Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಭೂ ಹಗರಣ – ಸಚಿವ ಬೈರತಿ ಬಸವರಾಜು ರಾಜೀನಾಮೆಗೆ ಸಿದ್ದರಾಮಯ್ಯ ಬಿಗಿಪಟ್ಟು

Public TV
Last updated: December 17, 2021 7:16 pm
Public TV
Share
3 Min Read
Siddaramaiah 1
SHARE

ಬೆಳಗಾವಿ: ನಾವು ಚರ್ಚೆಗೆ ಅವಕಾಶ ನೀಡಿದರು, ಸ್ಪೀಕರ್ ಅವಕಾಶ ಕೊಡಲಿಲ್ಲ. ಬೈರತಿ ಬಸವರಾಜು ರಾಜೀನಾಮೆ ಕೊಡಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಕಲಾಪದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಿಯಮ 60ರಡಿ ಸಾರ್ವಜನಿಕ ತುರ್ತಿನ ವಿಚಾರಗಳನ್ನು ಚರ್ಚೆ ನಡೆಸತಕ್ಕದ್ದು ಎಂದು ಸದನದ ನಿಯಮದಲ್ಲಿದೆ. ಇಂದು ನಾನು ಸದನದ ನಿಯಮದಂತೆ ಒಂದು ಗಂಟೆ ಮುಂಚಿತವಾಗಿ ಬೈರತಿ ಬಸವರಾಜ್ ಅವರು ಭಾಗಿಯಾಗಿರುವ ಭೂ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿದ್ದೆ. ಮಾನ್ಯ ಸಭಾಧ್ಯಕ್ಷರು ಮೊದಲು ನನಗೆ ಪ್ರಾಥಮಿಕ ಸಲ್ಲಿಕೆಗೆ ಅವಕಾಶ ನೀಡಿ, ನನ್ನ ಮಾತುಗಳು ಅವರಿಗೆ ತೃಪ್ತಿದಾಯಕವಾಗಿವೆ ಅನ್ನಿಸಿದರೆ ಚರ್ಚೆಗೆ ಅವಕಾಶ ನೀಡಬೇಕು. ಆದರೆ ಇತ್ತೀಚೆಗೆ ನಿಯಮ 60 ರಡಿ ಚರ್ಚೆ ಮಾಡದೆ ಅದನ್ನು ನಿಯಮ 69 ಕ್ಕೆ ಬದಲಾವಣೆ ಮಾಡಿಕೊಂಡು ಚರ್ಚೆಗೆ ಅವಕಾಶ ನೀಡಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಧಾನ ಪರಿಷತ್ ಕಲಾಪದಲ್ಲಿ ಪೊಲೀಸರ ವಿರುದ್ದ ಹಕ್ಕುಚ್ಯುತಿ ಮಂಡನೆ

Byrati Basavaraj 2

ಅಣ್ಣಯ್ಯಪ್ಪ ಎಂಬುವರಿಂದ 2003ರ ಮೇ 21 ರಲ್ಲಿ ಖಾಲಿ ಛಾಪಾ ಕಾಗದಕ್ಕೆ ಸಹಿ ಹಾಕಿಸಿಕೊಂಡು, ಅದೇ ದಿನ 22 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಖರೀದಿ ಮಾಡಲಾಗಿದೆ. ಬೈರತಿ ಬಸವರಾಜು ಅವರು ಈ ನಕಲಿ ದಾಖಲೆ ಸೃಷ್ಟಿ ಕೃತ್ಯದಲ್ಲಿ ಷಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್.ಪುರಂ ಹೋಬಳಿಯ ಕಲ್ಕೆರೆಯಲ್ಲಿರುವ ಈ ಜಮೀನನ್ನು ಬೈರತಿ ಬಸವರಾಜ್ ಅವರು ನಕಲಿ ದಾಖಲೆ ಸೃಷ್ಟಿಸಿ ಖರೀದಿ ಮಾಡಿದ್ದಾರೆ. ಈ ಭೂಮಿಯ ಮೌಲ್ಯ ಕನಿಷ್ಠ 350 – 400 ಕೋಟಿ ರೂಪಾಯಿ ಇದೆ. ದೂರುದಾರರಾದ ಮಾದಪ್ಪ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲು ಮಾಡಿದರು, ನಂತರ ಪೊಲೀಸರು ಬಿ ರಿಪೋರ್ಟ್ ಹಾಕಿದರು. ಇದನ್ನು ಪ್ರಶ್ನಿಸಿ ಮಾದಪ್ಪನವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ಕ್ರಿಮಿನಲ್ ಅಪರಾಧ ಪ್ರಕರಣವೆಂದು ದಾಖಲಿಸಿಕೊಂಡು, ಸಮನ್ಸ್ ಜಾರಿಗೊಳಿಸುವಂತೆ ಆದೇಶಿಸಿದೆ. ಇವುಗಳಲ್ಲಿ ಕೆಲವು ಜಾಮೀನು ರಹಿತ ಅಪರಾಧಗಳಾಗಿವೆ ಎಂದು ವಿವರಿಸಿದರು.

ನಮ್ಮ ಸರ್ಕಾರದ ಅಧಿಕಾರದಲ್ಲಿ ಇದ್ದಾಗ 2016 ರಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಅವರು ಸನದನಲ್ಲಿ ನಿಯಮ 60 ರಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಧರಣಿ ಮಾಡಿದ್ದರು. ಬಿಜೆಪಿಯವರ ಧರಣಿ ನಂತರ ಅಂದಿನ ಸಭಾಧ್ಯಕ್ಷರು ನಿಯಮ 69 ರಡಿ ಚರ್ಚೆಗೆ ಅವಕಾಶ ನೀಡಿದ್ದರು. ಅಂದು ನಾನು ಚರ್ಚೆಗೆ ಸಿದ್ಧನಿದ್ದೇನೆ ಎಂದು ಹೇಳಿದ್ದೆ. ಜಾರ್ಜ್ ಅವರ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ನ್ಯಾಯಾಲಯ ಪ್ರಾಥಮಿಕ ತನಿಖಾ ವರದಿ ಹಾಕುವಂತೆ ಆದೇಶಿಸಿದ ಕೂಡಲೆ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ರೀತಿ ಬೈರತಿ ಬಸವರಾಜ್ ಕೂಡ ಈಗಾಗಲೇ ರಾಜೀನಾಮೆ ಕೊಡಬೇಕಿತ್ತುಮ, ಇಲ್ಲ ಸರ್ಕಾರವೇ ಅವರನ್ನು ವಜಾಗೊಳಿಸಬೇಕಿತ್ತು ಎಂದು ತಿಳಿಸಿದರು.

belagavi session 2

ಬೈರತಿ ಬಸವರಾಜ್ ಸಚಿವ ಸ್ಥಾನದಲ್ಲೇ ಮುಂದುವರೆದರೆ ದೂರುದಾರನಿಗೆ ನ್ಯಾಯ ಸಿಗಲು ಸಾಧ್ಯವೇ? ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕಿದ್ದ ಬಸವರಾಜ ಬೊಮ್ಮಾಯಿ ನಮಗೆ ನೈತಿಕತೆ ಪಾಠ ಮಾಡುತ್ತಿದ್ದಾರೆ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನು ವಾಪಸ್: ನಿರಾಣಿ

ಡಿ.ಕೆ.ರವಿ ಹಾಗೂ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು. ಎರಡೂ ಪ್ರಕರಣದಲ್ಲಿ ಜಾರ್ಜ್ ಅವರು ನಿರಪರಾಧಿ ಎಂದು ವರದಿ ಬಂದಿದೆ. ಇಂತಹ ಪ್ರಕರಣದಲ್ಲೇ ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇಂದು ನನಗೆ ಪ್ರಾಥಮಿಕ ಪ್ರಸ್ತಾಪಕ್ಕೆ ಅವಕಾಶ ನೀಡುವ ಮೊದಲೇ ಸಭಾಧ್ಯಕ್ಷರು ನನ್ನ ನೋಟಿಸ್ ಅನ್ನು ತಿರಸ್ಕಾರ ಮಾಡಿದ್ದಾರೆ. ಮಾತನಾಡಲು ಅವಕಾಶವನ್ನೇ ಕೊಡಲ್ಲ ಅಂದರೆ ನಾವು ಸದನಕ್ಕೆ ಯಾಕೆ ಬರಬೇಕು? ಗಣಪತಿ, ಡಿ.ಕೆ.ರವಿ ಪ್ರಕರಣ ನ್ಯಾಯಾಲಯದಲ್ಲಿತ್ತು, ಆದರೂ ಸದನದಲ್ಲಿ ಚರ್ಚೆ ಮಾಡಲಾಗಿತ್ತು‌. ಈಗಲೂ ನಾವು ಪ್ರಕರಣದ ಮೆರಿಟ್ ಮೇಲೆ ಚರ್ಚೆ ಮಾಡಲ್ಲ. ಆದರೆ ಸಂತ್ರಸ್ತನಿಗೆ ನ್ಯಾಯ ಸಿಗಬೇಕು. ಅಪರಾಧ ಆರೋಪ ಎದುರಿಸುತ್ತಿರುವವರು ಸಚಿವ ಸ್ಥಾನದಲ್ಲಿದ್ದರೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನಮಗಿಲ್ಲ. ನಿಯಮ‌ 60 ರಡಿ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಬೇಡಿಕೆ. ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೆ ಕೈ ಬಿಡುವ ಪ್ರಶ್ನೇಯೇ ಇಲ್ಲ. ಸಮಯಾವಕಾಶದ ಕೊರತೆ ಇದೆ ಎನಿಸಿದರೆ ಸರ್ಕಾರ ಸದನವನ್ನು ಒಂದು ತಿಂಗಳವರೆಗೆ ಮುಂದುವರೆಸಲಿ, ನಾವು ಸದನಕ್ಕೆ ಹಾಜರಾಗಲು ಸಿದ್ಧರಿದ್ದೇವೆ ಎಂದು ಹೇಳಿದರು.

TAGGED:bbyrathi basavarajLand Mafiasiddaramaiahಬೈರತಿ ಬಸವರಾಜ್ಭೂ ಹಗರಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
10 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
13 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
17 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

RCB Team
Cricket

18 ವರ್ಷಗಳ ವನವಾಸ ಅಂತ್ಯ – ಕೊನೆಗೂ ʻಈ ಸಲ ಕಪ್‌ ನಮ್ದುʼ, ಅಭಿಮಾನಿ ದೇವ್ರುಗಳಿಗೆ ಆರ್‌ಸಿಬಿ ಗಿಫ್ಟ್‌

Public TV
By Public TV
46 minutes ago
Siddaramaiah DKshivakumar H.D Kumaraswamy
Cricket

ಈ ಸಲ ಕಪ್ ನಮ್ದು – ಆರ್‌ಸಿಬಿ ದಿಗ್ವಿಜಯಕ್ಕೆ ಸಿದ್ದರಾಮಯ್ಯ, ಡಿಕೆಶಿ, ಹೆಚ್‌ಡಿಕೆ ಅಭಿನಂದನೆ

Public TV
By Public TV
50 minutes ago
03 2
Bengaluru City

RCB Champions | ಈ ಖುಷಿ ನಮ್ಮಿಂದ ತಡೆಯೋಕೆ ಆಗ್ತಿಲ್ಲ – ಅಭಿಮಾನಿ ದೇವ್ರುಗಳಲ್ಲಿ ಮುಗಿಲು ಮುಟ್ಟಿದ ಸಂಭ್ರಮ

Public TV
By Public TV
1 hour ago
virat kohli AB de villiers
Cricket

ನೀನು ಸಾಧಿಸಿಬಿಟ್ಟೆ ಮಚ್ಚಾ: ಕೊಹ್ಲಿ ತಬ್ಬಿಕೊಂಡು ಎಬಿಡಿ ಭಾವುಕ

Public TV
By Public TV
1 hour ago
Kohli 18 Years
Cricket

18 ವರ್ಷ, 18 ಆವೃತ್ತಿ, ನಂ.18 ಜೆರ್ಸಿ – ಹೇಗಿದೆ ಆರ್‌ಸಿಬಿಯ ರೋಚಕ ಇತಿಹಾಸ..?

Public TV
By Public TV
1 hour ago
Vijaya Mallya 1
Cricket

ಈ ಸಲ ಕಪ್ ನಮ್ದೆ – ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?