ಕಾರವಾರ: ಕಾರಿನ ಟೈರ್ ಸ್ಫೋಟಗೊಂಡು ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ದಿವಗಿ ಬಳಿ ನಡೆದಿದೆ.
ಕಾರಿನ ಚಾಲಕ ಪ್ರಸನ್ನ(45) ಕಾರಿನಲ್ಲಿದ್ದ ಮಹಿಳೆ ನಂದಿನಿ (52) ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಜನರಿಗೆ ಗಂಭೀರ ಘಾಯಗಳಾಗಿವೆ. ಸೌಮ್ಯಾ (39), ಶಶಾಂಕ್ (7), ಶ್ವಾವತ್(3) ಹಾಗೂ ಸಚಿನ್(42) ಎಂಬವರಿಗೆ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕಾರಿನಲ್ಲಿದ್ದವರು ಮಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ನೆಡೆದಿದೆ. ಇವರು ಮಂಗಳೂರು ಮೂಲದವರೆಂದು ತಿಳಿದುಬಂದಿದೆ.
ಈ ಸಂಬಂಧ ಕುಮಟಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.