– ಫೀಲ್ಡ್ನಲ್ಲಿ ಹೆಸರು ಮಾಡಬೇಕು ಅಂತ ಪುಂಡಾಟ ಮೆರಿದಿದ್ದ ದುರುಳರು
– ಆರೋಪಿಗಳ ವಿರುದ್ಧ ದಾಖಲಾಗಿತ್ತು 28 ಕೇಸ್
ಬೆಂಗಳೂರು: ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು (Car Glass Broken) ಅಟ್ಟಹಾಸ ಮೆರೆದಿದ್ದ ಐವರು ಪುಂಡರನ್ನು ಬ್ಯಾಡರಹಳ್ಳಿ ಪೊಲೀಸರು (Byadarahalli Police) ಬಂಧಿಸಿದ್ದಾರೆ. ಸೊಂಡೆಕೊಪ್ಪದಲ್ಲಿ ಆರೋಪಿಗಳಾದ ಲಿಖಿತ್ , ಜಯಂತ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರಿನ ಮೇಲೆ ಲಾಂಗ್ ಬೀಸಿ ಕೃತ್ಯ
ತಮ್ಮ ಏರಿಯಾದಲ್ಲಿ ಆರೋಪಿಗಳಿಗೆ ಸಾರ್ವಜನಿಕರೊಬ್ಬರು ತಡೆದು ಬುದ್ಧಿ ಹೇಳಿದ್ದರು. ಅಷ್ಟಕ್ಕೇ ಕೋಪಗೊಂಡಿದ್ದ ಆರೋಪಿಗಳು ತಡರಾತ್ರಿ ನಿಲ್ಲಿಸಿದ್ದ ಕಾರಿನ ಮೇಲೆ ಲಾಂಗ್ನಿಂ ಗ್ಲಾಸ್ ಒಡೆದಿದ್ದರು. ಫೀಲ್ಡ್ನಲ್ಲಿ ಹೆಸರು ಮಾಡಲು ಕೃತ್ಯ ಎಸಗಿರುವುದಾಗಿ ಕೇಳಿಬಂದಿದೆ.
ಬ್ಯಾಡರಹಳ್ಳಿಯ ವಾಲ್ಮೀಕಿನಗರ ಮತ್ತು ಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಕಾರ್ ಗ್ಲಾಸ್ ಒಡೆದಿದ್ದ ಈ ಗ್ಯಾಂಗ್ ಬಳಿಕ ಮಾದನಾಯಕನಹಳ್ಳಿಯ ಮಾಗಡಿ ರೋಡ್ ಲಿಮಿಟ್ಸ್ನಲ್ಲಿ ಚಾಲಕನ ಮೇಲೆ ಲಾಂಗ್ ಬೀಸಿತ್ತು. ಲಾರಿ ಗ್ಲಾಸ್ ಒಡೆದು, ಚಾಲಕ ಮಲಗಿರೋದನ್ನ ಗಮನಿಸಿ ಹಣಕ್ಕಾಗಿ ಬೆದರಿಕೆ ಹಾಕಿತ್ತು. ಹಣ ತೆಗೆದುಕೊಡುವಷ್ಟರಲ್ಲಿ ಲಾಂಗ್ ಬೀಸಿ ಕೈ ಕೂಡ ಕಟ್ ಮಾಡಿತ್ತು. ಬಳಿಕ ಮೊಬೈಲ್ ಹಾಗೂ 5 ಸಾವಿರ ರೂ. ಹಣ ದೋಚಿ ಪರಿಯಾಗಿತ್ತು ಈ ಪುಂಡರ ಗ್ಯಾಂಗ್.
ಇಷ್ಟಕ್ಕೇ ಸುಮ್ಮನಾಗದ ಈ ಗ್ಯಾಂಗ್ ದೊಡ್ಡಬಳ್ಳಾಪುರದ ಬಳಿ ಕೂಡ ಲಾಂಗ್ ಬೀಸಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಬೆದರಿಕೆ ಹಾಕಿತ್ತಯ. ಸಿಕ್ಕ ಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ತೋರಿಸಿ, ಬೆದರಿಸಿ ಹಣ ವಸೂಲಿ ಮಾಡಿತ್ತು.
ಈ ಸಂಬಂಧ ಆರೋಪಿಗಳ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ 16, ಎಪಿ ನಗರದಲ್ಲಿ 6, ಮಾದನಾಯಕನ ಹಳ್ಳಿಯಲ್ಲಿ 3, ದೊಡ್ಡ ಬಳ್ಳಾಪುರದಲ್ಲಿ 3 ಕೇಸ್ಗಳು ಸೇರಿ ಒಟ್ಟು 28 ಪ್ರಕರಣಗಳು ಆರೋಪಿಗಳ ವಿರುದ್ಧ ದಾಖಲಾಗಿದ್ದವು. ತನಿಖೆ ಕೈಗೊಂಡಿದ್ದ ಪೊಲೀಸರು ಸೊಂಡೆಕೊಪ್ಪದಲ್ಲಿ ಐವರನ್ನು ಬಂಧಿಸಿದ್ದಾರೆ.