ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನು (CAA) ಜಾರಿ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದ್ದು, ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಈ ನಡುವೆ ಮಾತನಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನೆರೆ ರಾಷ್ಟ್ರಗಳಲ್ಲಿರುವ ಜನರನ್ನು ಭಾರತಕ್ಕೆ ಕರೆತರಲಾಗುತ್ತಿದೆ ಎಂದು ಆರೋಪಿಸಿದರು.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಎ ಈಶಾನ್ಯ ರಾಜ್ಯಗಳಿಗೆ ಹೆಚ್ಚಿನ ಹಾನಿಯನ್ನುಂಟು ಮಾಡುತ್ತದೆ. ಇತರ ದೇಶಗಳು ಹೊರಗಿನವರು ಬರುವುದನ್ನು ನಿಲ್ಲಿಸುತ್ತವೆ. ಆದರೆ ಬಿಜೆಪಿ ಚುನಾವಣಾ ಲಾಭಕ್ಕಾಗಿ ಸಿಎಎ ತಂದಿದೆ. ತಮ್ಮ ದೇಶದ ಹಕ್ಕುಗಳನ್ನು ಪಾಕಿಸ್ತಾನಿಗಳಿಗೆ ನೀಡುತ್ತಿದ್ದಾರೆ. ಸಿಎಎ ಹಿಂಪಡೆಯಬೇಕು ಎಂದು ದೇಶ ಒತ್ತಾಯಿಸುತ್ತಿದೆ ಎಂದರು. ಇದನ್ನೂ ಓದಿ: ಸಿಎಎ ವಿಷಯದಲ್ಲಿ ನಟ ವಿಜಯ್ ಗೆ ಟಾಂಗ್ ಕೊಟ್ಟ ಕಂಗನಾ
- Advertisement 2-
- Advertisement 3-
ದೇಶದ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ಸರಿಯಾಗಿ ಕೆಲಸ ಮಾಡಿದ್ದರೆ. ಚುನಾವಣೆಗೆ ಮುನ್ನ ಸಿಎಎ ತರುವ ಅಗತ್ಯವಿರಲಿಲ್ಲ. ಭಾರತದಲ್ಲಿ ಹಣದುಬ್ಬರವು ಏರಿದೆ. ನಿರುದ್ಯೋಗ ಉತ್ತುಂಗದಲ್ಲಿದೆ. ಯುವಕರು ಉದ್ಯೋಗಕ್ಕಾಗಿ ಪರದಾಡುವ ಸನ್ನಿವೇಶ ನಿರ್ಮಾಣವಾಗಿದೆ. ಈ ನಡುವೆ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಅಲ್ಪಸಂಖ್ಯಾತರು ಭಾರತೀಯ ಪೌರತ್ವ ಪಡೆಯಲು ಬಯಸಿದರೆ, ಅವರಿಗೂ ಪೌರತ್ವ ನೀಡಲಾಗುವುದು ಎಂದು ಕೇಂದ್ರದ ಬಿಜೆಪಿ ಸರ್ಕಾರ ಹೇಳುತ್ತದೆ. ಇದರರ್ಥ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ದೇಶಕ್ಕೆ ಕರೆತರುವ ಯೋಜನೆಯಾಗಿದೆ. ಮಾಹಿತಿ ಪ್ರಕಾರ ಸುಮಾರು 2.5 ಕೋಟಿಯಿಂದ 3 ಕೋಟಿ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲಾಗುತ್ತಿದೆ. ಅಂದರೆ ಅವರನ್ನು ಕರೆತಂದು ಉದ್ಯೋಗ ನೀಡಿ ಮನೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದರು.
- Advertisement 4-
ಬಿಜೆಪಿಯವರಿಗೆ ಇಲ್ಲಿರುವ ನಮ್ಮ ಮಕ್ಕಳಿಗೆ ಕೆಲಸ ಕೊಡಲು ಸಾಧ್ಯವಿಲ್ಲ. ಆದರೆ ಪಾಕಿಸ್ತಾನದಿಂದ ಬರುವ ಮಕ್ಕಳಿಗೆ ಕೆಲಸ ಕೊಡಲು ಬಯಸುತ್ತಾರೆ. ನಮ್ಮ ಅನೇಕ ಜನರು ನಿರಾಶ್ರಿತರಾಗಿದ್ದಾರೆ. ಆದರೆ ಬಿಜೆಪಿ ಪಾಕಿಸ್ತಾನದಿಂದ ಬರುವ ಜನರನ್ನು ಇಲ್ಲಿ ನೆಲೆ ನೀಡಲು ಬಯಸುತ್ತದೆ. ಅವರು ನಮ್ಮ ಕೆಲಸವನ್ನು ವಿದೇಶಿ ಮಕ್ಕಳಿಗೆ ನೀಡಲು ಬಯಸುತ್ತಾರೆ. ಪಾಕಿಸ್ತಾನಿಗಳನ್ನು ನಮ್ಮ ಹಕ್ಕಿನ ಮನೆಗಳಲ್ಲಿ ನೆಲೆಸಲು ಬಿಜೆಪಿ ನಾಯಕರು ಬಯಸುತ್ತಾರೆ. ಭಾರತ ಸರ್ಕಾರದ ಬಳಿ ಇರುವ ಹಣವನ್ನು ನಮ್ಮ ಕುಟುಂಬ ಮತ್ತು ದೇಶದ ಅಭಿವೃದ್ಧಿಗೆ ಬಳಸಬೇಕು. ಆದರೆ ಪಾಕಿಸ್ತಾನಿಗಳನ್ನು ನೆಲೆಗೊಳಿಸಲು ಇದನ್ನು ಬಳಸಲಾಗುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತದ ಪ್ರತಿಯೊಬ್ಬ ಮುಸ್ಲಿಮರೂ ಸಿಎಎಯನ್ನು ಸ್ವಾಗತಿಸಬೇಕು: ಮುಸ್ಲಿಂ ಜಮಾತ್ ಅಧ್ಯಕ್ಷ ಕರೆ