Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ

Dakshina Kannada

ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ

Public TV
Last updated: July 31, 2025 7:18 pm
Public TV
Share
3 Min Read
Captain Brijesh Chowta Amit Shah
SHARE

– ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಮನವಿ

ನವದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ (NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ (Captain Brijesh Chowta) ಮನವಿ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಲ್ಲಿ ಸಚಿವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದರು, ಮಂಗಳೂರು ತನ್ನ ಸೂಕ್ಷ್ಮ ಭೌಗೋಳಿಕ ಸ್ಥಾನದಿಂದಾಗಿ ಮತ್ತು ಭಟ್ಕಳ, ಕಾಸರಗೋಡಿನಂತಹ ಉಗ್ರ ಚಟುವಟಿಕೆಗಳ ಕೇಂದ್ರಗಳಿಗೆ ಹತ್ತಿರವಿರುವುದರಿಂದ, ರಾಷ್ಟ್ರ ವಿರೋಧಿ ಶಕ್ತಿಗಳು ತಮ್ಮ ವಕ್ರ ದೃಷ್ಟಿ ಬೀರಿರುವುದಕ್ಕೆ ಕೆಲವೊಂದು ಘಟನೆಗಳು ಸಾಕ್ಷಿಯಾಗಿವೆ. ಅಲ್ಲದೇ, ನಿಷೇಧಿತ ಪಿಎಫ್‌ಐ ಸಂಘಟನೆ ರಾಜಕೀಯ ಮುಖವಾಣಿ ಎಸ್‌ಡಿಪಿಐ ತನ್ನ ಮೂಲಕ ಹೊಸ ರೂಪ ತಳೆದು ಮುಂದುವರಿದಿರುವುದು ಮಾತ್ರವಲ್ಲದೇ, ಪ್ರಜಾಪ್ರಭುತ್ವದ ವೇದಿಕೆಗಳನ್ನು ಬಳಸಿಕೊಂಡು ತಮ್ಮ ಮೂಲಭೂತವಾದಿ, ಅಜೆಂಡಾಗಳನ್ನು ಮುಂದುವರೆಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಭರ್ಜರಿ ಪಾರ್ಟಿ ಮಾಡಿದ್ದ ಆರೋಪಿಗಳು!

Hindu activist suhas shetty brutally murdered in Bajpe Mangaluru

ಜಿಲ್ಲೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಬಂಧನಗಳು ಮತ್ತು ಚಟುವಟಿಕೆಗಳು ಕಳೆದ 10 ವರ್ಷಗಳಲ್ಲಿ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಪ್ರಮುಖ ಸದಸ್ಯರು ಸೇರಿದಂತೆ ಒಟ್ಟು 21 ಆರೋಪಿಗಳನ್ನು ಎನ್‌ಐಎ ತನಿಖಾಧಿಕಾರಿಗಳು ಈಗಾಗಲೇ ಬಂಧಿಸಿದ್ದಾರೆ. ಪಿಎಫ್‌ಐ ಸಂಘಟನೆಯ ಗುಪ್ತ ಭಾಗವಾಗಿದ್ದ ಸರ್ವೀಸ್ ಟೀಂನ ಅಸ್ತಿತ್ವ, ರಹಸ್ಯ ಸಭೆಗಳು, ತರಬೇತಿ ಕೇಂದ್ರದ ಬಗ್ಗೆಯೂ ಎನ್‌ಐಎ ತನಿಖೆಗಳು ಬೆಳಕು ಚೆಲ್ಲಿತ್ತು. ಹೀಗಿರುವಾಗ, ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಆರಂಭಿಸುವ ಅಗತ್ಯತೆಯನ್ನು ಕ್ಯಾ. ಚೌಟ ಅವರು ಗೃಹ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಈ ನಡುವೆ, ಕಡಲ ನಗರಿಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅಂಕುಶ ಹಾಕಲು ವಿನಂತಿಸಿರುವ ಸಂಸದ ಕ್ಯಾ. ಚೌಟ ಅವರು, ಕಳೆದ ಮಾರ್ಚ್‌ನಲ್ಲಿ ಮಂಗಳೂರಿನಲ್ಲಿ 75 ಕೋಟಿ ಮೌಲ್ಯದ 37 ಕೆ.ಜಿ.ಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಅಂತರರಾಷ್ಟ್ರೀಯ ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿತ್ತು. ಪ್ರಸಕ್ತ ವರ್ಷದಲ್ಲೇ ಇಲ್ಲಿವರೆಗೆ ಜಿಲ್ಲೆಯಲ್ಲಿ 375ಕ್ಕೂ ಹೆಚ್ಚು ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, 67ಕ್ಕೂ ಹೆಚ್ಚು ವ್ಯಕ್ತಿಗಳು ಬಂಧನವಾಗಿರುವ ಬಗ್ಗೆ ಅಂಕಿ-ಅಂಶಗಳಿವೆ. ಡ್ರಗ್ಸ್ ಚಟುವಟಿಕೆಗಳು ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸಿನ ನೆರವು, ಕುಮ್ಮಕ್ಕು ಒದಗಿಸುವುದಲ್ಲದೇ, ಸಾಮಾಜಿಕ ಅಸ್ಥಿರತೆ, ಅಪರಾಧ ಹಾಗೂ ಗಡಿಗಳಲ್ಲಿ ಭದ್ರತಾ ಸವಾಲುಗಳನ್ನು ಹೆಚ್ಚಿಸುವ ಮೂಲಕ ರಾಷ್ಟ್ರೀಯ ಭದ್ರತೆಗೂ ಗಂಭೀರ ಬೆದರಿಕೆಯಾಗುತ್ತಿದೆ ಎಂದು ಸಂಸದರು ಗೃಹ ಸಚಿವರಿಗೆ ನೀಡಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

Praveen Nettar copy

ಎನ್‌ಐಎ ಇತ್ತೀಚೆಗೆ ಮಂಗಳೂರಿನಲ್ಲಿ ತನ್ನ ಕಾರ್ಯ ಚಟುವಟಿಕೆಗಳನ್ನು ಹೆಚ್ಚಿಸಿರುವುದು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದ್ದು, ಜಿಹಾದಿ ಉಗ್ರವಾದ, ಸಂಘಟಿತ ಅಪರಾಧ ಮತ್ತು ಅಂತರರಾಷ್ಟ್ರೀಯ ಕಳ್ಳಸಾಗಣೆ ಸೇರಿದಂತೆ ಪುನರಾವರ್ತಿತ ಬೆದರಿಕೆಗಳನ್ನು ಪರಿಗಣಿಸಿ, ಮಂಗಳೂರಿನಲ್ಲಿ ಸಮಗ್ರ ಗುಪ್ತಚರ ಸಮನ್ವಯ ಮತ್ತು ಕಾರ್ಯಾಚರಣೆಯ ಸಾಮರ್ಥ್ಯದೊಂದಿಗೆ ಶಾಶ್ವತವಾದ ಸಂಪೂರ್ಣ ಸುಸಜ್ಜಿತ ಎನ್‌ಐಎ ಕಚೇರಿಯನ್ನು ಸ್ಥಾಪಿಸಲು ವಿನಂತಿಸಿದ್ದು, ಇದರಿಂದ ಇಡೀ ದಕ್ಷಿಣ ಭಾರತಕ್ಕೆ ಒಂದು ದೃಢ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುವ ಕರಾವಳಿಗರ ಬೇಡಿಕೆಯನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕೆಂದು ಎಂದು ಕ್ಯಾ. ಬ್ರಿಜೇಶ್ ಚೌಟ ಅವರು ಗೃಹ ಸಚಿವ ಅಮಿತ್‌ ಶಾ ಅವರಲ್ಲಿ ವಿನಂತಿಸಿದ್ದಾರೆ.

ಮೂರು ತಿಂಗಳ ಹಿಂದೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ಎನ್‌ಐಎ ತನಿಖೆಗೆ ವಹಿಸಿದೆ. ಪ್ರಕರಣದ ಗಂಭೀರತೆ ಅರಿತು ಸುಹಾಸ್‌ ಹತ್ಯೆಯನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವಲ್ಲಿ ಕೇಂದ್ರ ಗೃಹ ಸಚಿವರು ಮುತುವರ್ಜಿ ವಹಿಸಿ ತ್ವರಿತ ಕ್ರಮ ಕೈಗೊಂಡಿರುವುದಕ್ಕೆ ಸಂಸದ ಬ್ರಿಜೇಶ್ ಚೌಟ ಅವರು ಇಂದು ಅಮಿತ್‌ ಶಾ ಅವರನ್ನು ಭೇಟಿಯಾದ ವೇಳೆ ಸುಹಾಸ್ ಹೆತ್ತವರು, ಕಾರ್ಯಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ನಿರ್ಧಾರವು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ಭರವಸೆ ನೀಡಿದೆ ಮತ್ತು ದಕ್ಷಿಣ ಕನ್ನಡದ ಜನತೆಗೆ ಭದ್ರತೆಯ ಭಾವನೆಯನ್ನು ಹೆಚ್ಚಿಸಲಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಕ್ತಕ್ಕೆ ರಕ್ತವೇ ಉತ್ತರ, ಸುಹಾಸ್‌ ಹತ್ಯೆ ಬಳಿಕ ಪ್ರತೀಕಾರದ ಪೋಸ್ಟ್‌ – 12 ಎಫ್‌ಐಆರ್‌ ದಾಖಲು

TAGGED:Amit ShahCaptain Brijesh ChowtaMangalurusuhas shettyಅಮಿತ್ ಶಾಕ್ಯಾಪ್ಟನ್‌ ಬ್ರಿಜೇಶ್‌ ಚೌಟಮಂಗಳೂರುಸುಹಾಸ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
5 hours ago
Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
5 hours ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
6 hours ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
6 hours ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
6 hours ago
Shivamogga Hindu Student Murder Siddaramaiah
Bengaluru City

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?