ಶ್ರೀಕಂಠನ ಸನ್ನಿಧಾನದಲ್ಲಿ ಉಪ ಕದನ – ಶ್ರೀನಿವಾಸ್‍ಪ್ರಸಾದ್, ಕಳಲೆ ಕೇಶವಮೂರ್ತಿ ಹಣಾಹಣಿ

Public TV
1 Min Read
KALALE SHRINIVAS

ಮೈಸೂರು: ನಂಜನಗೂಡು ಉಪ ಚುನಾವಣೆಯಲ್ಲಿ ಮತದಾನ ಆರಂಭವಾಗಿದೆ. ಸಚಿವ ಸ್ಥಾನ ಕಳೆದುಕೊಂಡು ಕುಪಿತಗೊಂಡ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ನಂಜನಗೂಡಿನಲ್ಲಿ ಬಿಜೆಪಿಯಿಂದ ಸ್ಫರ್ಧೆಗೆ ಇಳಿದಿದ್ದಾರೆ.

NANJANAGOODU 2

ಸ್ವತಃ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಡೀ ಸರ್ಕಾರವೇ ಪ್ರಚಾರ ನಡೆಸಿದ್ರೆ, ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪಾಳಯ ಪ್ರತಿಷ್ಠೆಯ ಕಣದಲ್ಲಿ ಸವಾಲೊಡ್ಡಿದೆ.

NANJANAGOODU 1

ಬಿಜೆಪಿ ಚಿಹ್ನೆಯ ಅಡಿಯಲ್ಲಿ ಶ್ರೀನಿವಾಸ್‍ಪ್ರಸಾದ್ ಮತ್ತೊಮ್ಮೆ ಅದೃಷ್ಟ ಮತ್ತು ಶಕ್ತಿ ಪ್ರದರ್ಶನಕ್ಕೆ ಇಳಿದಿದ್ದಾರೆ. ಇತ್ತ ಜೆಡಿಎಸ್‍ನಿಂದ ಪಕ್ಷಾಂತರಗೊಂಡಿದ್ದ ಕಳಲೆ ಕೇಶವಮೂರ್ತಿರನ್ನು ಕಾಂಗ್ರೆಸ್ ಅಖಾಡಕ್ಕೆ ಇಳಿಸಿದೆ. ಉಪ ಯುದ್ಧದಿಂದ ಜೆಡಿಎಸ್ ದೂರ ಸರಿದಿದೆ. ಕ್ಷೇತ್ರದಲ್ಲಿ ಒಟ್ಟು 2 ಲಕ್ಷದ 506 ಮತದಾರರಿದ್ದಾರೆ. ಅವರಲ್ಲಿ 1 ಲಕ್ಷದ 1 ಸಾವಿರದ 267 ಮಂದಿ ಪುರುಷರು, 99 ಸಾವಿರದ 231 ಮಹಿಳೆಯರಿದ್ದಾರೆ. ಒಟ್ಟು 236 ಮತಗಟ್ಟೆಗಳಲ್ಲಿ ಮತ ಹಕ್ಕಿನ ಚಲಾವಣೆಯಾಗಲಿದೆ.

KALALE

ಕಳಲೆಯಿಂದ ನೀತಿ ಸಂಹಿತೆ ಉಲ್ಲಂಘನೆ: ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕಳಲೆ ಕೇಶವಮೂರ್ತಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಆದ್ರೆ ಮತದಾನದ ವೇಳೆ ಮತಗಟ್ಟೆಯೊಳಗೆ ಪಕ್ಷದ ಶಾಲು ಧರಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

NANJANAGOODU 4

VOTE

Share This Article
Leave a Comment

Leave a Reply

Your email address will not be published. Required fields are marked *