ತಮಿಳುನಾಡು ಮಸೂದೆಗಳ ವಿಚಾರದಲ್ಲಿ ಗಡುವು – ರಾಷ್ಟ್ರಪತಿಗಳಿಂದ ಸುಪ್ರೀಂಗೆ 14 ಪ್ರಶ್ನೆ

Public TV
1 Min Read
Droupadi Murmu

ನವದೆಹಲಿ: ತಮಿಳುನಾಡು (Tamil Nadu) ರಾಜ್ಯ ಸರ್ಕಾರದ ಮಸೂದೆಗಳ ವಿಚಾರವಾಗಿ ಸುಪ್ರೀಂ ಕೋರ್ಟ್ (Supreme Court )ನೀಡಿದ್ದ ಆದೇಶಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು 14 ಮಹತ್ವದ ಪ್ರಶ್ನೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ.

ತಮಿಳುನಾಡು ರಾಜ್ಯ ಸರ್ಕಾರದ ಮಸೂದೆಗಳ ಬಗ್ಗೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಿತ್ತು. ಏ.8ರ ಸಂವಿಧಾನದ 143(1) ವಿಧಿಯಡಿ ರಾಷ್ಟ್ರಪತಿ ತಮ್ಮ ಅಧಿಕಾರ ಚಲಾಯಿಸಿದ್ದಾರೆ. ಸಂವಿಧಾನದಲ್ಲಿ ಯಾವುದೇ ನಿಬಂಧನೆಗಳಿಲ್ಲದಿದ್ದರೂ, ನ್ಯಾಯಾಲಯವು ಹೇಗೆ ಗಡುವುಗಳನ್ನು ವಿಧಿಸಿತು? ರಾಜ್ಯದ ಮಸೂದೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಗಡುವು ವಿಧಿಸುವುದು ಹೇಗೆ ಸಾಧ್ಯ ಎಂದು ರಾಷ್ಟ್ರಪತಿಗಳು ನ್ಯಾಯಾಲಯಕ್ಕೆ ಪ್ರಶ್ನಿಸಿದ್ದಾರೆ.

ಸಂವಿಧಾನದಲ್ಲಿ ಅಂತಹ ಯಾವುದೇ ನಿಯಮಗಳಿಲ್ಲ. ಹೀಗಿದ್ದರೂ, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್. ಮಹದೇವನ್ ಅವರ 415 ಪುಟಗಳ ತೀರ್ಪಿನ ಮರುಪರಿಶೀಲನಾ ಅರ್ಜಿಯು ಸಕಾರಾತ್ಮಕ ಫಲಿತಾಂಶ ನೀಡಿಲ್ಲ. ಈ ತೀರ್ಪು ಸ್ಪಷ್ಟವಾಗಿ ಮಿತಿಯನ್ನು ಮೀರಿದೆ ಎಂದು ಪರಿಗಣಿಸಲಾಗಿದೆ.

ಈ ವಿಚಾರದಲ್ಲಿ ನ್ಯಾಯಾಲಯದ ಮುಂದಿಟ್ಟಿರುವ 14 ಪ್ರಶ್ನೆಗಳಿಗೆ ರಾಷ್ಟ್ರಪತಿಗಳು ಉತ್ತರ ಕೇಳಿದ್ದಾರೆ.

Share This Article