ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಬಡ್ಡಿ ಸಮೇತ ಚುಕ್ತಾ ಮಾಡ್ತೀವಿ: ಸಿ.ಟಿ.ರವಿ

Public TV
1 Min Read
C.T.Ravi

ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಾತ್ಕಾಲಿಕ ಯಶಸ್ಸು ಕಂಡಿದ್ದರೂ ನಾವು ಬೇರೆ ಬೇರೆ ರಾಜ್ಯಗಳಲ್ಲಿ ಬಡ್ಡಿ ಸಮೇತ ಚುಕ್ತಾ ಮಾಡುವ ಮೂಲಕ ಉತ್ತರ ನೀಡುತ್ತೇವೆ ಎಂದು ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಬಿಬಿಎಂಪಿ ಮೇಯರ್ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್-ಜೆಡಿಎಸ್ ಅಲ್ಲಿಯೂ ಮೈತ್ರಿ ಮಾಡಿಕೊಂಡು ನಮ್ಮನ್ನು ಅಧಿಕಾರದಿಂದ ದೂರವಿಟ್ಟಿದೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅವರಿಗೆ ಬಡ್ಡಿ ಸಮೇತ ಚುಕ್ತಾ ಮಾಡುತ್ತೇವೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಹಾಗೂ ಜೆಪಿಎಸ್ ಮೈತ್ರಿ ಪ್ರಜಾಪ್ರಭುತ್ವದ ಅಪಹಾಸ್ಯ. ಚುನಾವಣೆಯಲ್ಲಿ ಪರಸ್ಪರ ವಾಗ್ದಾಳಿ ನಡೆಸಿ, ಈಗ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ಈ ಸಮ್ಮಿಶ್ರ ಸರ್ಕಾರ ಜನಮತಕ್ಕೆ ವಿರೋಧವಾಗಿದ್ದು, ಪ್ರಜಾಪ್ರಭುತ್ವದ ಸುಧಾರಣೆಗೆ ಇದು ಮಾರಕವಾಗಿದೆ. ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಸುಧಾರಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

CT RAVI

Share This Article
Leave a Comment

Leave a Reply

Your email address will not be published. Required fields are marked *