ರಾಮನಗರ: ಮಿನಿ ಬಸ್ಗೆ ಕಾರು ಡಿಕ್ಕಿಯಾಗಿ (Car) ಪ್ರೇಮಿಗಳು (Lovers) ಸಾವನ್ನಪ್ಪಿರುವ ದಾರುಣ ಘಟನೆ ಕನಕಪುರ (Kanakapura) ತಾಲೂಕಿನ ಕೆಬ್ಬಹಳ್ಳಿ (Kebbahalli) ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಕೆಬ್ಬಹಳ್ಳಿ ಗ್ರಾಮದ ದೀಪಕ್ (25) ಮತ್ತು ಶೈಲ (22) ಮೃತ ಪ್ರೇಮಿಗಳು. ಕನಕಪುರದಿಂದ ದೀಪಕ್ ಸ್ವಗ್ರಾಮ ಕೆಬ್ಬಹಳ್ಳಿಗೆ ಅತಿವೇಗವಾಗಿ ಕಾರು ಚಲಾಯಿಸುತ್ತಿದ್ದ. ದೀಪಕ್ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಮಿನಿ ಬಸ್ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ (Accident) ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಸರ್ಕಾರಿ ಬಸ್ಗಳ ಮುಖಾಮುಖಿ ಡಿಕ್ಕಿ – 5 ಅಂಬುಲೆನ್ಸ್ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ
ಕಾರಿನಲ್ಲಿದ್ದ ಶೈಲ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ದೀಪಕ್ ಕೂಡಾ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಬಸ್ಸಿಲ್ಲ – ಮಧ್ಯರಾತ್ರಿ ಚಿಕ್ಕಮಗಳೂರಿನಲ್ಲಿ ಪ್ರಯಾಣಿಕರಿಂದ ಪ್ರತಿಭಟನೆ