– ಹೈಕಮಾಂಡ್ ಹೇಳಿದ್ರೆ ಸ್ಥಳೀಯ ಚುನಾವಣೆಯಲ್ಲೂ ಮೈತ್ರಿಗೆ ಸಿದ್ಧ
ಬೆಂಗಳೂರು: ಬಿಜೆಪಿ (BJP) ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನೋ ನನ್ನ ಹೇಳಿಕೆ ಕಾರ್ಯಕರ್ತರ ಅಪೇಕ್ಷೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸ್ಪಷ್ಟನೆ ಕೊಟ್ಟಿದ್ದಾರೆ.
ತಮ್ಮ ಹೇಳಿಕೆಯಿಂದ ಮೈತ್ರಿಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತಾಡಿದ ವಿಜಯೇಂದ್ರ, ಪ್ರತೀ ಚುನಾವಣೆಯಲ್ಲೂ ನಾವು ಸ್ಪಷ್ಟ ಬಹುಮತಕ್ಕೆ 5-10 ಸೀಟ್ಗಳಿಂದ ವಂಚಿತರಾಗಿದ್ದೀವಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಅನ್ನೋದು ಕಾರ್ಯಕರ್ತರ ಅಪೇಕ್ಷೆ. ಮೊನ್ನೆ ನಡೆದ ಸ್ಥಳೀಯ ಚುನಾವಣೆಯಲ್ಲಿ (Local Body Elections) ಬಿಜೆಪಿ ಬಹುಮತ ಪಡೆದಿದೆ. ಕಾರ್ಯಕರ್ತರ ಆಕಾಂಕ್ಷೆಯಂತೆ ಅಧ್ಯಕ್ಷನಾಗಿ ನಾನು ಮಾತಾಡೋದು ನನ್ನ ಕರ್ತವ್ಯ. ಅಂತಿಮವಾಗಿ ಕಾರ್ಯಕರ್ತರಿಗೆ ಏನು ಸಂದೇಶ ಕೊಡಬೇಕೋ ಕೊಟ್ಟಿದ್ದೇನೆ ಅಂತ ಹೇಳಿದ್ರು. ಇದನ್ನೂ ಓದಿ: ಸಿಎಂ ಬದಲಾವಣೆ ಗೊಂದಲದ ನಡುವೆ ಸಿದ್ದರಾಮಯ್ಯ ದೆಹಲಿಗೆ; ಹೈಕಮಾಂಡ್ ಜೊತೆ ನಡೆಯಲಿದ್ಯಾ ಪ್ರತ್ಯೇಕ ಮಾತುಕತೆ?

ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬ ದೇವೇಗೌಡರ ಹೇಳಿಕೆ ಕುರಿತು ಮಾತಾಡಿದ ವಿಜಯೇಂದ್ರ, ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಬಗ್ಗೆ ನಮಗೆ ಗೌರವ ಇದೆ. ಅವರು ಮುತ್ಸದ್ದಿಗಳು. ದೇವೇಗೌಡರು ಮತ್ತು ಯಡಿಯೂರಪ್ಪ ಮಾತ್ರ ಹೋರಾಟದ ಹಿನ್ನೆಲೆಯಲ್ಲಿ ಬಂದವರು. ಮೋದಿಯವರ ಕೈ ಬಲಪಡಿಸಲು ಅವರು ಎನ್ಡಿಎ ಮಿತ್ರ ಪಕ್ಷ ಆಗಿದ್ದಾರೆ. ದೇವೇಗೌಡರು ನಿನ್ನೆ ಮಾತಾಡಿರೋದಕ್ಕೆ ಸಂತೋಷ ಇದೆ. ವರಿಷ್ಠರು ಹೇಳೋದನ್ನು ನಾವು ಕೇಳ್ತೇವೆ, ಇದರಲ್ಲಿ ಯಾವುದೇ ಗೊಂದಲ ಇಲ್ಲ. ಮೈತ್ರಿ ಬಗ್ಗೆ ಹೈಕಮಾಂಡ್ ಮಾತು ಕೇಳ್ತೇವೆ. ದೇವೇಗೌಡರು ಹೇಳಿರೋದನ್ನು ತಪ್ಪಾಗಿ ಅರ್ಥೈಸುವ ಅಗತ್ಯ ಇಲ್ಲ. ಸ್ಥಳೀಯ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳಬೇಕು ಅಂತ ಹೈಕಮಾಂಡ್ ಹೇಳಿದ್ರೆ ಅದಕ್ಕೆ ನಾವೆಲ್ಲ ಬದ್ಧವಾಗಿರ್ತೇವೆ ಅಂದ್ರು. ಇದನ್ನೂ ಓದಿ: ಉತ್ತರ ಪ್ರದೇಶದಂತೆ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ – ಕರ್ನಾಟಕದ ವಿರುದ್ಧ ಕೇರಳ ಸಿಎಂ ಕೆಂಡಾಮಂಡಲ
ಜಮೀರ್ ಮುಸ್ಲಿಂ ಲೇಔಟ್ ಮಾಡಿಬಿಡ್ತಾರೆ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಇರಲ್ಲ ಅಂತ ನಾನೆಲ್ಲೂ ಹೇಳಿಲ್ಲ. ಅಂತಿಮವಾಗಿ ನಮ್ಮ ಹೈಕಮಾಂಡ್, ದೇವೇಗೌಡರು, ಕುಮಾರಸ್ವಾಮಿ ಏನು ತೀರ್ಮಾನ ತಗೋತಾರೋ ಅದಕ್ಕೆ ಬದ್ಧವಾಗಿರ್ತೇವೆ ಅಂತ ವಿಜಯೇಂದ್ರ ಸ್ಪಷ್ಟ ಪಡಿಸಿದರು. ಇದೇ ವೇಳೆ ಯಲಹಂಕದ ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳ ತೆರವಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ಷೇಪ ಬಗ್ಗೆ ಮಾತಾಡಿದ ವಿಜಯೇಂದ್ರ, ಅಕ್ರಮ ಲೇಔಟ್ ತೆರವು ಬಗ್ಗೆ ಹೆಚ್ಚು ಚರ್ಚೆ ಬೇಡ. ಅದೇನಾದ್ರೂ ತಿಳಿದರೆ ಸಿಎಂ ಮತ್ತು ಜಮೀರ್ ಅವರೇ ಭೂಮಿ ಖರೀದಿ ಮಾಡಿ ಮುಸ್ಲಿಂ ಲೇಔಟ್ ಮಾಡಿಬಿಡ್ತಾರೆ ಅಂತ ಕುಟುಕಿದರು. ಇದನ್ನೂ ಓದಿ: ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್ ಮಾಡೋದು ಬೇಡ: ಡಿಕೆಶಿ ಕಿಡಿ

