Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೂ ಹಗರಣ – ಸಚಿವ ಬೈರತಿ ಬಸವರಾಜು ರಾಜೀನಾಮೆಗೆ ಸಿದ್ದರಾಮಯ್ಯ ಬಿಗಿಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಭೂ ಹಗರಣ – ಸಚಿವ ಬೈರತಿ ಬಸವರಾಜು ರಾಜೀನಾಮೆಗೆ ಸಿದ್ದರಾಮಯ್ಯ ಬಿಗಿಪಟ್ಟು

Belgaum

ಭೂ ಹಗರಣ – ಸಚಿವ ಬೈರತಿ ಬಸವರಾಜು ರಾಜೀನಾಮೆಗೆ ಸಿದ್ದರಾಮಯ್ಯ ಬಿಗಿಪಟ್ಟು

Public TV
Last updated: December 17, 2021 7:16 pm
Public TV
Share
3 Min Read
Siddaramaiah 1
SHARE

ಬೆಳಗಾವಿ: ನಾವು ಚರ್ಚೆಗೆ ಅವಕಾಶ ನೀಡಿದರು, ಸ್ಪೀಕರ್ ಅವಕಾಶ ಕೊಡಲಿಲ್ಲ. ಬೈರತಿ ಬಸವರಾಜು ರಾಜೀನಾಮೆ ಕೊಡಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಕಲಾಪದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಿಯಮ 60ರಡಿ ಸಾರ್ವಜನಿಕ ತುರ್ತಿನ ವಿಚಾರಗಳನ್ನು ಚರ್ಚೆ ನಡೆಸತಕ್ಕದ್ದು ಎಂದು ಸದನದ ನಿಯಮದಲ್ಲಿದೆ. ಇಂದು ನಾನು ಸದನದ ನಿಯಮದಂತೆ ಒಂದು ಗಂಟೆ ಮುಂಚಿತವಾಗಿ ಬೈರತಿ ಬಸವರಾಜ್ ಅವರು ಭಾಗಿಯಾಗಿರುವ ಭೂ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿದ್ದೆ. ಮಾನ್ಯ ಸಭಾಧ್ಯಕ್ಷರು ಮೊದಲು ನನಗೆ ಪ್ರಾಥಮಿಕ ಸಲ್ಲಿಕೆಗೆ ಅವಕಾಶ ನೀಡಿ, ನನ್ನ ಮಾತುಗಳು ಅವರಿಗೆ ತೃಪ್ತಿದಾಯಕವಾಗಿವೆ ಅನ್ನಿಸಿದರೆ ಚರ್ಚೆಗೆ ಅವಕಾಶ ನೀಡಬೇಕು. ಆದರೆ ಇತ್ತೀಚೆಗೆ ನಿಯಮ 60 ರಡಿ ಚರ್ಚೆ ಮಾಡದೆ ಅದನ್ನು ನಿಯಮ 69 ಕ್ಕೆ ಬದಲಾವಣೆ ಮಾಡಿಕೊಂಡು ಚರ್ಚೆಗೆ ಅವಕಾಶ ನೀಡಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಧಾನ ಪರಿಷತ್ ಕಲಾಪದಲ್ಲಿ ಪೊಲೀಸರ ವಿರುದ್ದ ಹಕ್ಕುಚ್ಯುತಿ ಮಂಡನೆ

Byrati Basavaraj 2

ಅಣ್ಣಯ್ಯಪ್ಪ ಎಂಬುವರಿಂದ 2003ರ ಮೇ 21 ರಲ್ಲಿ ಖಾಲಿ ಛಾಪಾ ಕಾಗದಕ್ಕೆ ಸಹಿ ಹಾಕಿಸಿಕೊಂಡು, ಅದೇ ದಿನ 22 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಖರೀದಿ ಮಾಡಲಾಗಿದೆ. ಬೈರತಿ ಬಸವರಾಜು ಅವರು ಈ ನಕಲಿ ದಾಖಲೆ ಸೃಷ್ಟಿ ಕೃತ್ಯದಲ್ಲಿ ಷಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್.ಪುರಂ ಹೋಬಳಿಯ ಕಲ್ಕೆರೆಯಲ್ಲಿರುವ ಈ ಜಮೀನನ್ನು ಬೈರತಿ ಬಸವರಾಜ್ ಅವರು ನಕಲಿ ದಾಖಲೆ ಸೃಷ್ಟಿಸಿ ಖರೀದಿ ಮಾಡಿದ್ದಾರೆ. ಈ ಭೂಮಿಯ ಮೌಲ್ಯ ಕನಿಷ್ಠ 350 – 400 ಕೋಟಿ ರೂಪಾಯಿ ಇದೆ. ದೂರುದಾರರಾದ ಮಾದಪ್ಪ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲು ಮಾಡಿದರು, ನಂತರ ಪೊಲೀಸರು ಬಿ ರಿಪೋರ್ಟ್ ಹಾಕಿದರು. ಇದನ್ನು ಪ್ರಶ್ನಿಸಿ ಮಾದಪ್ಪನವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ಕ್ರಿಮಿನಲ್ ಅಪರಾಧ ಪ್ರಕರಣವೆಂದು ದಾಖಲಿಸಿಕೊಂಡು, ಸಮನ್ಸ್ ಜಾರಿಗೊಳಿಸುವಂತೆ ಆದೇಶಿಸಿದೆ. ಇವುಗಳಲ್ಲಿ ಕೆಲವು ಜಾಮೀನು ರಹಿತ ಅಪರಾಧಗಳಾಗಿವೆ ಎಂದು ವಿವರಿಸಿದರು.

ನಮ್ಮ ಸರ್ಕಾರದ ಅಧಿಕಾರದಲ್ಲಿ ಇದ್ದಾಗ 2016 ರಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಅವರು ಸನದನಲ್ಲಿ ನಿಯಮ 60 ರಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಧರಣಿ ಮಾಡಿದ್ದರು. ಬಿಜೆಪಿಯವರ ಧರಣಿ ನಂತರ ಅಂದಿನ ಸಭಾಧ್ಯಕ್ಷರು ನಿಯಮ 69 ರಡಿ ಚರ್ಚೆಗೆ ಅವಕಾಶ ನೀಡಿದ್ದರು. ಅಂದು ನಾನು ಚರ್ಚೆಗೆ ಸಿದ್ಧನಿದ್ದೇನೆ ಎಂದು ಹೇಳಿದ್ದೆ. ಜಾರ್ಜ್ ಅವರ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ನ್ಯಾಯಾಲಯ ಪ್ರಾಥಮಿಕ ತನಿಖಾ ವರದಿ ಹಾಕುವಂತೆ ಆದೇಶಿಸಿದ ಕೂಡಲೆ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ರೀತಿ ಬೈರತಿ ಬಸವರಾಜ್ ಕೂಡ ಈಗಾಗಲೇ ರಾಜೀನಾಮೆ ಕೊಡಬೇಕಿತ್ತುಮ, ಇಲ್ಲ ಸರ್ಕಾರವೇ ಅವರನ್ನು ವಜಾಗೊಳಿಸಬೇಕಿತ್ತು ಎಂದು ತಿಳಿಸಿದರು.

belagavi session 2

ಬೈರತಿ ಬಸವರಾಜ್ ಸಚಿವ ಸ್ಥಾನದಲ್ಲೇ ಮುಂದುವರೆದರೆ ದೂರುದಾರನಿಗೆ ನ್ಯಾಯ ಸಿಗಲು ಸಾಧ್ಯವೇ? ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕಿದ್ದ ಬಸವರಾಜ ಬೊಮ್ಮಾಯಿ ನಮಗೆ ನೈತಿಕತೆ ಪಾಠ ಮಾಡುತ್ತಿದ್ದಾರೆ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನು ವಾಪಸ್: ನಿರಾಣಿ

ಡಿ.ಕೆ.ರವಿ ಹಾಗೂ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು. ಎರಡೂ ಪ್ರಕರಣದಲ್ಲಿ ಜಾರ್ಜ್ ಅವರು ನಿರಪರಾಧಿ ಎಂದು ವರದಿ ಬಂದಿದೆ. ಇಂತಹ ಪ್ರಕರಣದಲ್ಲೇ ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇಂದು ನನಗೆ ಪ್ರಾಥಮಿಕ ಪ್ರಸ್ತಾಪಕ್ಕೆ ಅವಕಾಶ ನೀಡುವ ಮೊದಲೇ ಸಭಾಧ್ಯಕ್ಷರು ನನ್ನ ನೋಟಿಸ್ ಅನ್ನು ತಿರಸ್ಕಾರ ಮಾಡಿದ್ದಾರೆ. ಮಾತನಾಡಲು ಅವಕಾಶವನ್ನೇ ಕೊಡಲ್ಲ ಅಂದರೆ ನಾವು ಸದನಕ್ಕೆ ಯಾಕೆ ಬರಬೇಕು? ಗಣಪತಿ, ಡಿ.ಕೆ.ರವಿ ಪ್ರಕರಣ ನ್ಯಾಯಾಲಯದಲ್ಲಿತ್ತು, ಆದರೂ ಸದನದಲ್ಲಿ ಚರ್ಚೆ ಮಾಡಲಾಗಿತ್ತು‌. ಈಗಲೂ ನಾವು ಪ್ರಕರಣದ ಮೆರಿಟ್ ಮೇಲೆ ಚರ್ಚೆ ಮಾಡಲ್ಲ. ಆದರೆ ಸಂತ್ರಸ್ತನಿಗೆ ನ್ಯಾಯ ಸಿಗಬೇಕು. ಅಪರಾಧ ಆರೋಪ ಎದುರಿಸುತ್ತಿರುವವರು ಸಚಿವ ಸ್ಥಾನದಲ್ಲಿದ್ದರೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನಮಗಿಲ್ಲ. ನಿಯಮ‌ 60 ರಡಿ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಬೇಡಿಕೆ. ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೆ ಕೈ ಬಿಡುವ ಪ್ರಶ್ನೇಯೇ ಇಲ್ಲ. ಸಮಯಾವಕಾಶದ ಕೊರತೆ ಇದೆ ಎನಿಸಿದರೆ ಸರ್ಕಾರ ಸದನವನ್ನು ಒಂದು ತಿಂಗಳವರೆಗೆ ಮುಂದುವರೆಸಲಿ, ನಾವು ಸದನಕ್ಕೆ ಹಾಜರಾಗಲು ಸಿದ್ಧರಿದ್ದೇವೆ ಎಂದು ಹೇಳಿದರು.

TAGGED:bbyrathi basavarajLand Mafiasiddaramaiahಬೈರತಿ ಬಸವರಾಜ್ಭೂ ಹಗರಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories

You Might Also Like

ajit pawar plane crash
Latest

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Public TV
By Public TV
1 minute ago
Bombardier Learjet 45 Ajit Pawars Private Jet
Latest

ಮೂರು ವರ್ಷದ ಒಳಗಡೆ ಎರಡನೇ ಬಾರಿ ವಿಎಸ್‌ಆರ್‌ ಕಂಪನಿಯ ವಿಮಾನ ಪತನ

Public TV
By Public TV
1 hour ago
delta beach boat accident disha death
Latest

ಉಡುಪಿಯ ಪ್ರವಾಸಿ ಬೋಟ್ ದುರಂತ ಕೇಸ್; ಯೂಟ್ಯೂಬರ್ ನಿಶಾ, ಮಧು ಗೌಡ ಸ್ನೇಹಿತೆ ಸಾವು

Public TV
By Public TV
2 hours ago
ajit pawars plane crashes during second landing attempt
Latest

2ನೇ ಬಾರಿ ಲ್ಯಾಂಡಿಂಗ್‌ ಪ್ರಯತ್ನದಲ್ಲಿದ್ದಾಗ ಅಜಿತ್‌ ಪವಾರ್‌ ವಿಮಾನ ಪತನ

Public TV
By Public TV
2 hours ago
sanjay gandhi ajit pawar vijay rupani
Latest

ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾದ ಪ್ರಮುಖ ರಾಜಕಾರಣಿಗಳು..!

Public TV
By Public TV
2 hours ago
Ajit Pawar Dies Plane plane was headed towards the runway but it fell down a 100 feet before it Eyewitness
Latest

Ajit Pawar Dies | ಲ್ಯಾಂಡ್‌ ಆಗಲು ಇನ್ನೇನು 100 ಅಡಿ ಬಾಕಿಯಿದ್ದಾಗ ಪತನಗೊಂಡು ಸ್ಫೋಟ: ಪ್ರತ್ಯಕ್ಷದರ್ಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?