ಬೆಂಗಳೂರು: ಅಭಿಮಾನಿಗಳ ದೃಷ್ಟಿಯಲ್ಲಿ ಹುಲಿಯಾ, ಮತದಾರರ ದೃಷ್ಟಿಯಲ್ಲಿ ಇಲಿಯಾ ಎಂದು ಸಚಿವ ಸಿಟಿ ರವಿ ಅವರು ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಟಾಂಗ್ ಕೊಟ್ಟಿದ್ದಾರೆ.
ಇಂದು ಉಪಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಮತ ಏಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಸದ್ಯ 11 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, 1 ಕ್ಷೇತ್ರದಲ್ಲಿ ಭಾರೀ ಅಂತರದಲ್ಲಿ ಗೆಲವು ಸಾಧಿಸಿದೆ. ಇದೇ ಬೆನ್ನಲ್ಲೇ ಸಿಟಿ ರವಿ ಅವರು ಟ್ವೀಟ್ ಮಾಡಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ. ಪ್ರಚಾರದ ವೇಳೆ ಉಪಚುನಾವಣೆಯಲ್ಲಿ ಗೆಲವು ನಮ್ಮದೇ ಎಂದು ಹೇಳುತ್ತಿದ್ದ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಿರುವ ಹಿನ್ನೆಲೆ ಅಭಿಮಾನಿಗಳ ದೃಷ್ಟಿಯಲ್ಲಿ ಹುಲಿಯಾ, ಮತದಾರರ ದೃಷ್ಟಿಯಲ್ಲಿ ಇಲಿಯಾ ಎಂದು ಸಿಟಿ ರವಿ ಟೀಕಿಸಿದ್ದಾರೆ.
ಅಭಿಮಾನಿ ದೃಷ್ಟಿಯಲ್ಲಿ ಹುಲಿಯಾ . . .
ಮತದಾರರ ದೃಷ್ಟಿಯಲ್ಲಿ ಇಲ್ಲಿಯಾ ! ! !#BJPSweepsKarnataka
— C T Ravi ???????? ಸಿ ಟಿ ರವಿ (@CTRavi_BJP) December 9, 2019
ಇತ್ತೀಚೆಗಷ್ಟೇ ಕಾಗವಾಡ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ `ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕೊಟ್ರು’ ಎಂದು ಹೇಳಿದ್ದರು. ಇದೇ ಸಂದರ್ಭದಲ್ಲಿ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ `ಹೌದು ಹುಲಿಯಾ’ ಎಂದಿದ್ದರು. ಸದ್ಯ ಕುಡುಕನ `ಹೌದು ಹುಲಿಯಾ’ ಡೈಲಾಗ್ ಈಗ ಸಖತ್ ಟ್ರೆಂಡ್ ಆಗಿದೆ.
ಇದೇ ಡೈಲಾಗ್ ಇಟ್ಟುಕೊಂಡು ಸಿಟಿ ರವಿ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ಟ್ವೀಟ್ ಮಾಡಿ ಸಚಿವರು ಟಾಂಗ್ ಕೊಟ್ಟಿದ್ದಾರೆ.