ಕಠ್ಮಂಡು: ಕಾರು ಹಾಗೂ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಭಾರತೀಯ ಪ್ರವಾಸಿಗರು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಿಮಲಚಂದ್ರ ಅಗರವಾಲ್ (40), ಸಾಧನಾ ಅಗರವಾಲ್ (35), ಸಂಧ್ಯಾ ಅಗರವಾಲ್ (40), ರಾಕೇಶ್ ಅಗರವಾಲ್ (55) ಮತ್ತು ತನ್ಹು ಜಿಲ್ಲೆಯ ಖೈರೇನಿಯ ದಿಲ್ ಬಹದ್ದೂರ್ ಬಾಸ್ನೆಟ್ (36) ಮೃತರು. ಠಾಕ್ರೆ ಪ್ರದೇಶದ ಫೃಥ್ವಿ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಭಾರತೀಯ ಪ್ರಜೆಗಳು ಪೋಖರಾಗೆ ಭೇಟಿ ನೀಡಿ ನಂತರ ಕಠ್ಮುಂಡುವಿಗೆ ಹಿಂದುರುಗಿತ್ತಿದ್ದರು. ಈತನು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸ್ ಕಠ್ಮಂಡುವಿನಿಂದ ಧಾಡಿಂಗ್ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ ಕಾರಿನ ಚಾಲಕ ನೇಪಾಳದವನಾಗಿದ್ದನು. ಇದನ್ನೂ ಓದಿ: ಕೈ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್
ಉಳಿದ ಭಾರತೀಯರು ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಸ್ಥಳೀಯ ಆಸ್ಪತ್ರೆಗ ದಾಖಲಿಸಲಾಗುತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಫ್ರಾನ್ಸ್ ಅಧ್ಯಕ್ಷರನ್ನು ಅಭಿನಂದಿಸಿದ ಮೋದಿ