ದಾವಣಗೆರೆ: ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ (Davangere South Byelection) ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಿಸುತ್ತೇವೆ ಎಂದು ಐವರು ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಬಿಜೆಪಿಯ (BJP) ಎರಡು ಬಣದ ನಾಯಕರು ಒಂದಾಗಿದ್ದಾರೆ. ಐವರು ಆಕಾಂಕ್ಷಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಅಜಯ್ ಕುಮಾರ್, ಯಶವಂತರಾವ್ ಜಾದವ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ್ ದಾಸಕರಿಯಪ್ಪ ಮತ್ತು ದೇವರಮನೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಭಾಗಿಯಯಾಗಿದ್ದರು. ಈ ವೇಳೆ ಯಾರಿಗೆ ಟಿಕೆಟ್ ಕೊಟ್ಟರು ಬಿಜೆಪಿ ಗೆಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ
ಆ ಬಣ ಈ ಬಣ ಅಂತ ಇಲ್ಲ ಎಲ್ಲವು ಸರಿ ಹೋಗಿದೆ ಎಂದು ಪರೋಕ್ಷವಾಗಿ ಬಿ.ಜಿ ವಿಜಯ್ ಕುಮಾರ್ ಅವರಿಗೆ ಇದೇ ವೇಳೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಮೀಟಿಂಗ್ನಲ್ಲಿ ಬಿ.ಜಿ ವಿನಯ್ ಕುಮಾರ್ ಹೆಸರು ಪ್ರಸ್ತಾಪವಾಗಿದೆ ಎನ್ನಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಅವರು ಸ್ಪರ್ಧಿಸಿದ್ದರು. ಇದನ್ನೂ ಓದಿ: ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

