2ಎ ಮೀಸಲಾತಿ ನೀಡಲು ಕಾನೂನಿನ ಅಡೆತಡೆ ಇದೆ: ಸಿ.ಸಿ. ಪಾಟೀಲ್

Public TV
1 Min Read
cc patil 2

ಹಾವೇರಿ: ಪಂಚಮಸಾಲಿಗಳಿಗೆ ಮಿಸಲಾತಿ ಕೊಡಲು ಜಾಗ ಖಾಲಿ ಇಲ್ಲ. ಮೀಸಲಾತಿ ಕೊಡಲು ಕಾನೂನಿನ ಅಡೆತಡೆ ಇದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಖಾಸಗಿ ಹೊಟೆಲ್‍ನಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಸಂಧಾನ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜಕ್ಕೆ ಮೀಸಲಾತಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ತರಾತುರಿಯಲ್ಲಿ ಮೀಸಲಾತಿ ಘೋಷಣೆ ಮಾಡಲು ಬರುವುದಿಲ್ಲ. ದೇಶದ ಎರಡು ರಾಜ್ಯಗಳಲ್ಲಿ ತರಾತುರಿಯಲ್ಲಿ ಮೀಸಲಾತಿ ಘೋಷಣೆ ಮಾಡಿದ್ದರ ಪರಿಸ್ಥಿತಿ ಏನಾಗಿದೆ ನಿಮಗೆಲ್ಲ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ

chennamma

ಸಿಎಂ ಬೊಮ್ಮಾಯಿ ಅವರು ಸಮಾಜದ ಪರವಾಗಿದ್ದಾರೆ. ಸಿಎಂ ಮೇಲೆ ಸಂವಿಧಾನಾತ್ಮಕವಾಗಿ ಜವಾಬ್ದಾರಿ ಇದೆ. ಮೀಸಲಾತಿ ಕೊಡುತ್ತಾರೆ. ಹೋರಾಟ ಮಾಡೋದು ಬೇಡ ಅಂತಾ ಸ್ವಾಮೀಜಿಯವರ ಜೊತೆ ಚರ್ಚೆ ಮಾಡಿದ್ದೇನೆ. ಹೋರಾಟ ಕೈ ಬಿಡುವಂತೆ ಸ್ವಾಮೀಜಿಯವರಿಗೆ ಮನವಿ ಮಾಡಿದ್ದೇನೆ. ಸ್ವಾಮೀಜಿಯವರು ಇಂದಿನ ಹೋರಾಟ ಮುಂದೂಡುವುದಾಗಿ ಹೇಳಿದ್ದಾರೆ. ಸಾಂಕೇತಿಕವಾಗಿ ಕಿತ್ತೂರು ಚೆನ್ನಮ್ಮಗೆ ಮಾಲೆ ಹಾಕಿದ್ದಾರೆ ಎಂದರು. ಇದನ್ನೂ ಓದಿ: ಆಗಸ್ಟ್‌ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *