ಸಚಿವ ಸಂಪುಟಕ್ಕೆ ಮುಹೂರ್ತ ಫಿಕ್ಸ್

Public TV
1 Min Read
BSY Amit

ನವದೆಹಲಿ: ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪವರ ಸಂಪುಟ ರಚನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಇಂದು ಸಂಜೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರನ್ನು ಸಿಎಂ ಯಡಿಯೂರಪ್ಪನವರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ರಾಜ್ಯ ಸಂಪುಟ ರಚನೆಗೆ ಅಮಿತ್ ಶಾ ಕೊನೆಗೂ ಹಸಿರು ನಿಶಾನೆ ತೋರಿಸಿದ್ದಾರೆ. ಇದೇ ಮಂಗಳವಾರ ಅಂದ್ರೆ ಆಗಸ್ಟ್ 20ರಂದು ಹೈಕಮಾಂಡ್ ಸಂಪುಟ ರಚನೆಗೆ ಸಮಯವನ್ನು ನಿಗದಿ ಮಾಡಿದೆ. ಅಂದು ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯ ಬಳಿಕ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಮೊದಲ ಬಾರಿಗೆ 16ರಿಂದ 18 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಭೇಟಿಯ ವೇಳೆ ಯಡಿಯೂರಪ್ಪನವರು ತಾವು ಸಿದ್ಧಪಡಿಸಿಕೊಂಡಿದ್ದ ಮಂತ್ರಿ ಸ್ಥಾನದ ಆಕಾಂಕ್ಷಿಗಳು ಪಟ್ಟಿಯನ್ನು ಅಮಿತ್ ಶಾವರಿಗೆ ಮತ್ತೊಮ್ಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇತ್ತ ಅಮಿತ್ ಶಾ ಯಾರನ್ನು, ಯಾವ ಕಾರಣಕ್ಕೆ, ಯಾವ ಸ್ಥಾನ ನೀಡಬೇಕೆಂಬ ವಿಚಾರವನ್ನು ಯಡಿಯೂರಪ್ಪನವರಿಗೆ ತಿಳಿಸಿದ್ದಾರೆ. ಭಾನುವಾರ ಅಥವಾ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ನಾಯಕರ ಪಟ್ಟಿಯನ್ನು ಅಮಿತ್ ಶಾ ರವಾನಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ.

Share This Article
Leave a Comment

Leave a Reply

Your email address will not be published. Required fields are marked *