ಚಾಮರಾಜನಗರ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತಮ್ಮ ಎದುರಾಳಿಗಳನ್ನು ಸೋಲಿಸಲು ಹಲವು ತಂತ್ರಗಳನ್ನು ಉಪಯೋಗಿಸುತ್ತಿದ್ದಾರೆ. ಅದರಲ್ಲಿ ಇದೀಗ ಮಾಟ-ಮಂತ್ರದ ಸರದಿ ಒಂದಾಗಿದೆ.
ಲೋಕಸಭಾ ಚುನಾವಣೆಯನ್ನು ಗೆಲ್ಲಲು ಮೂರು ಪಕ್ಷದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಕೊಳ್ಳೇಗಾಲಕ್ಕೆ ಬಂದು ಮಾಟ-ಮಂತ್ರ ಮಾಡಿಸಿ ತಮ್ಮ ಎದುರಾಳಿಗಳನ್ನು ಸೋಲಿಸುವ ತಂತ್ರಕ್ಕೆ ಮುಂದಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ರಾಜ್ಯದಲ್ಲಿ ಮಾಟ-ಮಂತ್ರಕ್ಕೆ ಫುಲ್ ಫೇಮಸ್ ಆಗಿದ್ದು, ಇದ್ರಿಂದ ಇಲ್ಲಿಗೆ ಇದೀಗ 28 ಲೋಕಸಭಾ ಕ್ಷೇತ್ರದ ಹಲವು ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಾರಿಯ ಲೋಕಸಭಾ ಚುನಾವಣೆಯ ಹೈ ವೊಲ್ಟೇಜ್ ಆಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೂ ಮಾಟ-ಮಂತ್ರ ಮಾಡಿಸುವುದಕ್ಕೆ ಕೆಲವರು ಇಲ್ಲಿಗೆ ಬರುತ್ತಿದ್ದಾರೆ. ಪ್ರಮುಖವಾಗಿ ಕೆಲವು ಅಭ್ಯರ್ಥಿಗಳ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಎಂದು ಹೇಳಿಕೊಂಡು ಪೂಜೆ ಸಲ್ಲಿಸುತ್ತಿದ್ದಾರೆ. ಈಗಾಗಲೇ ತಮ್ಮ ಅಭ್ಯರ್ಥಿ ಗೆಲ್ಲಬೇಕೆಂದು ಸುದರ್ಶನ ಹೋಮ, ಅನ್ನಸಂರ್ತಪಣೆ, ತಡೆ ಹೋಡಸಿ ಇತರ ಪೂಜೆಗಳನ್ನು ಮಾಡಿಸಿದ್ದಾರೆ.
ಇದಲ್ಲದೇ ರಾಜ್ಯದ ಪ್ರಮುಖ ರಾಜಕಾರಣಿಗಳು ಕೊಳ್ಳೇಗಾಲಕ್ಕೆ ಮಧ್ಯರಾತ್ರಿ ವೇಳೆ ಬಂದು ತಮ್ಮ ಪಕ್ಷದ ಗೆಲುವಿಗೆ ಮಾಟ-ಮಂತ್ರ ಮಾಡಿಸಿದ್ದಾರೆ. ಒಟ್ಟಾರೆ ಚುನಾವಣೆಯ ಕಾವು ಹೆಚ್ಚುತ್ತಿದ್ದ ಹಾಗೆ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮಾಟ-ಮಂತ್ರದ ಮೊರೆ ಹೋಗುತ್ತಿದ್ದು, ಈ ಸ್ಟಾಟರ್ಜಿ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.