Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಎನ್‌ಐಎಗೆ ಹಸ್ತಾಂತರಿಸಲು ಅಮಿತ್ ಶಾಗೆ ಸಂಸದ ಕ್ಯಾ.ಚೌಟ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಎನ್‌ಐಎಗೆ ಹಸ್ತಾಂತರಿಸಲು ಅಮಿತ್ ಶಾಗೆ ಸಂಸದ ಕ್ಯಾ.ಚೌಟ ಪತ್ರ

Dakshina Kannada

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಎನ್‌ಐಎಗೆ ಹಸ್ತಾಂತರಿಸಲು ಅಮಿತ್ ಶಾಗೆ ಸಂಸದ ಕ್ಯಾ.ಚೌಟ ಪತ್ರ

Public TV
Last updated: May 2, 2025 4:24 pm
Public TV
Share
3 Min Read
Brijesh Chowta
SHARE

ಮಂಗಳೂರು: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತ್‌ಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ (Captain Brijesh Chowta) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿದ್ದಾರೆ.

The brutal public murder of Suhas Shetty has left a deep wound in the hearts of all of coastal Karnataka.

For this is not the first—nor is it new. Every time Congress comes to power, our region sees a rise in targeted killings of Hindu Karyakartas.

Also it follows the same… pic.twitter.com/b7cqldO8A5

— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) May 2, 2025

ಪತ್ರದಲ್ಲೇನಿದೆ?
ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಘಟನೆಯಿಂದ ನಾನು ದಿಗ್ಭ್ರಮೆಗೊಂಡಿದ್ದು, ಭೀಕರ ಕೊಲೆ ಕೃತ್ಯದ ಕುರಿತು ತೀವ್ರ ಆತಂಕ ಮತ್ತು ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಘಟನೆಯು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರತೆ, ಬಲಗೊಳ್ಳುತ್ತಿರುವ ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳ ಅಟ್ಟಹಾಸಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯು ಕರಾವಳಿ ಮಾತ್ರವಲ್ಲ, ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಸ್‌ಡಿಪಿಐ, ಪಿಎಫ್ಐ ಮೇಲಿನ ಕೇಸ್‌ ವಾಪಸ್‌ ಪಡೆದು ಅಪರಾಧಕ್ಕೆ ಬೆಂಬಲ: ಸಿಎಂ ವಿರುದ್ಧ ಸಿ.ಟಿ ರವಿ ಕೆಂಡ

ಈ ಹಿಂದೆಯೂ ಇದೇ ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರಾದ ಸುಳ್ಯದ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ನಡೆಸಿದ್ದರು. ಈ ಸಂಘಟನೆಯನ್ನು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಈಗಾಗಲೇ ನಿಷೇಧಿಸಿದೆ. ಇಷ್ಟಾಗಿಯೂ ಈಗ ಪ್ರವೀಣ್ ಮಾದರಿಯಲ್ಲೇ ಮತ್ತೊಬ್ಬ ಹಿಂದೂ ಯುವಕ ತನ್ನ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ನೋವಿನ ವಿಚಾರ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್‌ಐನಂತಹ ಮೂಲಭೂತವಾದಿ ಸಂಘಟನೆಗಳು ಇನ್ನೂ ಸ್ಲೀಪರ್ ಸೆಲ್‌ನಂತೆ ಜೀವಂತವಾಗಿರುವುದನ್ನು ಸ್ಪಷ್ಟಪಡಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಇದು ಧರ್ಮದ ನಡುವೆ ಆದ ಗಲಾಟೆ ಅಲ್ಲ: ಯು.ಟಿ.ಖಾದರ್

ತಮ್ಮ ಮಗನನ್ನು ಕಳೆದುಕೊಂಡಿರುವ ಸುಹಾಸ್ ಶೆಟ್ಟಿ ಅವರ ಕುಟುಂಬವು ದಿಗ್ಭ್ರಾಂತಗೊಂಡು ನ್ಯಾಯಕ್ಕಾಗಿ ಕಾಯುತ್ತಿದೆ. ಈ ಭಾಗದ ಚುನಾಯಿತ ಪ್ರತಿನಿಧಿಯಾಗಿ ಮತ್ತು ಇಲ್ಲಿನ ನೋವು ಹಾಗೂ ಹತಾಶೆಯನ್ನು ವೈಯಕ್ತಿಕವಾಗಿ ಕಂಡಿರುವ ವ್ಯಕ್ತಿಯಾಗಿ, ಈ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಈ ಕೂಡಲೇ ಎನ್‌ಐಎಗೆ (National Investigation Agency) ಹಸ್ತಾಂತರಿಸಬೇಕೆಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

ಈ ಭೀಕರ ಘಟನೆಯಲ್ಲಿ ನಿಷೇಧಿತ ಪಿಎಫ್‌ಐ (Popular Front of India) ಸಂಘಟನೆಯ ಕಾರ್ಯಕರ್ತರ ಕೈವಾಡದ ಸಾಧ್ಯತೆ ಇರುವುದರಿಂದ ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅತ್ಯಗತ್ಯ. ದಕ್ಷಿಣ ಕನ್ನಡ (Dakshina Kannada) ಮಾತ್ರವಲ್ಲ ಈ ದೇಶದ ಯಾವುದೇ ಭಾಗದಲ್ಲಿ ಮೂಲಭೂತವಾದಿ, ರಾಷ್ಟ್ರ ವಿರೋಧಿ ಮತ್ತು ಜಿಹಾದಿ ಮಾನಸಿಕತೆಯ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕೊಲೆ ಕೃತ್ಯದ ಹಿಂದಿರುವ ಸಮಾಜ ಘಾತುಕ ಸಂಘಟನೆಗಳು, ಹತ್ಯೆ ಹಿಂದಿನ ಒಳಸಂಚು, ಇದರಲ್ಲಿ ಭಾಗಿಯಾದವರು ಹಾಗೂ ಕುಮ್ಮಕ್ಕು ನೀಡಿರುವ ದುಷ್ಟಶಕ್ತಿಯನ್ನು ಬುಡ ಸಮೇತ ಕಿತ್ತು ಹಾಕಬೇಕು. ಆ ಮೂಲಕ ಕಾನೂನು ಮೇಲಿರುವ ಜನರ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ: ವಿಜಯೇಂದ್ರ ಘೋಷಣೆ

ಸುಹಾಸ್ ಶೆಟ್ಟಿ ಅವರ ಹತ್ಯೆ ವಿಚಾರವಾಗಿ ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ಮಧ್ಯಪ್ರವೇಶಿಸಿ, ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ನೆರವು ನೀಡಿದ ಎಲ್ಲರನ್ನೂ ತ್ವರಿತವಾಗಿ ನ್ಯಾಯದ ಮುಂದೆ ತರಲು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದ್ದಾರೆ.

TAGGED:Amit ShahBrijesh ChowtaMangaluruNIAsuhas shettyಅಮಿತ್ ಶಾಏನ್‌ಐಎಕ್ಯಾ.ಬ್ರಿಜೇಶ್‌ ಚೌಟಮಂಗಳೂರುಸುಹಾಸ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
3 minutes ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
4 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
22 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
30 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
37 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?