ಮಂಗಳೂರು: ಮದುವೆ ಕಾರ್ಯ ನಿಮಿತ್ತ ತೆರಳುತ್ತಿದ್ದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ದೀಪಕ್ ಪೆಟ್ರೋಲ್ ಪಂಪ್ ಬಳಿ ಸೋಮವಾರ ನಡೆದಿದೆ.
ಘಟನೆಯ ತೀವ್ರತೆಗೆ ಕಾರು ಪಲ್ಟಿಯಾಗಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿ ಮಂಗಳೂರು ಮರಕಡ ಕುಂಜತ್ತಬೈಲಿನ ಕುಟುಂಬವೊಂದು ಮದುವೆ ಕಾರ್ಯನಿಮಿತ್ತ ತೆರಳುತ್ತಿತ್ತು ಎನ್ನಲಾಗಿದೆ. ಸದ್ಯಕ್ಕೆ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- Advertisement 2
ಅಪಘಾತದ ಬಳಿಕ ಕೆಲವು ಸಮಯಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸಂಚಾರಿ ಪೊಲೀಸರು ಆಗಮಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.