Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್‌ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್‌ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು

Districts

ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್‌ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು

Public TV
Last updated: October 5, 2024 11:34 am
Public TV
Share
3 Min Read
siddaramaiah 1 2
SHARE

– ಮುಡಾ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮುನ್ನೆಲೆಗೆ ಬಂದ ಜಾತಿಗಣತಿ ವರದಿ
– ಮುಂದಿನ ವಾರ ನಡೆಯಲಿರುವ ಕ್ಯಾಬಿನೆಟ್‌ ಸಭೆಯಲ್ಲಿ ಚರ್ಚೆ ಸಾಧ್ಯತೆ

ಬೆಂಗಳೂರು: ಮುಡಾ (MUDA) ಬಿಕ್ಕಟ್ಟಿನ ನಡುವೆಯೇ ಜಾತಿ ಜನಗಣತಿ (Caste Census) ವರದಿಯನ್ನು ಜಾರಿ ಮಾಡಲು ಒತ್ತಡ ಹೆಚ್ಚಾಗಿದ್ದು ಮತ್ತೆ ಕಾಂಗ್ರೆಸ್‌ನಲ್ಲಿ (Congress) ಪರ-ವಿರೋಧಕ್ಕೆ ವೇದಿಕೆ ಸಜ್ಜಾಗಿದೆ.

ಸೋಮವಾರದಿಂದ ಜಾತಿ ಜನಗಣತಿ ಅಭಿಯಾನಕ್ಕೆ ಕಾಂಗ್ರೆಸ್‌ನ ಕೆಲ ಶಾಸಕರಿಂದಲೇ ಅಧಿಕೃತ ಚಾಲನೆ ಸಿಗುವ ಸಾಧ್ಯತೆಯಿದೆ. ಜಾತಿ ಜನಗಣತಿಗೆ ಬೇರೆ ಸಮುದಾಯದ ಸ್ವಪಕ್ಷೀಯ ನಾಯಕರ ವಿರೋಧ ವ್ಯಕ್ತವಾದರೂ ಹೈಕಮಾಂಡ್ ಮಧ್ಯಸ್ಥಿಕೆ ಮೂಲಕ ಸಮಾಧಾನ ಪಡಿಸುವ ಲೆಕ್ಕಾಚಾರವನ್ನು ಸಿಎಂ ಹಾಕಿದ್ದಾರೆ. ಅಷ್ಟೇ ಅಲ್ಲದೇ ಡಿಸೆಂಬರ್ ಅಧಿವೇಶನದಲ್ಲಿ ಮಾಸ್ಟರ್ ಸ್ಟ್ರೋಕ್‌ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಅಕ್ಟೋಬರ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆಯಿದ್ದು, ಈ ಸಭೆಯಲ್ಲಿ ಕಾಂತರಾಜು ವರದಿ (Kantharaju Report) ಬಗ್ಗೆ ಚರ್ಚೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ ಎನ್ನಲಾಗಿದೆ.

Siddaramaiah 7

ಕಳೆದ ಫೆಬ್ರವರಿಯಲ್ಲಿ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದರು. ಆದರೆ ಈವರೆಗೂ ಸಂಪುಟದಲ್ಲಿ ವರದಿ ಕುರಿತು ಸರ್ಕಾರ ಚರ್ಚೆ ನಡೆಸಿರಲಿಲ್ಲ. ಈಗ ಮುಡಾ ಕಾನೂನು ಕಂಟಕ ವೇಳೆ ಜಾತಿ ಜನಗಣತಿ ವರದಿ ಮೇಲೆ ಸಿಎಂ ಕಣ್ಣಿಟ್ಟಿದ್ದಾರೆ.

ವರದಿ ಜಾರಿ ಕುರಿತು ಸಿಎಂ ಹೇಳಿಕೆ ಬಳಿಕ ಪಕ್ಷದೊಳಗೆ ಮತ್ತು ಹೊರಗೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಅಹಿಂದ ವರ್ಗಗಳ ಕೈ ನಾಯಕರು ಆದಷ್ಟು ಬೇಗ ವರದಿ ಜಾತಿಗೆ ಒತ್ತಾಯಿಸುತ್ತಿದ್ದಾರೆ. ಆದರೆ ಸಿಎಂ ಮತ್ತು ಅಹಿಂದ ನಾಯಕರ ಆತುರಕ್ಕೆ ಮೇಲ್ವರ್ಗದ ನಾಯಕರ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಂಪುಟ ಸಭೆಯಲ್ಲಿ ವರದಿ ಜಾರಿಯ ಬಗ್ಗೆ ಸಚಿವರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ.

ಜಾತಿ ಜನಗಣತಿ ವರದಿ ಜಾರಿ ಸಂಬಂಧ ಸಿಎಂ ಸಂಪುಟ ಉಪಸಮಿತಿ ರಚನೆ ಮಾಡುವ ಸಾಧ್ಯತೆಯಿದೆ. ವರದಿ ಜಾರಿಯ ಸಾಧಕ ಬಾಧಕ ಬಗ್ಗೆ ಗಡುವಿನೊಳಗೆ ಸಂಪುಟ ಉಪಸಮಿತಿ ವರದಿ ಪಡೆಯಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

ಈಗಾಗಲೇ ಜಾತಿ ಗಣತಿ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ ಇಡುವಂತೆ ಈಗಾಗಲೇ ಮಾಜಿ ಸಂಸದ ಡಿಕೆ ಸುರೇಶ್‌ ಅಪಸ್ವರ ಎತ್ತಿದ್ದಾರೆ. ಅಗತ್ಯ ಮಾನದಂಡ ಬಳಸಿ ಸಮೀಕ್ಷೆ ಮಾಡಿದರೆ ಯಾವುದೇ ಗೊಂದಲ ಇರುವುದಿಲ್ಲ. ಹೀಗಾಗಿ ಕೇಂದ್ರದ ಜನಗಣತಿವರೆಗೂ ಕಾಯುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಜಾತಿ ಜನಗಣತಿ ಜಾರಿ ಮಾಡಬೇಕೆಂದು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಹೀಗಾಗಿ ಸಂಪುಟ ಸಭೆ ನಂತರ ಕಾಂಗ್ರೆಸ್ ಒಳಗಡೆಯೇ ಜಾತಿ ಜನಗಣತಿ ಕಿಚ್ಚು ಹೆಚ್ಚಾಗುವ ನಿರೀಕ್ಷೆಯಿದೆ.

census

ಏನಿದು ಕಾಂತರಾಜು ವರದಿ?
2013-18ರ ಐದು ವರ್ಷದ ಅವಧಿಯಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು 158.47 ಕೋಟಿ ರೂ. ವೆಚ್ಚದಲ್ಲಿ ಹೆಚ್‌. ಕಾಂತರಾಜ (Kantharaju) ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ರಚಿಸಿತ್ತು. ಈ ಆಯೋಗ 2015ರಲ್ಲಿ ಸಮೀಕ್ಷೆ (Socio-Economic Survey) ನಡೆಸಿತ್ತು. ಈ ಆಯೋಗದ ಅವಧಿ ಮುಕ್ತಾಯದ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.

ಈ ಫೆಬ್ರವರಿಯಲ್ಲಿ ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಅಧ್ಯಕ್ಷತೆಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ವಿಷಯಕ್ಕೆ ಸಂಬಂಧಿಸಿದ ಟಿಪ್ಪಣಿಗಳೊಂದಿಗೆ 2015ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿತ್ತು.

 

ಜಾತಿ ಗಣತಿ ಉದ್ದೇಶ ಏನಿತ್ತು?
1931ರ ಜನಗಣತಿಯ ನಂತರ ಯಾವುದೇ ಜನಗಣತಿ ದಾಖಲೆಗಳಿಂದ ಜಾತಿ / ಸಮುದಾಯವಾರು ಜನಸಂಖ್ಯೆಯ ಅಂಕಿ-ಅಂಶಗಳು ಖಚಿತವಾಗಿ ದೊರೆಯುತ್ತಿಲ್ಲ. ಜಾತಿವಾರು ಜನಗಣತಿ ಅಂಕಿ-ಅಂಶಗಳು ಲಭ್ಯವಿಲ್ಲದೇ ಇರುವುದರಿಂದ ಕಾರ್ಯಕ್ರಮಗಳ ಮುಖಾಂತರ ಸೌಲಭ್ಯಗಳನ್ನು ಸಾಮಾಜಿಕ ನ್ಯಾಯ ತತ್ವದ ಆಧಾರದ ಮೇಲೆ ಒದಗಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿತ್ತು.

ಸಮುದಾಯಗಳ ಈಗಿರುವ ಸ್ಥಿತಿಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಶ್ಲೇಷಣೆ ನಡೆಸುವುದು, ಜನಸಂಖ್ಯೆಯ ಪ್ರಮಾಣವನ್ನು ತಿಳಿಯುವುದು ಅಗತ್ಯವಾಗಿದೆ ಎಂಬ ಉದ್ದೇಶಕ್ಕಾಗಿ ಆಗಿನ ಸಿದ್ದರಾಮಯ್ಯ ಸರ್ಕಾರ ಸಮೀಕ್ಷೆಗೆ ಆದೇಶಿಸಿತ್ತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳು ಹಾಗೂ ಇತರ ಜಾತಿಗಳನ್ನೊಳಗೊಂಡಂತೆ ರಾಜ್ಯದ ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವಿವಿಧ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಜವಾಬ್ದಾರಿಯನ್ನು ಆಯೋಗಕ್ಕೆ ‌ನೀಡಲಾಗಿತ್ತು. ರಾಜ್ಯದ ಎಲ್ಲ ವರ್ಗಗಳ / ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಣೆಗೆ ಸೂಚಿಸಲಾಗಿತ್ತು.

 

TAGGED:Caste CensusKantharaju Reportkarnatakasiddaramaiahಕರ್ನಾಟಕಕಾಂತರಾಜುಜಾತಿ ಜನಗಣತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
2 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
3 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
4 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
4 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?