ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿ ಬಳಿಯ ಬೈಪಾಸ್ನಲ್ಲಿ ಸಾರಿಗೆ ಬಸ್ಗೆ ಖಾಸಗಿ ವಾಹನವೊಂದು ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸಾರಿಗೆ ಬಸ್ಸಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶುಕ್ರವಾರ ಈ ಘಟನೆ ನಡೆದಿದೆ. ಹೊಸಪೇಟೆಯಿಂದ ಹಗರಿಬೊಮ್ಮನಹಳ್ಳಿ ಕಡೆಗೆ ಸರ್ಕಾರಿ ಬಸ್ ಹೊರಟಿದ್ದು ಮಾರ್ಗ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದೆ.
- Advertisement 2
- Advertisement 3
ಈ ಘಟನೆ ಪಕ್ಕದ ಹೋಟೆಲ್ನಲ್ಲಿ ಹಾಕಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಲು ಲಾರಿ ಚಾಲಕನ ಅಜಾಗರೂಕತೆ ಕಾರಣ ಎಂದು ಹೇಳಲಾಗಿದೆ. ಇದೇ ಜಾಗದಲ್ಲಿ ಪದೇ ಪದೇ ಅಪಘಾತ ಸಂಭವಿಸುತಿದ್ದು, ಒಂದೇ ವಾರದಲ್ಲಿ ನಡೆದ ಮೂರನೇ ಅಪಘಾತ ಇದಾಗಿದೆ.
- Advertisement 4
ಅಪಘಾತದಿಂದ ಪ್ರಯಾಣಿಕರು ತಮ್ಮ ಪ್ರಾಣ ಕೈಯಲ್ಲಿ ಹಿಡಿದು ಸಂಚಾರ ಮಾಡುವಂತಾಗಿದೆ. ಹೀಗಾಗಿ ಇಲ್ಲಿ ಸೂಕ್ತ ಸಂಚಾರಿ ಫಲಕ ಅಳವಡಿಸಲು ಜನರು ಆಗ್ರಹಿಸಿದ್ದಾರೆ. ಈ ಸಂಬಂಧ ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.