ಅಲ್ಪಸಂಖ್ಯಾತರ ಓಲೈಕೆಗಾಗಿ ಕೈ, ದಳ ನಾಯಕರು RSS ಕುರಿತು ಟೀಕೆ ಮಾಡ್ತಿದ್ದಾರೆ: ಬಿ.ವೈ.ವಿಜಯೇಂದ್ರ

Public TV
1 Min Read
VIJAYENDRA

ಕೊಪ್ಪಳ: ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಆರ್‌ಎಸ್‌ಎಸ್ ಕುರಿತು ಟೀಕೆ ಮಾಡ್ತಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡೋ ಯೋಗ್ಯತೆ ಇವರಲ್ಲಿ ಯಾರಿಗೂ ಇಲ್ಲ ಎಂದು ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Bjp flag 1

ಸಿಂದಗಿ ಉಪಚುಣಾವಣೆ ಹಿನ್ನೆಲೆ ಮಾರ್ಗ ಮಧ್ಯ ಕೊಪ್ಪಳದ ಗವಿಶ್ರೀ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡೋಕೆ ಯೋಗ್ಯತೆ ಇಲ್ಲ. ಅಲ್ಪಸಂಖ್ಯಾತರ ಓಲೈಕೆ ಮಾಡುವುದಕ್ಕಾಗಿ ಹಲವು ದಶಕಗಳಿಂದ ಆರ್‍ಎಸ್‍ಎಸ್ ಸಮಾಜಸೇವೆ ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

RMG Rss A

ಚುನಾವಣೆಯಲ್ಲಿ ಇಂತಹ ಹೇಳಿಕೆಯಿಂದ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿದ್ದಾರೆ. ಈ ತರಹದ ಹೇಳಿಕೆ ಇಂದ ಅವರು ದೊಡ್ಡ ಮನುಷ್ಯರಾಗುತ್ತಾರೆ. ಆದರೆ ಅದು ಅವರ ಮೂರ್ಖತನದ ಪರಮಾವಧಿ. ಕಾಂಗ್ರೆಸ್ ನಾಯಕರು ಹತಾಶೆ ಇಂದ ಹೀಗೆ ಮಾತನಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ಪ್ರಧಾನಿ ಮೋದಿ, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ಕೊಟ್ಟ ಕಾರ್ಯಕ್ರಮಗಳ ಆಧಾರದ ಮೇಲೆ ನಾವು ಮತ ಕೇಳುತ್ತೇವೆ. ಕಾಂಗ್ರೆಸ್ ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಆಸ್ತಿತ್ವ ಕಳೆದಿಕೊಂಡಿದೆ. ಹೀಗಾಗಿ ಹತಾಶರಾಗಿ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಜನರ ಮುಂದೆ ಹೇಳೋ ಯಾವುದೇ ಕಾರ್ಯಕ್ರಮ ಕಾಂಗ್ರೆಸ್ ಕೊಟ್ಟಿಲ್ಲ. ಹೀಗಾಗಿ ಬಿಜೆಪಿ ವಿರುದ್ಧ ಟೀಕೆ ಮಾಡಿತ್ತಿದ್ದಾರೆ. ಇದು ಅವರಿಗೆ ಶೋಭೆ ತರೋದಿಲ್ಲ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ಮಾಡಿದರು. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – 88ಕ್ಕೆ ಏರಿದ ಸಾವಿನ ಪ್ರಮಾಣ

Share This Article
Leave a Comment

Leave a Reply

Your email address will not be published. Required fields are marked *