Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

Bengaluru City

ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

Public TV
Last updated: June 14, 2025 3:17 pm
Public TV
Share
3 Min Read
BY Vijayendra
SHARE

-ಕಾಲ್ತುಳಿತ ವಿಷಯಾಂತರಕ್ಕೆ ಜಾತಿಗಣತಿ ಪ್ರಸ್ತಾಪ ಎಂದ ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕುಳಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ, ಕುತಂತ್ರ ಮತ್ತು ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಆಕ್ಷೇಪಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಹಳ ದೊಡ್ಡ ಮನಸ್ಸು ಮಾಡಿ, 16ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯದ ಪರವಾಗಿ ವಿಚಾರಮಂಡನೆ ಮಾಡಿದ್ದು, ಅವರಿಗೆ ಅಭಿನಂದನೆಗಳು. ಕೇಂದ್ರದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳಿಗೆ ಮುಜುಗರವೇ, ಇವರು ರಾಜ್ಯದ ಮುಖ್ಯಮಂತ್ರಿಯೇ ಅಥವಾ ಕಾಂಗ್ರೆಸ್ಸಿನ ಮುಖ್ಯಮಂತ್ರಿಗಳೇ. ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿ ಹಣಕಾಸಿನ ವಿಚಾರ ಪ್ರಸ್ತಾಪ ಮಾಡಿ, ಸರಿಪಡಿಸಿ ಎಂದು ಹೇಳಿದ್ದಾರೆ ಎಂದರು.ಇದನ್ನೂ ಓದಿ:ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

ದೆಹಲಿ (Delhi) ಸಭೆಯಲ್ಲಿ ಭಾಗವಹಿಸಿದ್ದು ಸ್ವಾಗತಾರ್ಹ. ಆದರೆ, ಮುಖ್ಯಮಂತ್ರಿಗಳನ್ನು ನೋಡಿದರೆ ಪಾಪ ಅನಿಸುತ್ತದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣ ಕ್ರೋಢೀಕರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಹಾಗಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕರ್ನಾಟಕವು 100 ರೂ. ಕೊಟ್ಟರೆ ಕೇವಲ 13 ರೂ. ಬರುತ್ತಿದೆ ಎಂದು ಅರ್ಧಸತ್ಯವನ್ನಷ್ಟೇ ಅವರು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಬಂದ ಅನುದಾನ ರಾಜ್ಯದಲ್ಲಿ ಸದ್ಬಳಕೆ ಆಗುತ್ತಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ, ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಇದ್ಯಾವುದು ಸತ್ಯವಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

ಜಾತಿಗಣತಿ ವಿಚಾರ- ಈಗ ಜ್ಞಾನೋದಯ:
ನಮ್ಮ ಹೋರಾಟಗಳ ಪರಿಣಾಮವಾಗಿ ಸುಮಾರು 3 ತಿಂಗಳ ಹಿಂದೆ ರಾಜ್ಯ ಸರ್ಕಾರ
ಕ್ಕೆ ಮುಜುಗರ ಆಗುತ್ತಿತ್ತು. ಆ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕಾಂತರಾಜು ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದ್ದರು. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವುದಾಗಿ ಹೇಳಿದರು. 4-5 ಕ್ಯಾಬಿನೆಟ್ ಸಭೆ ಆದರೂ ಅನುಷ್ಠಾನ ಆಗಲಿಲ್ಲ. 10 ವರ್ಷ ಕಳೆದಿದ್ದು, ಅಂಕಿಅಂಶಗಳು ಅವೈಜ್ಞಾನಿಕ, ಇದನ್ನು ತರಾತುರಿಯಲ್ಲಿ ಮಾಡಬಾರದು. ಹೊಸದಾಗಿ ಮಾಡಬೇಕಿದೆ ಎಂಬುವುದರ ಬಗ್ಗೆ ಎಲ್ಲವೂ ಚರ್ಚೆ ನಡೆದಿದೆ ಎಂದರು.

ಇದರ ಕುರಿತು ಕಾಂಗ್ರೆಸ್ಸಿನ ಡಿಕೆಶಿ ಅವರು ಸೇರಿ ಸಚಿವರೂ ವಿರೋಧ ವ್ಯಕ್ತಪಡಿಸಿದ್ದರು. ಇದರ ನಡುವೆ ಈಗ ಅವರಿಗೆ ಜ್ಞಾನೋದಯವಾಗಿದೆ. ಯಾವಾಗ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟರೋ, ಈಗ ವಿಷಯಾಂತರ ಮಾಡಲು ಜಾತಿಗಣತಿ ವಿಷಯ ಪ್ರಸ್ತಾಪಿಸಿದ್ದಾರೆ. ಅಂತಿಮವಾಗಿ ಈ ವಿಷಯದಲ್ಲಿ ಇವರು ಏನೂ ಮಾಡಲು ಸಾಧ್ಯವಿಲ್ಲ. ಕೇಂದ್ರವು ಈಗಾಗಲೇ ಜನಗಣತಿ, ಜಾತಿ ಜನಗಣತಿ ಮಾಡುವುದಾಗಿ ಘೋಷಿಸಿದೆ. ಜಾತಿಗಣತಿಯು ರಾಜ್ಯ ಸರ್ಕಾರದ ಪರಿಮಿತಿಗೆ ಬರುತ್ತದೆಯೇ ಎಂಬ ಅನುಮಾನಗಳು ಹೆಚ್ಚಾಗಿವೆ. ಗೊಂದಲ ಸೃಷ್ಟಿಸಲು ಇದನ್ನು ಮಾಡುತ್ತಿದ್ದಾರೆ. ತಾರ್ಕಿಕ ಅಂತ್ಯಕ್ಕೆ ಒಯ್ಯುವ ಮನಸ್ಸು ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಹೇಳಿದರು.

ಹಿಂದೂಗಳು ಟಾರ್ಗೆಟ್, ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಷಡ್ಯಂತ್ರ:
ಮೊನ್ನೆ ನಮ್ಮ ಪಕ್ಷದ ಮುಖಂಡರ ಜೊತೆಗೂಡಿ ದಕ್ಷಿಣ ಕನ್ನಡಕ್ಕೆ ಭೇಟಿ ಕೊಟ್ಟಿದ್ದೇವೆ. ಅಲ್ಲಿರುವ ಜಿಲ್ಲಾಧಿಕಾರಿಗಳು, ಕಮಿಷನರ್, ಎಸ್ಪಿಯವರನ್ನು ಭೇಟಿ ಮಾಡಿದ್ದೇವೆ. ಇದು ಕೋಮು ನಿಗ್ರಹ ದಳ ಅಲ್ಲ, ಹಿಂದೂಗಳನ್ನು ಟಾರ್ಗೆಟ್ ಮಾಡಿ, ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಷಡ್ಯಂತ್ರ ಈ ದಳ ರಚನೆ ಹಿಂದಿದೆ ಎಂದು ಆರೋಪಿಸಿದರು. ಇದ್ಯಾವುದಕ್ಕೂ ನಾವು ಬಗ್ಗುವುದಿಲ್ಲ. ಈ ರೀತಿ ದಬ್ಬಾಳಿಕೆ ಕುತಂತ್ರವನ್ನು ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದ್ದು, ಅದನ್ನು ಎದುರಿಸುತ್ತೇವೆ ಎಂದರು.ಇದನ್ನೂ ಓದಿ: ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

TAGGED:bengaluruBY VijayendraCaste Censuscm siddaramaiahcongress govtKarnartakaಬಿ.ವೈ.ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories

You Might Also Like

KPTCL
Bengaluru City

ಸಿಎಂ ಸಭೆಗೆ ಗೈರಾಗಿದ್ದ IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಎತ್ತಂಗಡಿ!

Public TV
By Public TV
6 minutes ago
seemanth kumar singh
Bengaluru City

ಎದೆಗೆ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್‌ ಆತ್ಮಹತ್ಯೆ – ಪೊಲೀಸ್‌ ಆಯುಕ್ತರ ಫಸ್ಟ್‌ ರಿಯಾಕ್ಷನ್‌!

Public TV
By Public TV
42 minutes ago
NALAPAD
Bengaluru City

ರಾಯ್ ತಂದೆ ಸ್ಥಾನದಲ್ಲಿದ್ರು – ಭಾವುಕರಾದ ನಲಪಾಡ್‌

Public TV
By Public TV
47 minutes ago
CID Baramati Plane Crash Ajit Pawar
Latest

ಅಜಿತ್ ಪವಾರ್ ಬಲಿ ಪಡೆದ ವಿಮಾನ ಅಪಘಾತದ ತನಿಖೆ ಆರಂಭಿಸಿದ ಸಿಐಡಿ

Public TV
By Public TV
2 hours ago
CJ Roy 2
Bengaluru City

ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್‌ – 1 ಗಂಟೆ ಐಟಿ ವಿಚಾರಣೆ ಬಳಿಕ ಆತ್ಮಹತ್ಯೆ; ಆಗಿದ್ದೇನು?

Public TV
By Public TV
2 hours ago
Young man kills father mother and sister buries them in house in Vijayanagar Kotturu
Bellary

ಅಪ್ಪ, ಅಮ್ಮ, ಸಹೋದರಿಯನ್ನು ಕೊಂದು ಮನೆಯಲ್ಲಿ ಹೂತು ಹಾಕಿದ ಕಟುಕ – ಮಿಸ್ಸಿಂಗ್‌ ಕಂಪ್ಲೇಂಟ್ ಕೊಡಲು ಹೋಗಿ ಸಿಕ್ಕಿಬಿದ್ದ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?