Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

GST ನೋಟಿಸ್‌ ಕೊಟ್ಟ ಕೋತಿ ಕೆಲಸ ರಾಜ್ಯ ಸರ್ಕಾರದ್ದು- ನೋಟಿಸ್ ವಾಪಸ್ ಪಡೆಯಬೇಕು: ಸಿ.ಟಿ.ರವಿ

Public TV
Last updated: July 22, 2025 5:31 pm
Public TV
Share
3 Min Read
ct ravi 3
SHARE

-‌ ಜಿಎಸ್‌ಟಿ ನೋಟಿಸ್ ವಿರುದ್ಧ ಸಣ್ಣ ವರ್ತಕರ ಪ್ರತಿಭಟನೆಗೆ ಬಿಜೆಪಿ ಬೆಂಬಲ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುವ ಮೂಲಕ ಡಿಜಿಟಲ್ ಇಂಡಿಯಾ ಅನ್ನು ಹಿಮ್ಮೆಟ್ಟಿಸುವುದಕ್ಕೆ ಷಡ್ಯಂತ್ರ ಮಾಡಿದೆ ಎಂಬ ಅನುಮಾನ ಉಂಟಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (C.T.Ravi) ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಐ ಪಾವತಿಯಲ್ಲಿ ಜಾಗತಿಕ ದಾಖಲೆ ಬರೆದಿದೆ. ಆದರೆ ಕಾಂಗ್ರೆಸ್ ಸರ್ಕಾರದವರು ಜನರಿಗೆ ಆತಂಕ ಮತ್ತು ಭಯದ ವಾತಾವರಣ ನಿರ್ಮಿಸಿದ್ದಾರೆ. ಅಂದರೆ ಕೇಂದ್ರದ ಸರ್ಕಾರದ ಡಿಜಿಟಲ್ ವಹಿವಾಟು ಯೋಜನೆಯ ಪ್ರಯತ್ನಕ್ಕೆ ಭಯ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ನೋಟಿಸ್ ಪರಿಣಾಮದಿಂದ ಸಣ್ಣ ವ್ಯಾಪಾರಿಗಳು ಭಯಗೊಂಡು ಯುಪಿಐ ಪಾವತಿ ಇಲ್ಲ. ನಗದು ಮಾತ್ರ ಎಂದು ಬೋರ್ಡ್ ಹಾಕಿದ್ದಾರೆ. ಭಯಪಡಿಸಿದ ಪರಿಣಾಮ ಮಧ್ಯವರ್ತಿಗಳು ಮತ್ತು ಕೆಲವು ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿರುವ ದೂರು ಕೂಡ ಬಂದಿದೆ. ಆದಕಾರಣ ರಾಜ್ಯ ತೆರಿಗೆ ಇಲಾಖೆ ನೀಡಿರುವ ನೋಟಿಸನ್ನು ಸರ್ಕಾರ ಹಿಂಪಡೆದು ಭಯದ ವಾತಾವರಣದಿಂದ ಸಣ್ಣ ವ್ಯಾಪಾರಿಗಳನ್ನು ಪಾರು ಮಾಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಬೆಂಗಳೂರಿನ ನಂದಿನಿ ಬೂತ್‌ಗೆ 1 ಕೋಟಿ 3 ಲಕ್ಷ ಟ್ಯಾಕ್ಸ್!

GST 1

ರಾಜ್ಯ ಸರ್ಕಾರದ್ದೇ ಕೋತಿಯ ಪಾತ್ರ
ತೆರಿಗೆ ಸಂಗ್ರಹವನ್ನು ಹೆಚ್ಚಿಸುವ ಸಲುವಾಗಿ ಹಣಕಾಸು ಇಲಾಖೆಯ ಸಭೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ನಿರ್ದೇಶನ ಕೊಟ್ಟಿದ್ದಾರೆ. ಸಿದ್ದರಾಮಯ್ಯ ನಿರ್ದೇಶನದ ಮೇಲೆಯೆ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಉಪ ಮುಖ್ಯಮಂತ್ರಿಗಳು ಹೇಳಿದ ರೀತಿಯಲ್ಲಿ ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದ ಹಾಗೆ ಇದೆ. ಆದರೆ, ಇಲ್ಲಿ ಕೋತಿ ಯಾರು ಎಂದು ಸಿಟಿ ರವಿ ಪ್ರಶ್ನಿಸಿದರು.

ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ದು, ಇದರಲ್ಲಿ ಕೇಂದ್ರವನ್ನು ಏಕೆ ದೂರುತ್ತಿದ್ದೀರಿ ಎಂದು ಕೇಳಿದರು. ಇಲ್ಲಿ ಕೋತಿ ಕೆಲಸವನ್ನು ಮಾಡಿರುವುದು ನೀವು ಕೇಂದ್ರದ ಮೇಲೆ ತಪ್ಪು ಬರುವ ರೀತಿಯಲ್ಲಿ ನಿಮ್ಮ ಹೇಳಿಕೆಗಳು ತಪ್ಪು ಸಂದೇಶ ಕೊಡುತ್ತಿವೆ. ಅಲ್ಲಿಗೆ ಕೋತಿ ಕೆಲಸ ಮಾಡಿರುವುದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಂದು ಬಹಳ ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ವೈರಲ್‌ ಮಾಡಿ ಕಿರುಕುಳ – ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ

ಇಡೀ ದೇಶದಲ್ಲಿ ಸಣ್ಣ ವ್ಯಾಪಾರಸ್ಥರಿಗೆ ನೋಟಿಸ್ ಹೋಗಿಲ್ಲ. ಕರ್ನಾಟಕದಲ್ಲಿ ಮಾತ್ರ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಹೋಗಿದೆ. ಕೇರಳ, ಮಹಾರಾಷ್ಟ್ರ ಸೇರಿ ಎಲ್ಲಾ ಕಡೆ ನೋಟಿಸ್ ನೀಡಿದ್ದರೆ ಕೇಂದ್ರ ತೆಗೆದುಕೊಂಡಿರುವ ತೀರ್ಮಾನವೆಂದು ನೀವು ಆರೋಪ ಮಾಡಿದರೆ ಅದನ್ನು ಒಪ್ಪಬಹುದಾಗಿತ್ತು. ಮಹಾರಾಷ್ಟ್ರದಲ್ಲಿ ಸಣ್ಣ ವ್ಯಾಪಾರಿಗಳು, ಹೂವು, ತರಕಾರಿ, ಊಟದ ಗಾಡಿ, ಮಾಂಸವನ್ನು ಮಾರಾಟ ಮಾಡುವವರು ಇಂತಹವರಿಗೆ ನೋಟಿಸ್ ಹೋಗಿಲ್ಲ. ಕರ್ನಾಟಕದಲ್ಲಿ ಏಕೆ ನೋಟಿಸ್ ನೀಡಿದ್ದಾರೆ ಎಂದು ಪ್ರಶ್ನಿಸಿದರು.

DK SHIVAKUMAR SIDDARAMAIAH 1

ಸೇವಾ ವಲಯಕ್ಕೆ ತೆರಿಗೆ ವಿನಾಯಿತಿ ಇರುವಂತದ್ದು ವಾರ್ಷಿಕ ವಹಿವಾಟು ಒಂದೂವರೆ ಕೋಟಿ ರೂ. ಮೀರಿದರೆ ಶೇ.1 ರಷ್ಟು ತೆರಿಗೆ. ಅದರಲ್ಲೂ ಶೇ.1 ರಲ್ಲಿ ಕೇಂದ್ರದ ಜಿಎಸ್‍ಟಿ ಶೇ.0.5 ರಷ್ಟು ಹೋದರೆ ರಾಜ್ಯದ ಎಸ್‍ಜಿಎಸ್‍ಟಿಗೆ ಶೇ.0.5 ರಷ್ಟು ಪಾವತಿಸುವ ಬಗ್ಗೆ ಪತ್ರಿಕೆಯಲ್ಲಿ ವಿವರವಾಗಿ ನಮೂದಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಕೇಂದ್ರದ ನೀತಿಯ ಪರಿಣಾಮವೆಂದು ಏಕೆ ಆರೋಪ ಹೊರಿಸುತ್ತೀರಿ ಎಂದು ಕೇಳಿದರು.

ನಿಮ್ಮ ಸರ್ಕಾರದ ಎಡವಟ್ಟು ಎಂದು ಮೊದಲು ಒಪ್ಪಿಕೊಳ್ಳಿ. ನೀವು ಕೊಟ್ಟಿರುವ ನೋಟಿಸ್ ವಾಪಸ್ ತೆಗೆದುಕೊಳ್ಳಿ ಎಂದು ಒತ್ತಾಯಿಸಿದರು. ಸಣ್ಣ ವ್ಯಾಪಾರಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ, ಸದರಿ ಪ್ರತಿಭಟನೆಗೆ ನಮ್ಮ ನೈತಿಕ ಬೆಂಬಲವಿದೆ. ಬಿಜೆಪಿ ಮುಖಂಡರು ಕೂಡ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು.

ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಒಪ್ಪಿಕೊಳ್ಳಿ
ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ರಾಜಮಾರ್ಗಗಳು ಇವೆ. ಅದನ್ನು ಬಿಟ್ಟು ಸಣ್ಣ ವ್ಯಾಪಾರಿಗಳಿಗೆ ಬರೆಹಾಕುವ ಕೆಲಸವನ್ನು ಮಾಡಬೇಡಿ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಒಪ್ಪಿಕೊಳ್ಳಿ ಎಂದು ಸಿ.ಟಿ. ರವಿ ಒತ್ತಾಯಿಸಿದರು. ಬೆಂಗಳೂರು ಐಟಿ ವಲಯದ ರಾಜಧಾನಿ. ಈ ಐಟಿ ವಲಯಕ್ಕೆ ಡಿಜಿಟಲ್ ಪಾವತಿ ಮಾದರಿಯಾಗಿತ್ತು. ತರಕಾರಿ ವ್ಯಾಪಾರ ಮಾಡುವವರು ಡಿಜಿಟಲ್‍ನಲ್ಲಿ ಪಾವತಿ ಮಾಡಿಕೊಳ್ಳುತ್ತಾರೆ ಎಂದು ಅಂತರಾಷ್ಟ್ರೀಯ ಸುದ್ದಿಯಾಗಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್ ಸರ್ಕಾರ ಭಯಪಡಿಸುವ ನಿರ್ಧಾರದಿಂದ ವಾಪಸ್ ಸರಿಯಬೇಕು ಎಂದು ಆಗ್ರಹಿಸಿದರು.

TAGGED:bengaluruc t ravicongress govtgstkarnatakaShopkeeperstaxಜಿಎಸ್‍ಟಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema Updates

Ramya 3
Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ
Bengaluru City Cinema Latest Main Post Sandalwood
NIVEDITHA DANCE
ರಜತ್ ಜೊತೆ ನಿವೇದಿತಾ ಗೌಡ `ಲಕ ಲಕ ಮೋನಿಕಾ’
Cinema Latest Sandalwood Top Stories
Brat
ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ
Cinema Latest Sandalwood Top Stories
Saiyaara
200 ಕೋಟಿ ಕ್ಲಬ್ ಸೇರಿದ ಸೆನ್ಸೇಷನ್ `ಸೈಯಾರ’
Bollywood Cinema Latest Top Stories
Pratham 01
ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌
Bengaluru City Chikkaballapur Cinema Crime Districts Karnataka Latest Main Post Sandalwood

You Might Also Like

Ind vs Eng 1
Cricket

ಗಿಲ್‌, ರಾಹುಲ್‌ ಶತಕದ ಜೊತೆಯಾಟ – ಭಾರತಕ್ಕೆ 137 ರನ್‌ಗಳ ಹಿನ್ನಡೆ, ಡ್ರಾನತ್ತ ತಿರುಗುತ್ತಾ ಪಂದ್ಯ?

Public TV
By Public TV
3 hours ago
Narendra Modi 5
Latest

ತಮಿಳುನಾಡಿನಲ್ಲಿ 4,800 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Public TV
By Public TV
4 hours ago
Satish Jarkiholi 2
Dharwad

ನಾನು ಸಿಎಂ ಆಗೋಕೆ ಗುರು ಬಲ ಬೇಕು, ಶನಿಕಾಟ ಕಡಿಮೆ ಆಗ್ಬೇಕು: ಸತೀಶ್ ಜಾರಕಿಹೊಳಿ

Public TV
By Public TV
4 hours ago
Dharmasthala 4
Latest

ಧರ್ಮಸ್ಥಳ ಫೈಲ್ಸ್‌ | ತನಿಖೆಗಿಳಿದ ಎಸ್‌ಐಟಿ – 8 ತಾಸು ದೂರುದಾರನ ವಿಚಾರಣೆ

Public TV
By Public TV
4 hours ago
KRS
Districts

ಕೆಆರ್‌ಎಸ್ ಡ್ಯಾಂನಿಂದ 50 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ

Public TV
By Public TV
4 hours ago
B R Gavai 2
Latest

ನಿವೃತ್ತಿ ನಂತರ ಯಾವ್ದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಬಿಆರ್ ಗವಾಯಿ ಶಪಥ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?