Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ನಿಗ್ರಹಿಸಲು ಕಠಿಣ ಕ್ರಮಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ನಿಗ್ರಹಿಸಲು ಕಠಿಣ ಕ್ರಮಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ

Bengaluru City

ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ನಿಗ್ರಹಿಸಲು ಕಠಿಣ ಕ್ರಮಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ

Public TV
Last updated: December 19, 2021 9:36 pm
Public TV
Share
3 Min Read
Capt Ganesh Karnik
SHARE

ಬೆಂಗಳೂರು: ನಗರದ ಶಿವಾಜಿನಗರದಲ್ಲಿ ರಾಷ್ಟ್ರಭಕ್ತ ಮಹಾಪುರುಷರ ಪುತ್ಥಳಿಗೆ ಮಸಿ ಬಳಿದು ಅವಮಾನಗೊಳಿಸುವ ಮೂಲಕ ಹಿಂಸಾಚಾರಕ್ಕೆ ಆಸ್ಪದ ಕೊಟ್ಟು, ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ವಿನಾಕಾರಣ ಆತಂಕವನ್ನು ಸೃಷ್ಟಿಸಿರುವ ವಿಚ್ಛಿದ್ರಕಾರಿ ದುಷ್ಟಶಕ್ತಿಗಳನ್ನು ಮತ್ತು ಈ ಘಟನೆಗಳ ಹಿಂದಿರುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Chhatrapati Shivaji Maharaj

ಬೆಂಗಳೂರಿನ ಶಿವಾಜಿನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪುತ್ಥಳಿಗೆ ಮಸಿ ಬಳಿದು ಬಂಧಿತರಾಗಿರುವ ಏಳು ವ್ಯಕ್ತಿಗಳನ್ನು ವಿಚಾರಿಸಿ ಈ ರೀತಿಯ ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಚಟುವಟಿಕೆಗಳ ಹಿಂದೆ ಇರುವ ಷಡ್ಯಂತ್ರವನ್ನು ಪತ್ತೆ ಹಚ್ಚುವುದು ಅತ್ಯಂತ ಅನಿವಾರ್ಯವಾಗಿದೆ. ಸಮಾಜದ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ಈ ಷಡ್ಯಂತ್ರ ಒಂದು ಖಂಡನಾರ್ಹ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಬಂಧಿತ ಆರೋಪಿ ನವೀನ್ ಗೌಡ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಸನ್ಮಾನ್ಯ ಡಿ.ಕೆ ಶಿವಕುಮಾರ್ ಮತ್ತು ಜಮೀರ್ ಅಹಮದ್ ಅವರ ನಿಕಟವರ್ತಿಯಾಗಿದ್ದು ಕಾಂಗ್ರೆಸ್ ಕಾರ್ಯಕರ್ತನಾಗಿರುತ್ತಾನೆ. ನವೀನ್ ಗೌಡನ ಕಾಂಗ್ರೆಸ್ ಜೊತೆಗಿನ ನಂಟು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕೋಮುಗಲಭೆಯ ಟ್ವೀಟ್ ಈ ಘಟನೆಗಳ ಹಿಂದೆ ರಾಜ್ಯಾದ್ಯಂತ ಕೋಮುಗಲಭೆ ಸೃಷ್ಟಿಸಿ ಕ್ಷೋಭೆಯ ವಾತಾವರಣ ನಿರ್ಮಾಣ ಮಾಡುವ ಕಾಂಗ್ರೆಸ್‍ನ್ನು ಷಡ್ಯಂತ್ರದ ಭಾಗವಾಗಿರುವುದು ಕಂಡುಬರುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಕಾಂಗ್ರೆಸ್, ಎನ್‍ಸಿಪಿ ಮತ್ತು ಶಿವಸೇನೆಯ ಆಡಳಿತವಿರುವ ಮಹಾರಾಷ್ಟ್ರದಲ್ಲಿ ದುಷ್ಟ ಶಕ್ತಿಗಳು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಉದ್ವಿಗ್ನಗೊಳಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ದೇಶಕ್ಕೆ ಅಪಾಯ. ಅದು ವಿರೋಧ ಪಕ್ಷವಾಗಿದ್ದರೆ ದೇಶಕ್ಕೆ ಎರಡು ಪಟ್ಟು ಹೆಚ್ಚು ಅಪಾಯಕಾರಿಯಾಗಿರುತ್ತದೆ ಎನ್ನುವುದನ್ನು ನಾಡಿನ ಜನತೆ ಗಮನಿಸಬೇಕೆಂದು ವಿನಂತಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ಹುತಾತ್ಮರಾದ ಕನ್ನಡ ನಾಡಿನ ಹೆಮ್ಮಯ ಪುತ್ರ ಗಂಡುಗಲಿ ಸಂಗೊಳ್ಳಿ ರಾಯಣ್ಣ, ಬ್ರಿಟಿಷ್ ದುರಾಡಳಿತದ ವಿರುದ್ಧ ಸೆಟೆದು ನಿಂತು ಹೋರಾಟ ಮಾಡಿ ಮಾತೃಶಕ್ತಿಗೆ ಗೌರವ ತಂದುಕೊಟ್ಟಿರುವ ದೇಶಭಕ್ತೆ ವೀರರಾಣಿ ಕಿತ್ತೂರು ಚನ್ನಮ್ಮ, ಮೊಘಲ್ ದುರಾಡಳಿತ ಮತ್ತು ಆ ಸಮಯದಲ್ಲಿ ದೇಶಾದ್ಯಂತ ನಡೆದಿರುವಂಥ ಕ್ರೌರ್ಯ, ಅತ್ಯಾಚಾರ ಹಾಗೂ ಬಲಾತ್ಕಾರದ ಮತಾಂತರಗಳನ್ನು ಪ್ರತಿಭಟಿಸಿ ಮೊಘಲ್ ಸಾಮ್ರಾಜ್ಯಕ್ಕೆ ಸವಾಲನ್ನು ಹಾಕಿ ಹಿಂದೂ ಸಾಮ್ರಾಜ್ಯದ ಸ್ಥಾಪನೆಗೆ ಕಾರಣಕರ್ತರಾದ ಶಿವಾಜಿ ಮಹಾರಾಜ್ ಮುಂತಾದ ಮಹಾನ್ ದೇಶಭಕ್ತರುಗಳು ನಾಡಿನ ಜನತೆಗೆ ನಿತ್ಯ ನಿರಂತರ ದೇಶಪ್ರೇಮದ ಪ್ರೇರಣೆ ನೀಡುವ ಮಹಾಪುರುಷರು. ಈ ರಾಷ್ಟ್ರಭಕ್ತರಿಗೆ ಅವಮಾನವೆಸಗುವ ಕೃತ್ಯಗಳು ಇಡೀ ದೇಶಕ್ಕೆ ಮಾಡಿದ ಅಪಮಾನ. ಈ ಅಪಚಾರವನ್ನು ದೇಶದ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸ್ಥಾಪಿಸಲ್ಪಟ್ಟಿರುವ ಮಹಾ ಪುರುಷರ ಪುತ್ಥಳಿಗಳನ್ನು ಸಂರಕ್ಷಿಸಲು ಮತ್ತು ಕಿಡಿಗೇಡಿಗಳ ದುಷ್ಕೃತ್ಯಗಳಿಗೆ ಅವಕಾಶವಿಲ್ಲದಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಎಂಇಎಸ್ ಪುಂಡಾಟ ನಿಲ್ಲಲಿ: ಡಾಲಿ ಧನಂಜಯ್

ಮಹಾನ್ ದೇಶಭಕ್ತರ ಪುತ್ಥಳಿಗಳನ್ನು ಅಗೌರವಿಸುವುದರ ಮೂಲಕ ನಾಡಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಿಸಿ, ಕ್ಷೋಭೆ ಉಂಟು ಮಾಡುವ ದುಷ್ಕೃತ್ಯವನ್ನು ಖಂಡಿಸುತ್ತಾ, ಈ ಕೃತ್ಯದ ಹಿಂದಿರುವ ಷಡ್ಯಂತ್ರವನ್ನು ಬಯಲಿಗೆಳೆದು ಷಡ್ಯಂತ್ರದಲ್ಲಿ ಭಾಗವಹಿಸಿದ ಎಲ್ಲ ರಾಷ್ಟ್ರದ್ರೋಹಿಗಳನ್ನು ಬಂಧಿಸಿ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿಯ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳನ್ನು ಒತ್ತಾಯಿಸುತ್ತಾ, ಮುಂದಿನ ದಿನಗಳಲ್ಲಿ ಈ ರೀತಿಯ ದುಷ್ಕೃತ್ಯಗಳು ನಡೆಯದಿರುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

TAGGED:Basavaraj BommaibjpCaptain Ganesh Karnikಕ್ಯಾಪ್ಟನ್ ಗಣೇಶ್ ಕಾರ್ಣಿಕ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
18 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
39 minutes ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
1 hour ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
1 hour ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?