ಧಾರವಾಡ: ಕ್ಯಾಂಟರ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯಗಳಾಗಿರುವ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿಯ ಬೈಪಾಸ್ ಹೆದ್ದಾರಿಯಲ್ಲಿ ನಡೆದಿದೆ.
ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ. ವೇಗವಾಗಿ ಚಲಿಸುತ್ತಿದ್ದರಿಂದ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಳಗಿನಜಾವ ಘಟನೆ ನಡೆದಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ರಣ ಮಳೆ- ಪ್ರವಾಹ ಪರಿಸ್ಥಿತಿ
ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.