Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

Bengaluru City

ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

Public TV
Last updated: June 6, 2025 4:08 pm
Public TV
Share
4 Min Read
BY Vijayendra
SHARE

– ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮ ಕಾನೂನು ಬಾಹಿರ ಅಂದ್ಮೇಲೆ ಡಿಸಿಎಂ ಹೋಗಿದ್ದೇಕೆ?

ಬೆಂಗಳೂರು: ಆರ್‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ (KSCA), ಆರ್‌ಸಿಬಿ ಮತ್ತು ಡಿಎನ್‌ವೆ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂ.1, ಉಪ ಮುಖ್ಯಮಂತ್ರಿಗಳು ಆರೋಪಿ ನಂ.2, ಮಾನ್ಯ ಗೃಹ ಸಚಿವ ಪರಮೇಶ್ವರ್ (G Parameshwar) ಅವರು ಆರೋಪಿ ನಂ.3 ಎಂದು ವಾಗ್ದಾಳಿ ನಡೆಸಿದರು. ಕಾಲ್ತುಳಿತ ಹಾಗೂ 11 ಜನ ಅಮಾಯಕರ ಸಾವಿನ ಸಂಬಂಧ ಕೊನೆಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ತೆಗೆದುಕೊಂಡು ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ ನಂತರ ಸರಕಾರ ಎಚ್ಚತ್ತುಕೊಂಡಿದೆ ಎಂದು ವಿಶ್ಲೇಷಿಸಿದರು.

ಮುಖ್ಯಮಂತ್ರಿಗಳು, ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡುವ ಬದಲಾಗಿ ತಾವೇ ಜವಾಬ್ದಾರಿ, ನೈತಿಕ ಹೊಣೆ ಹೊತ್ತು ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ ಎಂದು ಮತ್ತೊಮ್ಮೆ ಒತ್ತಾಯಿಸಿದರು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‍ಸಿಎ), ಆರ್‌ಸಿಬಿ ಮತ್ತು ಏಜೆನ್ಸಿಯಾದ ಡಿಎನ್‌ಎಯನ್ನ ಪ್ರಮುಖವಾಗಿ ಆರೋಪಿಗಳೆಂದು ಎಫ್‍ಐಆರ್‌ನಲ್ಲಿ ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ಎಫ್‍ಐಆರ್ ತರುವಾಯ, ಮುಖ್ಯಮಂತ್ರಿಗಳು ಏಕಾಏಕಿ ಜಾಗೃತರಾಗಿದ್ದಾರೆ. ಮುಖ್ಯಮಂತ್ರಿಗಳು ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಕಮೀಷನರ್ ಸೇರಿ 5 ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅರ್ಥಾತ್, ಮುಖ್ಯಮಂತ್ರಿಗಳು ಮೊನ್ನೆ ನಡೆದ ದುರ್ಘಟನೆ, 11 ಜನರ ಸಾವಿಗೆ ರಾಜ್ಯ ಸರಕಾರದಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಪೊಲೀಸರನ್ನು ಹರಕೆಯ ಕುರಿಯಾಗಿ ರಾಜ್ಯ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.

ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದ್ದು..
ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಿ ತಪ್ಪಿಸಿಕೊಳ್ಳುವ ಷಡ್ಯಂತ್ರ ಮುಖ್ಯಮಂತ್ರಿಗಳದು ಎಂದು ಬಿ.ವೈ ವಿಜಯೇಂದ್ರ ಅವರು ಆರೋಪಿಸಿದರು. ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೀರಿ. ವೈಫಲ್ಯಕ್ಕಾಗಿ ಬೇಹುಗಾರಿಕಾ ದಳದ ಅಧಿಕಾರಿಗಳನ್ನು ಯಾಕೆ ಅಮಾನತು ಮಾಡಿಲ್ಲ? ಎಂದು ಕೇಳಿದರು. ಬೇಹುಗಾರಿಕಾ ದಳ ನೇರ ಸಿಎಂ ಕೆಳಗಡೆ ಬರುತ್ತದೆ, ಅವರನ್ನು ಅಮಾನತು ಮಾಡಿದ್ರೆ ಇದು ಮುಖ್ಯಮಂತ್ರಿಗಳ ಬುಡಕ್ಕೇ ಬರಲಿದೆ. ಆದ್ದರಿಂದ ಅವರನ್ನ ಅಮಾನತು ಮಾಡಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ನಾವು 30-40 ಸಾವಿರ ಜನರು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೆವು. 2 ರಿಂದ 3 ಲಕ್ಷ ಜನರು ಬಂದಿದ್ದಾರೆ, ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎನ್ನುವ ಮೂಲಕ ಬೇಹುಗಾರಿಕಾ ದಳದ ವೈಫಲ್ಯವನ್ನು ಸ್ವತಃ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪೊಲೀಸರಿಂದ ಅನುಮತಿ ನಿರಾಕರಣೆ…
ನಿನ್ನೆ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಹೆಮ್ಮೆಯ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ರಾಜ್ಯ ಅತ್ಯಂತ ಹೆಮ್ಮೆ ಹಾಗೂ ಖುಷಿಪಡುವ ಕೆಲಸವನ್ನು ಆರ್‌ಸಿಬಿ ತಂಡ ಮಾಡಿದ್ದು, ಅವರನ್ನು ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಲಿದ್ದೇವೆ. ಈ ಐತಿಹಾಸಿಕ ಕ್ಷಣದಲ್ಲಿ ನೀವೂ ಭಾಗಿಯಾಗಿ ಎಂದು ಸ್ವತಃ ಮುಖ್ಯಮಂತ್ರಿಗಳೇ ಸಾಮಾಜಿಕ ಜಾಲತಾಣದ ಮೂಲಕ ಕರೆ ಕೊಟ್ಟಿದ್ದರು. 3 ರಂದು ಮ್ಯಾಚ್ ಆಗುವ ಮೊದಲೇ ಕೆಎಸ್‍ಸಿಎ, ಆರ್‌ಸಿಬಿ ಮತ್ತು ಏಜೆನ್ಸಿಯಾದ ಡಿಎನ್‌ಎ ಕಡೆಯಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹೋಗಿದ್ದರು. ಸಂಭ್ರಮಾಚರಣೆಗೆ ಅನುಮತಿ ಕೋರಿದ್ದರು. ಲಕ್ಷೋಪಲಕ್ಷ ಆರ್‌ಸಿಬಿ ಅಭಿಮಾನಿಗಳು ಬರುವ ಕಾರಣ ನಾಳೆ ಸಂಭ್ರಮಾಚರಣೆಗೆ ಅನುಮತಿ ಕೊಡಲಾಗದು ಎಂದು ಪೊಲೀಸ್ ಅಧಿಕಾರಿಗಳು ಮುಚ್ಚಳಿಕೆ ಬರೆದುಕೊಟ್ಟಿದ್ದರು ಎಂದು ವಿವರಿಸಿದರು.

ಪೊಲೀಸ್ ಇಲಾಖೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿರಲಿಲ್ಲ. ಲಕ್ಷ ಲಕ್ಷ ಜನರು ಬರುವುದು ಗೊತ್ತಿದ್ದು ಹೀಗೆ ಹೇಳಿದ್ದಾರೆ. ಹಾಗಿದ್ದರೆ ರಾಜ್ಯ ಸರಕಾರಕ್ಕೆ ಯಾರು ಅನುಮತಿ ಕೊಟ್ಟರು ಎಂದು ಪ್ರಶ್ನಿಸಿದರು. ವಿಧಾನಸೌಧದ ಬಳಿ ಲಕ್ಷ ಲಕ್ಷ ಜನ ಆರ್‌ಸಿಬಿ ಅಭಿಮಾನಿಗಳು ಬಂದಿದ್ದರು. ಅವರಿಗೆ ಯಾರ ಅನುಮತಿ ಇತ್ತು ಎಂದು ಕೇಳಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅನುಮತಿ ಕೊಟ್ಟಿರಲಿಲ್ಲ. ಕಾನೂನುಬಾಹಿರವಾಗಿ ಕಾರ್ಯಕ್ರಮ ನಡೆದಿದೆ ಎಂದು ಎಫ್‍ಐಆರ್ ಮಾಡಿದ್ದಾರೆ. ಅಲ್ಲಿ ಅನುಮತಿ ಇಲ್ಲದಿದ್ದರೂ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ, ಅಲ್ಲಿ ಸಂಭ್ರಮಾಚರಣೆಯಲ್ಲಿ ಯಾಕೆ ಭಾಗವಹಿಸಿದ್ದರು? ಅಲ್ಲಿ ಕಪ್ ಹಿಡಿದು ಮುತ್ತಿಕ್ಕುವ ಕೆಲಸವನ್ನು ಯಾಕೆ ಮಾಡಿದರು ಎಂದು ಕೇಳಿದರು.

ಸರ್ಕಾರ ಕಿತ್ತು ಹಾಕಬೇಕೆಂಬ ಆಶಯ ಜನಸಾಮಾನ್ಯರದ್ದು..
ಇವತ್ತು ಬೆಳಿಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆ ಬಳಿ ವಾಹನದಲ್ಲಿ ಬರುತ್ತಿದ್ದೆ. ಒಬ್ಬ ಆಟೋ ಚಾಲಕನನ್ನು ಮಾತನಾಡಿಸಿದೆ. ಏನ್ರೀ ವಿರೋಧ ಪಕ್ಷದವರು ನೀವಿದ್ದೀರಿ. ಪಾಪ 11 ಜನ ಅಮಾಯಕರು ಪ್ರಾಣ ಕಳಕೊಂಡಿದ್ದಾರೆ. ಈ ದರಿದ್ರ ಕಾಂಗ್ರೆಸ್ ಸರಕಾರವನ್ನ ನೀವು ಕಿತ್ತು ಹಾಕಬೇಕು ಎಂದು ಅವರು ಹೇಳಿದರು. ಇದು ಜನರ ಈಗಿನ ಆಶಯ ಎಂದು ಬಿ.ವೈ ವಿಜಯೇಂದ್ರ ಅವರು ವಿವರಿಸಿದರು.

ಈ ವಿಜಯೋತ್ಸವ ಸರ್ಕಾರಕ್ಕೆ ಯಾಕೆ ಬೇಕಿತ್ತು ಎಂದು ಕಾಂಗ್ರೆಸ್ಸಿನ ಮುಖಂಡ ಬಿ.ಕೆ ಹರಿಪ್ರಸಾದ್ ಅವರು ಪ್ರಶ್ನಿಸಿದ್ದಾರೆ. ಆರ್‌ಸಿಬಿ ಗೆಲುವು ಸಾಧಿಸಿದೆ ಎಂದು ರಾಜ್ಯ ಸರ್ಕಾರ ಯಾಕೆ ಸಂಭ್ರಮಾಚರಣೆ ಮಾಡಿದೆ ಎಂದು ಕೇಳಿದ್ದಾರೆ. 11 ಜನರ ಸಾವಿಗೆ ರಾಜ್ಯ ಸರ್ಕಾರವೇ ಉತ್ತರಿಸಬೇಕಿದೆ ಎಂದಿದ್ದಾಗಿ ಗಮನ ಸೆಳೆದರು.

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಜೆಡಿಎಸ್ ಸಂಸದ ಎಂ.ಮಲ್ಲೇಶ್ ಬಾಬು, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ಮತ್ತು ಜೆಡಿಎಸ್ ಮುಖಂಡರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯರಾದ ಹೆಚ್.ಎಂ.ರಮೇಶ್ ಗೌಡ, ಆರ್. ಚೌಡ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

TAGGED:BY Vijayendrachinnaswamy stadiumDK Shivakumarrcbsiddaramaiahstampede caseಆರ್‍ಸಿಬಿಕಾಲ್ತುಳಿತ ಪ್ರಕರಣಚಿನ್ನಸ್ವಾಮಿ ಕ್ರೀಡಾಂಗಣಡಿ.ಕೆ.ಶಿವಕುಮಾರ್ಬಿ.ವೈ.ವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
2 minutes ago
S.G. Nanjayyanamath
Districts

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Public TV
By Public TV
16 minutes ago
Anil Chauhan
Latest

ಉತ್ತಮ ಸಂಬಂಧಕ್ಕಾಗಿ ಟಿಬೆಟ್ ಚೀನಾದ ಭಾಗವೆಂದು ಭಾವಿಸಿ ನೆಹರು ಸಹಿ ಹಾಕಿದ್ದರು: ಸಿಡಿಎಸ್ ಅನಿಲ್ ಚೌಹಾಣ್

Public TV
By Public TV
30 minutes ago
Hampi festival Fire breaks out while CM Siddaramaiah is performing puja
Bellary

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವಾಗ ಬೆಂಕಿ, ತಪ್ಪಿತು ಅನಾಹುತ

Public TV
By Public TV
47 minutes ago
Tarique Rahman 1
Latest

ಬಾಂಗ್ಲಾದಲ್ಲಿ ಬಿಎನ್‌ಪಿ ಕ್ಲೀನ್‌ ಸ್ವೀಪ್‌| 20 ವರ್ಷದ ಬಳಿಕ ಅಧಿಕಾರಕ್ಕೆ, ಪ್ರಧಾನಿಯಾಗಲಿದ್ದಾರೆ ಖಲೀದಾ ಜಿಯಾ ಪುತ್ರ

Public TV
By Public TV
1 hour ago
Seva Teerth Narendra Modi 1
Latest

1947ರ ಬಳಿಕ ಫಸ್ಟ್‌ ಟೈಮ್‌ ಹೊಸ ಕಟ್ಟಡಕ್ಕೆ ಪ್ರಧಾನಿ ಕಚೇರಿ ಶಿಫ್ಟ್‌ – ಸೇವಾ ತೀರ್ಥಕ್ಕೆ ಸ್ಥಳಾಂತರ ಯಾಕೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?