ಬೆಂಗಳೂರು: ಕ್ಯಾಂಟರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಒರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ನೆಲಮಂಗಲ ತಾಲೂಕಿನ ಹೊಸನಿಜಗಲ್ ಬಳಿ ನಡೆದಿದೆ.
20 ವರ್ಷದ ಸಾಧಿಕ್ ಮಹಮದ್ ಮೃತ ದುರ್ದೈವಿ. ಕಾರಿನ ಟಯರ್ ಬ್ಲಾಸ್ಟ್ ಆಗಿ ಕಾರು ನೇರವಾಗಿ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು-ಬೆಂಗಳೂರು ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.