆ ನಡೆಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆಗೆ ವಿಷನ್ ಡಾಕ್ಯುಮೆಂಟ್: ಎಂ.ಬಿ ಪಾಟೀಲ್

TAGGED:assembly electionbjpBY VijayendraNew Delhiramesh jarkiholiನವದೆಹಲಿಬಿಜೆಪಿಬಿವೈ ವಿಜಯೇಂದ್ರರಮೇಶ್ ಜಾರಕಿಹೊಳಿವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
6 minutes ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
14 minutes ago
mumbai murder
Crime

ಮುಂಬೈನಲ್ಲಿ ತನ್ನ ಲವ್ವರ್‌ನ ಟೀನೇಜ್‌ ಗರ್ಲ್‌ಫ್ರೆಂಡ್‌ ಮುಖಕ್ಕೆ ಗುಂಡು ಹಾರಿಸಿ ಕೊಂದ ಯುವತಿ

Public TV
By Public TV
53 minutes ago
g parameshwara 2
Bengaluru City

ಬೆಂಗಳೂರಲ್ಲಿ ಐಪಿಎಲ್ | ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್‌ ಇಂಪಾರ್ಟೆಂಟ್‌: ಪರಮೇಶ್ವರ್

Public TV
By Public TV
58 minutes ago
Bangladesh Election Results 2
Latest

ಬಿಎನ್‌ಪಿಗೆ ಗೆಲುವು; ಬಾಂಗ್ಲಾ ಪ್ರಧಾನಿ ಹುದ್ದೆಗೆ ತಾರಿಕ್‌ ರೆಹಮಾನ್‌ ಆಯ್ಕೆ – ಮೋದಿ ಅಭಿನಂದನೆ

Public TV
By Public TV
1 hour ago
Rowdy sheeter Shivaprakash murder case Former minister Bairati Basavaraj name in FIR
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಬೈರತಿ ಬಸವರಾಜ್‌ಗೆ ಮೆಡಿಕಲ್‌ ಟೆಸ್ಟ್‌, ಕೋರ್ಟ್‌ಗೆ ಹಾಜರು ಪಡಿಸಲಿರೋ ಸಿಐಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?