ಹಾವೇರಿ: ಹಾನಗಲ್ ತಾಲೂಕು ಹೋತನಹಳ್ಳಿ ಸಿದ್ದಾರೂಢ ಮಠದ ಶಂಕರಾನಂದ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾನಗಲ್ ಕೋರ್ಟ್ ಕ್ರಾಸ್ ಬಳಿ ಅಪಘಾತಕ್ಕೀಡಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದಲ್ಲಿದ್ದ ಸಿಮೆಂಟ್ ರಿಂಗ್ಗಳಿಗೆ ಡಿಕ್ಕಿ ಹೊಡೆದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕಾರು ಚಾಲಕ ಮತ್ತು ಶಂಕರಾನಂದ ಸ್ವಾಮೀಜಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಅಪಘಾತ ನಡೆದ ತಕ್ಷಣ ಸ್ಥಳೀಯರು ಸ್ವಾಮೀಜಿ ಹಾಗೂ ಚಾಲಕನ ಸಹಾಯಕ್ಕೆ ಬಂದಿದ್ದು, ಸದ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸ್ವಾಮೀಜಿ ಮಠಕ್ಕೆ ತೆರಳಿದ್ದಾರೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.