ಚಿಕ್ಕಬಳ್ಳಾಪುರ: ಇ-ಬೈಕ್ಗೆ ಸ್ಯಾಂಟ್ರೋ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಬೆಮೆಲ್ ಶೋ ರೂಂ ಮುಂಭಾಗ ನಡೆದಿದೆ.
ಚಿಕ್ಕಬಳ್ಳಾಪುರ ನಗರದಿಂದ ಸ್ವಗ್ರಾಮ ಕುಪ್ಪಹಳ್ಳಿ ಬಳಿ ಇ-ಬೈಕ್ನಲ್ಲಿ ಮಮತಾ ಹಾಗೂ ಆನಂದ್ ದಂಪತಿ ಬರುತ್ತಿದ್ದರು. ಈ ವೇಳೆ ಬೆಂಗಳೂರು ಕಡೆಯಿಂದ ಬರ್ತಿದ್ದ ಸ್ಯಾಂಟ್ರೋ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇ-ಬೈಕ್ ಮುಂಭಾಗ ಜಖಂಗೊಂಡಿದ್ದು, ಕಾರಿನ ಗಾಜು ಸಹ ಜಖಂ ಆಗಿ ಮುಂಭಾಗ ಹಾನಿಯಾಗಿದೆ. ಇದನ್ನೂ ಓದಿ: ಪ.ಬಂಗಾಳದ 11 ಜಿಲ್ಲೆಗಳಲ್ಲಿ ಕಾಡುತ್ತಿದೆ ಕಪ್ಪು ಜ್ವರ ಅಥವಾ ‘ಕಾಲಾ-ಅಜರ್’ – ಲಕ್ಷಣವೇನು?
ಬೈಕ್ನಲ್ಲಿದ್ದ ಆನಂದ್ ಕಾಲು ಮುರಿದಿದ್ದು, ಮಮತಾಗೂ ಗಾಯಗಳಾಗಿವೆ. ಇಬ್ಬರನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದಂಪತಿ ಚಿಕ್ಕಬಳ್ಳಾಪುರದಲ್ಲಿ ಸ್ವಗ್ರಾಮ ಕುಪ್ಪಹಳ್ಳಿಗೆ ಹೋಗುತ್ತಿದ್ದರು. ಅಪಘಾತ ನಂತರ ಕಾರು ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.
ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ನಂತರ ಟ್ರಾಫಿಕ್ ಜಾಮ್ ಉಂಟಾದ ಕಾರಣ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದನ್ನೂ ಓದಿ: ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ