Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಡಾಲರ್‌ಗೆ ರೂಪಾಯಿ ಸೆಡ್ಡು – ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?

Public TV
Last updated: July 20, 2023 1:29 pm
Public TV
Share
7 Min Read
Can the Indian rupee replace the dollar as an international currency RBI panel recommends measures for internationalisation of rupee
SHARE

ಡಾಲರ್‌ನಲ್ಲಿ ನಾವು ಹೇಗೆ ವ್ಯವಹಾರ ಮಾಡುತ್ತೇವೆಯೋ ಅದೇ ರೀತಿ ರೂಪಾಯಿನಲ್ಲಿ (Rupee) ಯಾಕೆ ವ್ಯವಹಾರ ಮಾಡಲು ಸಾಧ್ಯವಿಲ್ಲ? ಈ ಪ್ರಶ್ನೆಗೆ ಈಗ ಉತ್ತರ ಸಿಗುವ ಕಾಲ ಹತ್ತಿರ ಬಂದಿದೆ. ಡಾಲರ್‌ (Dollar) ಬದಲು ರೂಪಾಯಿನಲ್ಲೇ ವ್ಯವಹಾರ ನಡೆಸಲು ಭಾರತ (India) ಈಗ ಮುಂದಾಗುತ್ತಿದೆ. ಆರ್‌ಬಿಐ (RBI) ಪ್ರಯತ್ನಗಳು ಫಲ ನೀಡಿದರೆ ಮುಂದೊಂದು ದಿನ ಭಾರತದ ಕರೆನ್ಸಿ ಇಂಟರ್‌ನ್ಯಾಷನಲ್‌ ಕರೆನ್ಸಿಯಾಗುವ (Global Currency) ಸಾಧ್ಯತೆಯಿದೆ. ಹೀಗಾಗಿ ಡಾಲರ್‌ನಲ್ಲೇ ಯಾಕೆ ದೇಶಗಳು ವ್ಯವಹಾರ ನಡೆಸುತ್ತಿವೆ? ಈಗ ಯಾಕೆ ರೂಪಾಯಿನಲ್ಲೇ ವ್ಯವಹಾರ ನಡೆಸಲು ಭಾರತ ಮುಂದಾಗುತ್ತಿದೆ? ರೂಪಾಯಿನಲ್ಲಿ ವ್ಯವಹಾರ ಹೇಗೆ ನಡೆಯುತ್ತದೆ? ಮತ್ತು ಆರ್‌ಬಿಐ ಮುಂದಿರುವ ಸವಾಲುಗಳು ಏನು ಎನ್ನುವುದರ ಕಿರು ಮಾಹಿತಿ ಇಲ್ಲಿದೆ.

ಡಾಲರ್‌ ವಿಶ್ವದ ಕರೆನ್ಸಿಯಾಗಿದ್ದು ಹೇಗೆ?
ಡಾಲರ್‌ ವಿಶ್ವದ ಕರೆನ್ಸಿಯಾಗಿ ಹೊರ ಹೊಮ್ಮಿದ್ದು ಹೇಗೆ ಎಂಬುದಕ್ಕೆ ಮೂರು ಪ್ರಮುಖ ಕಾರಣ ನೀಡಬಹುದು. ಎರಡನೇ ಮಹಾಯುದ್ಧದ ಸಮಯದಲ್ಲಿ ಒಂದೊಂದು ದೇಶದಲ್ಲಿ ಒಂದೊಂದು ಕರೆನ್ಸಿ ಇದ್ದ ಕಾರಣ ವ್ಯವಹಾರ ನಡಸಲು ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ವಿಶ್ವದಲ್ಲೇ ಚಿನ್ನ ಸಂಗ್ರಹ ಅಮೆರಿಕದ ಬಳಿ ಜಾಸ್ತಿ ಇತ್ತು. ಅಷ್ಟೇ ಅಲ್ಲದೇ ಆರ್ಥಿಕವಾಗಿಯೂ, ಮಿಲಿಟರಿ ಎಲ್ಲಾ ಕ್ಷೇತ್ರದಲ್ಲಿ ಅಮೆರಿಕ ಪವರ್‌ಫುಲ್‌ ದೇಶವಾಗಿ ಹೊರಹೊಮ್ಮಿತ್ತು. ಈ ಕಾರಣಕ್ಕೆ 1944 ರಲ್ಲಿ ಬ್ರೆಟ್ಟನ್‌ ವುಡ್ಸ್‌ (Bretton Woods) ಒಪ್ಪಂದಕ್ಕೆ ಸಹಿ ಹಾಕಿದ ಪರಿಣಾಮ ಡಾಲರ್‌ನಲ್ಲೇ ವ್ಯವಹಾರ ನಡೆಸಲು ಅಮೆರಿಕದ ಮಿತ್ರ ಪಡೆಗಳು ಒಪ್ಪಿಕೊಂಡಿದ್ದವು. ಈ ಒಪ್ಪಂದದ ಪ್ರಕಾರ ವ್ಯವಹಾರಕ್ಕೆ ಅಮೆರಿಕ ಡಾಲರ್‌ ಅನ್ನು ಎಲ್ಲಾ ದೇಶಗಳು ಬಳಸಲು ಅಧಿಕೃತ ಒಪ್ಪಿಗೆ ಸಿಕ್ಕಿತು. ಒಂದು ಔನ್ಸ್‌ ಅಥವಾ 28.35 ಗ್ರಾಂ ಚಿನ್ನಕ್ಕೆ 35 ಡಾಲರ್‌ ದರವನ್ನು ನಿಗದಿ ಮಾಡಲಾಗಿತ್ತು.

 

ಎರಡನೇಯದಾಗಿ ಸೌದಿ ಜೊತೆ ಅಮರಿಕ ಕಚ್ಚಾ ತೈಲಕ್ಕೆ ಸಂಬಂಧಿಸಿದ ಒಪ್ಪಂದದಿಂದಾಗಿ ಡಾಲರ್‌ ಶಕ್ತಿ ಹೆಚ್ಚಾಯಿತು. ನಿಮ್ಮ ಎಲ್ಲಾ ಕಚ್ಚಾ ತೈಲ ಘಟಕಗಳಿಗೆ ನಾವು ರಕ್ಷಣೆ ನೀಡುತ್ತೇವೆ, ಆದರೆ ವ್ಯವಹಾರವನ್ನು ಡಾಲರ್‌ನಲ್ಲಿ ಮಾಡಬೇಕು ಎಂದು ಷರತ್ತು ವಿಧಿಸಿತು. ಈ ಷರತ್ತಿಗೆ ಸೌದಿ ಅರೆಬಿಯಾ ಒಪ್ಪಿತು. ಪರಿಣಾಮ ಈಗಲೂ ಕಚ್ಚಾ ತೈಲದ ವ್ಯವಹಾರ ಡಾಲರ್‌ನಲ್ಲೇ ನಡೆಯುತ್ತಿದೆ.

ಮೂರನೇಯದ್ದು ಬಹಳ ಮುಖ್ಯ ಸ್ವಿಫ್ಟ್‌ ಬ್ಯಾಂಕ್‌ ನೆಟ್‌ವರ್ಕ್‌. ಬ್ರೆಟ್ಟನ್‌ ವುಡ್ಸ್‌ ಒಪ್ಪಂದವನ್ನು ಅಮೆರಿಕ ರದ್ದುಗೊಳಿಸಿದ ನಂತರ 1973ರಲ್ಲಿ ಬೆಲ್ಜಿಯಂನಲ್ಲಿ Society for Worldwide Interbank Financial Telecommunications ಅಥವಾ SWIFT ಜನ್ಮ ತಾಳಿತು. ಇದು ಅಂತರಾಷ್ಟ್ರೀಯ ನಗದು ವ್ಯವಹಾರಗಳ ಸಂಸ್ಥೆಯಾಗಿದ್ದು, ವಿವಿಧ ದೇಶಗಳ ನಡುವೆ ವೇಗವಾಗಿ ನಗದು ವ್ಯವಹಾರ ನಡೆಯಲು ನೆರವಾಗುವಂತಹ ವ್ಯವಸ್ಥೆ ಸ್ವಿಫ್ಟ್‌ನಲ್ಲಿದೆ.

ಇಲ್ಲೂ ಡಾಲರನ್ನೇ ಯಾಕೆ ಪರಿಗಣಿಸಿಲಾಯಿತು ಎನ್ನುವುದಕ್ಕೂ ಕಾರಣವಿದೆ. ಈ ಸಂದರ್ಭದಲ್ಲಿ ಅಮೆರಿಕ ಮತ್ತು ರಷ್ಯಾ ಮಧ್ಯೆ ಶೀತಲ ಸಮರ ನಡೆಯುತ್ತಿತ್ತು. ಭವಿಷ್ಯದಲ್ಲಿ ಯುರೋಪ್‌ ದೇಶಗಳ ಮೇಲೆ ಯಾರೇ ಆಕ್ರಮಣ ಮಾಡಿದರೂ ನಾನು ರಕ್ಷಣೆ ನೀಡುತ್ತೇನೆ ಎಂದು ಅಮೆರಿಕ ಭರವಸೆ ನೀಡಿತ್ತು. ಈ ಕಾರಣಕ್ಕೆ ಯುರೋಪ್‌ ರಾಷ್ಟ್ರಗಳು ಸ್ವಿಫ್ಟ್‌ ನೀತಿಯನ್ನು ಒಪ್ಪಿಕೊಂಡವು. ಈ ಎಲ್ಲಾ ಕಾರಣದಿಂದ ಏನು ಮಾಡದೇ ರಾಜತಾಂತ್ರಿಕ ಪ್ರಭಾವ ಬಳಸಿ ಮೀಸಲು ನಿಧಿಯಿಂದಾಗಿ ಅಮೆರಿಕ ವಿಶ್ವದಲ್ಲೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರಹೊಮ್ಮಿತ್ತು.

Russia Ukraine War

ರೂಪಾಯಿಯಲ್ಲಿ ವ್ಯವಹಾರಕ್ಕೆ ಮುಂದಾಗಿದ್ದು ಯಾಕೆ?
ಈಗ ಭಾರತ ರೂಪಾಯಿಯಲ್ಲಿ ವ್ಯವಹಾರಕ್ಕೆ ಮುಂದಾಗಿದ್ದು ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ರಷ್ಯಾ-ಉಕ್ರೇನ್‌ (Russia- Ukraine) ಯುದ್ಧ. ರಷ್ಯಾ ಉಕ್ರೇನ್‌ ಯುದ್ಧಕ್ಕೆ ಮೊದಲೇ ಭಾರತ ಸ್ಥಳೀಯ ದೇಶಗಳ ಜೊತೆ ರೂಪಾಯಿಯಲ್ಲೇ ವ್ಯವಹಾರ ನಡೆಸಲು ಆಸಕ್ತಿ ತೋರಿಸಿತ್ತು. ಡಾಲರ್‌ ಮೌಲ್ಯ ಜಾಸ್ತಿಯಾದಷ್ಟು ಆಮದು ಮಾಡುವ ವೇಳೆ ವಸ್ತುಗಳ ಬೆಲೆ ಜಾಸ್ತಿ ಆಗುತ್ತಿತ್ತು. ಆದರೆ ರಷ್ಯಾ -ಉಕ್ರೇನ್‌ ಯುದ್ಧದ ಬಳಿಕ ಈ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಉಕ್ರೇನ್‌ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಅಮೆರಿಕ ಮತ್ತು ಯುರೋಪ್‌ ರಷ್ಯಾವನ್ನು ಸ್ವಿಫ್ಟ್‌ ಬ್ಯಾಂಕ್‌ ನೆಟ್‌ವರ್ಕ್‌ನಿಂದ ಹೊರಗಿಟ್ಟಿತು. ಅಮೆರಿಕ ರಷ್ಯಾದ ಡಾಲರ್‌ ಖಾತೆಯನ್ನು ಫ್ರೀಜ್‌ ಮಾಡಿತು. ಪರಿಣಾಮ ರಷ್ಯಾಗೆ ಡಾಲರ್‌ನಲ್ಲಿ ಆಮದು ಮತ್ತು ರಫ್ತು ಮಾಡಲು ಸಾಧ್ಯವಾಗಲಿಲ್ಲ. ದಿಢೀರ್‌ ನೀಡಿದ ಶಾಕ್‌ನಿಂದ ರಷ್ಯಾಗೆ ಬಹಳ ಸಮಸ್ಯೆಯಾಯಿತು. ಯಾವಾಗ ರಷ್ಯಾವನ್ನು ಸ್ವಿಫ್ಟ್‌ ಬ್ಯಾಂಕ್‌ನಿಂದ ಹೊರಗಡೆ ಇಡಲಾಯಿತೋ ಆವಾಗ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ತಮ್ಮದೇ ಕರೆನ್ಸಿಯಲ್ಲಿ ವ್ಯವಹಾರ ನಡೆಸಲು ಆಸಕ್ತಿ ತೋರಿಸಿದವು. ಯಾಕೆಂದರೆ ಮುಂದೊಮ್ಮೆ ಅಮೆರಿಕ ಮತ್ತು ಯುರೋಪ್‌ ರಾಷ್ಟ್ರಗಳ ವಿರೋಧ ಕಟ್ಟಿಕೊಂಡರೆ ನಮ್ಮ ರಾಷ್ಟ್ರವನ್ನು ಸ್ವಿಫ್ಟ್‌ ಬ್ಯಾಂಕ್ ನೆಟ್‌ವರ್ಕ್‌ನಿಂದ ಹೊರಗಡೆ ಇಡುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿ ಏನು? ಈ ಕಾರಣಕ್ಕೆ ಈಗ ಭಾರತ ರೂಪಾಯಿಯಲ್ಲೇ ವ್ಯವಹಾರ ನಡೆಸಲು ಈಗ ವಿಶೇಷ ಆಸಕ್ತಿ ತೋರಿಸುತ್ತಿದೆ.

ರೂಪಾಯಿಯಲ್ಲೇ ವ್ಯವಹಾರ ಹೇಗೆ ನಡೆಯುತ್ತದೆ?
ಬಹಳ ಸರಳವಾಗಿ ಹೇಳುವುದಾದರೆ ಈಗ ಹೇಗೆ ನಡೆಯುತ್ತಿದೆಯೋ ಅದೇ ರೀತಿ ವ್ಯವಹಾರ ನಡೆಯುತ್ತದೆ. ಆದರೆ ಅಮೆರಿಕದ ಬ್ಯಾಂಕ್‌ನಲ್ಲಿ ಅಲ್ಲ. ರೂಪಾಯಿಯಲ್ಲಿ ವ್ಯವಹಾರ ನಡೆಸಲು ವೊಸ್ಟ್ರೋ ಮತ್ತು ನೋಸ್ಟ್ರೋ ಖಾತೆಯನ್ನು ತೆರೆಯಬೇಕಾಗುತ್ತದೆ. ವಿದೇಶದ ಬ್ಯಾಂಕು ಭಾರತದಲ್ಲಿ ಬ್ರ್ಯಾಂಚ್‌ ಓಪನ್‌ ಮಾಡಿ ರೂಪಾಯಿ ಖಾತೆಯನ್ನು ತೆರೆದರೆ ಅದನ್ನು ʼವೊಸ್ಟ್ರೋʼ ಖಾತೆ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಬ್ರ್ಯಾಂಚ್‌ ಓಪನ್‌ ಮಾಡದ ವಿದೇಶಿ ಬ್ಯಾಂಕ್‌ ಭಾರತೀಯ ಬ್ಯಾಂಕ್‌ನಲ್ಲಿ ರೂಪಾಯಿ ಖಾತೆ ತೆರೆದರೆ ಅದನ್ನು ನೋಸ್ಟ್ರೋ ಎಂದು ಕರೆಯಲಾಗುತ್ತದೆ.

ಇಲ್ಲಿಯವರೆಗೆ ಹೆಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ಯುಕೋ ಬ್ಯಾಂಕ್‌ನಲ್ಲಿ 30 ವೊಸ್ಟ್ರೋ ಖಾತೆ ತೆರೆಯಲಾಗಿದೆ. ಆರ್‌ಬಿಐ ಇಲ್ಲಿಯವರೆಗೆ ಬೋಟ್ಸ್ವಾನಾ, ಫಿಜಿ, ಜರ್ಮನಿ, ಗಯಾನಾ, ಇಸ್ರೇಲ್, ಕೀನ್ಯಾ, ಮಲೇಷ್ಯಾ, ಮಾರಿಷಸ್, ಮ್ಯಾನ್ಮಾರ್, ನ್ಯೂಜಿಲ್ಯಾಂಡ್, ಓಮನ್, ರಷ್ಯಾ, ಸೀಶೆಲ್ಸ್, ಸಿಂಗಾಪುರ, ಶ್ರೀಲಂಕಾ, ತಾಂಜಾನಿಯಾ, ಯುನೈಟೆಡ್ ಕಿಂಗ್‌ಡಮ್, ಉಗಾಂಡ ದೇಶಗಳ ಬ್ಯಾಂಕುಗಳಿಗೆ ವೊಸ್ಟ್ರೋ ಖಾತೆ ತೆರೆಯಲು ಅನುಮತಿ ನೀಡಿದೆ.

sdr currency

ಇಂಟರ್‌ನ್ಯಾಷನಲ್‌ ಕರೆನ್ಸಿ ಎಂದರೇನು?
ಭಾರತದ ಕರೆನ್ಸಿ ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ ಎಂಬುದನ್ನು ತಿಳಿದುಕೊಳ್ಳುವ ಮೊದಲು ಇಂಟರ್‌ನ್ಯಾಷನಲ್‌ ಕರೆನ್ಸಿ ಎಂದರೇನು ಎಂಬುದನ್ನು ತಿಳಿದುಕೊಳ್ಳೋಣ. ವಿಶ್ವದೆಲ್ಲೆಡೆ ಒಂದು ದೇಶದ ಕರೆನ್ಸಿಗೆ ಬೇಡಿಕೆ ಜಾಸ್ತಿಯಾದರೆ ಅದನ್ನು ಇಂಟರ್‌ನ್ಯಾಷನಲ್‌ ಕರೆನ್ಸಿ ಎಂದು ಕರೆಯಲಾಗುತ್ತದೆ. ಒಂದು ದೇಶದ ಕರೆನ್ಸಿಗೆ ʼಇಂಟರ್‌ನ್ಯಾಷನಲ್‌ ಕರೆನ್ಸಿʼಯ ಪಟ್ಟವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ನೀಡುತ್ತದೆ. ಯುಎಸ್ ಡಾಲರ್, ಯುರೋಪಿಯನ್‌ ಯೂನಿಯನ್‌ನ ಯೂರೋ, ಚೈನಾ ಯುವಾನ್‌, ಜಪಾನಿನ ಯೆನ್ ಮತ್ತು ಬ್ರಿಟಿಷ್ ಪೌಂಡ್ ಇಂಟರ್‌ನ್ಯಾಷನಲ್‌ ಕರೆನ್ಸಿಯಾಗಿದೆ. ಒಂದು ದೇಶದ ಆಮದು, ರಫ್ತು, ಆರ್ಥಿಕತೆ ಸೇರಿದಂತೆ ಹಲವು ಮಾನದಂಡಗಳನ್ನು ಪರಿಗಣಿಸಿ ಐಎಂಫ್‌ ಒಂದು ದೇಶದ ಕರೆನ್ಸಿಗೆ ಈ ಸ್ಥಾನಮಾನ ನೀಡುತ್ತದೆ. ಇತ್ತೀಚಿಗೆ ಆರ್‌ಬಿಐ ಸಮಿತಿಯು ರೂಪಾಯಿಯ ಅಂತರಷ್ಟ್ರೀಯ ಕರೆನ್ಸಿಯನ್ನಾಗಿ ಮಾಡಲು ಶಿಫಾರಸು ಮಾಡಿದೆ.

ರೂಪಾಯಿ ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?
ರೂಪಾಯಿ ಇಂಟರ್‌ನ್ಯಾಷನಲ್‌ ಕರೆನ್ಸಿ ಆಗಬೇಕಾದರೆ ಆರ್‌ಬಿಐ ಸಮಿತಿ ಅಲ್ಪಾವಧಿ ಮತ್ತು ದೀರ್ಘಾವಧಿಯಲ್ಲಿ ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿದೆ. ಅಲ್ಪಾವಧಿಯಲ್ಲಿ ಭಾರತ ತನ್ನ ಹತ್ತಿರದ ದೇಶಗಳ ಜೊತೆ ರೂಪಾಯಿಯಲ್ಲೇ ವ್ಯವಹಾರ ನಡೆಸುವುದು. ಈಗಾಗಲೇ ನೇಪಾಳ, ಭೂತಾನ್‌, ಶ್ರೀಲಂಕಾದ ಜೊತೆ ರೂಪಾಯಿಯಲ್ಲೇ ವ್ಯವಹಾರ ನಡೆಸುತ್ತಿದೆ. ದೀರ್ಘಾವಧಿಯಲ್ಲಿ ನಡೆಯಬೇಕಾದ ಕೆಲಸ ಬಹಳಷ್ಟಿದೆ. ಬಹಳ ಮುಖ್ಯವಾಗಿ ಆಮದು ಕಡಿಮೆ ಆಗಬೇಕು. ರಫ್ತು ಹೆಚ್ಚಾಗಬೇಕು. 2022- 23ನೇ ಹಣಕಾಸು ವರ್ಷದಲ್ಲಿ ಭಾರತ 447 ಬಿಲಿಯನ್‌ ಡಾಲರ್‌ ರಫ್ತು, 714 ಬಿಲಿಯನ್‌ ಡಾಲರ್‌ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಭಾರತ ಮೇಕ್‌ ಇನ್‌ ಇಂಡಿಯಾ ಹೆಚ್ಚು ಒತ್ತು ನೀಡಲು ಆರಂಭಿದ್ದು ಇದರ ಫಲ ಈಗಲೇ ಸಿಗದೇ ಇದ್ದರೂ ಕೆಲ ವರ್ಷಗಳಲ್ಲಿ ಸಿಗುವ ಸಾಧ್ಯತೆಯಿದೆ.

indian imports and

ವಿಶ್ವದಲ್ಲೇ ಯುಪಿಐ (UPI) ಪಾವತಿಯಲ್ಲಿ ಭಾರತ ನಂಬರ್‌ ಒನ್‌ ಸ್ಥಾನ ಪಡೆದಿದೆ. ಈಗ ಹಲವು ದೇಶಗಳ ಜೊತೆ ಭಾರತದ ಆರ್‌ಬಿಐ ಯುಪಿಐ ಪಾವತಿ ಸಂಬಂಧ ಸಹಿ ಹಾಕಿದೆ. ಸಿಂಗಾಪುರದ ಜೊತೆ ಈಗಾಗಲೇ ಆರಂಭಗೊಂಡಿದ್ದು, ಕಳೆದ ವಾರ ಪ್ರಧಾನಿ ಮೋದಿ ಅವರು ಫ್ರಾನ್ಸ್‌ ಮತ್ತು ಯುಎಇ ಪ್ರವಾಸದ ಸಮಯದಲ್ಲಿ ಆರ್‌ಬಿಐ ಆ ಎರಡು ದೇಶಗಳ ಜೊತೆ ಯುಪಿಐ ವ್ಯವಹಾರಕ್ಕೆ ಸಹಿ ಹಾಕಿತ್ತು. ಇದರಿಂದಾಗಿ ರಿಯಲ್‌ ಟೈಮ್‌ನಲ್ಲಿ ಹಣವನ್ನು ಕಳುಹಿಸಬಹುದಾಗಿದೆ.   ಇದನ್ನೂ ಓದಿ: ಅಮೆರಿಕದ 1 ನಿರ್ಧಾರ – ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ವಾವಲಂಬಿಯಾದ ಭಾರತ

India UAE to set up rupee dirham trade mechanism to settle bilateral transactions PM Narendra Modi RBI Governor Shaktikanta Da 1 1

ಎರಡು ದೇಶಗಳ ನಡುವಿನ ಚಿಲ್ಲರೆ ಪಾವತಿಗಳು ಸಾಮಾನ್ಯವಾಗಿ ಕಡಿಮೆ ಪಾರದರ್ಶಕವಾಗಿರುತ್ತವೆ ಮತ್ತು ಇದು ದೇಶೀಯ ವಹಿವಾಟುಗಳಿಗಿಂತ ಹೆಚ್ಚು ದುಬಾರಿ. ಗಡಿಯಾಚೆಗಿನ ಹಣ ವ್ಯವಹಾರ ಪಾರದರ್ಶಕವಾಗಿರುತ್ತದೆ. ಅಷ್ಟೇ ಅಲ್ಲದೇ ಅಗ್ಗ ಮತ್ತು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ, ಪ್ರವಾಸಿಗರಿಗೆ ಲಾಭವಾಗಲಿದೆ. ಯುಪಿಐ ಮೂಲಕ ಚಿಲ್ಲರೆ ಪಾವತಿಗಳನ್ನು ಭಾರತೀಯ ರೂಪಾಯಿಗಳಲ್ಲಿ ಮಾಡಲಾಗುವುದರಿಂದ ಇದು ವಿದೇಶೀ ವಿನಿಮಯ ಮೀಸಲುಗಳನ್ನು ಉಳಿಸಲು ಸಹಾಯ ಮಾಡುತ್ತದೆ.

ಸವಾಲುಗಳು ಏನು?
ಇಂಟರ್‌ನ್ಯಾಷನಲ್‌ ಕರೆನ್ಸಿಯಿಂದ ಲಾಭ ಆದರೂ ಬಹಳಷ್ಟು ಸವಾಲುಗಳಿವೆ. ರೂಪಾಯಿ ಸಂಪೂರ್ಣ ನಿಯಂತ್ರಣ ಆರ್‌ಬಿಐ ಕೈಯಲ್ಲಿ ಇರುವುದಿಲ್ಲ. ಸುಲಭವಾಗಿ ಹಣದ ವರ್ಗಾವಣೆ ಆಗುವ ಕಾರಣ ವಿದೇಶಿ ಹೂಡಿಕೆದಾರರು ಷೇರು ಮಾರುಕಟ್ಟೆಯಲ್ಲಿ ದಿನ ಬೆಳಗಾಗುವುದರ ಒಳಗಡೆ ಹೂಡಿಕೆಯನ್ನು ಹಿಂದಕ್ಕೆ ಪಡೆಯಬಹುದು. ಅದೇ ರೀತಿಯಾಗಿ ಸುಲಭವಾಗಿ ಹಣ ವರ್ಗಾವಣೆಯಾಗುವ ಕಾರಣ ದೇಶ ವಿರೋಧಿ ಕೃತ್ಯಗಳಿಗೆ ಹಣ ಬಳಕೆಯಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಭಾರತ ಹೆಜ್ಜೆ ಇಡಬೇಕೆಂಬ ಸಲಹೆ ಆರ್ಥಿಕ ಕ್ಷೇತ್ರದ ತಜ್ಞರಿಂದ ವ್ಯಕ್ತವಾಗಿದೆ.

 

Web Stories

ashika ranganath photos
ashika ranganath photos
aradhanaa photos
aradhanaa photos
malaika arora photos
malaika arora photos
chaithra achar photos
chaithra achar photos
samantha ruth prabhu photos
samantha ruth prabhu photos
toby actress chaithra achar photos
toby actress chaithra achar photos
bigg boss deepika das photos
bigg boss deepika das photos
pranitha subhash photos
pranitha subhash photos
ragini dwivedi photoshoot
ragini dwivedi photoshoot


follow icon

TAGGED:International Currencyrbirupeeupiಆರ್‍ಬಿಐಇಂಟರ್‌ನ್ಯಾಷನಲ್‌ ಕರೆನ್ಸಿಐಎಂಎಫ್ಭಾರತರೂಪಾಯಿ
Share This Article
Facebook Whatsapp Whatsapp Telegram

Cinema Updates

prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
3 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
4 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
17 hours ago
Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
19 hours ago

You Might Also Like

Shobha Karandlaje 1
Bengaluru City

ಸಾಕ್ಷಿ ಕೇಳೋರನ್ನ ಪಾಕಿಸ್ತಾನಕ್ಕೆ ಕಳಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕಿಡಿ

Public TV
By Public TV
34 minutes ago
pratap simha
Latest

ಸಂತೋಷ್ ಲಾಡ್ ಮೈತುಂಬಾ ಮೈನಿಂಗ್ ದುಡ್ಡು ಅಂಟಿಕೊಂಡಿದೆ, ಹೊರಗಡೆ ಸಾಚಾ ಅಂತ ಬಿಲ್ಡಪ್: ಪ್ರತಾಪ್ ಸಿಂಹ ಕೆಂಡ

Public TV
By Public TV
43 minutes ago
Train
Dakshina Kannada

ಹಾಸನ ಜಿಲ್ಲೆಯಲ್ಲಿ ಪ್ರಮುಖ ರೈಲುಗಳ ಸಂಚಾರ ರದ್ದು – ಸುಬ್ರಹ್ಮಣ್ಯ, ಮಂಗಳೂರು, ಕಾರವಾರಕ್ಕೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
2 hours ago
Hebbal Flyover Closure 1
Bengaluru City

ಇಂದಿನಿಂದ 5 ದಿನ 3 ಗಂಟೆಗಳ ಕಾಲ ಹೆಬ್ಬಾಳ ಫ್ಲೈಓವರ್ ಬಂದ್

Public TV
By Public TV
2 hours ago
Mysuru Gas Leak
Crime

Mysuru | ಸಿಲಿಂಡರ್ ಬದಲಾಯಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ – ಐವರಿಗೆ ಗಾಯ

Public TV
By Public TV
2 hours ago
Shashi Tharoor
Latest

ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ashika ranganath photos aradhanaa photos malaika arora photos chaithra achar photos samantha ruth prabhu photos toby actress chaithra achar photos bigg boss deepika das photos pranitha subhash photos ragini dwivedi photoshoot
Welcome Back!

Sign in to your account

Username or Email Address
Password

Lost your password?