ಬೆಂಗಳೂರು: ಆಟೋ ರಿಕ್ಷಾಗೆ (Auto Rickshaw) ಕಾರು ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಹೊಸಕೋಟೆಯಿಂದ (Hoskote) ಕೆಆರ್ ಪುರಂ ಮಾರ್ಗವಾಗಿ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ಸಿಗದೇ ಮುಂದೆ ಹೋಗುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಶನಿವಾರ ತಡರಾತ್ರಿ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: Israel vs Iran War: ಹೊತ್ತಿ ಉರಿದ ಟೆಹ್ರಾನ್- ತೈಲ ಡಿಪೋ ಮೇಲೆ ಇಸ್ರೇಲ್ ದಾಳಿ
ಆಟೋದಲ್ಲಿ ಮಗು ಕೂಡಾ ಇದ್ದು, ತರಚಿದ ಗಾಯಗಳಿಂದ ಬಚಾವ್ ಆಗಿದೆ. ಕಾರಿನಲ್ಲಿದ್ದ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ – ಅವಶೇಷಗಳಡಿ ಸೂಟ್ಕೇಸ್ನಲ್ಲಿದ್ದ ಹಣ ಪತ್ತೆ