ಸ್ವಾಮೀಜಿ ಕಾರ್ ಅಡ್ಡಗಟ್ಟಿ ಚಾಲಕನ ಮೇಲೆ ಪುಂಡರಿಂದ ಹಲ್ಲೆ

Public TV
1 Min Read
CKB 2

ಚಿಕ್ಕಬಳ್ಳಾಪುರ: ಓವರ್ ಟೇಕ್ ಮಾಡಿದರು ಎಂದು ಸ್ವಾಮೀಜಿಗಳಿದ್ದ ಕಾರಿನ ಚಾಲಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇನಹಳ್ಳಿ ಬಳಿ ನಡೆದಿದೆ.

ಭೋವಿ ಸಮುದಾಯದ ಶರಣಬಸವೇಶ್ವರ ಮಠದ ಸ್ವಾಮೀಜಿಗಳು ತಮ್ಮ ಹೊಸ ಇನ್ನೋವಾ ಕಾರಿನಲ್ಲಿ ಡಾಬಸ್ ಪೇಟೆ ದೊಡ್ಡಬಳ್ಳಾಪುರ ಮಾರ್ಗವಾಗಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಡಾಬಸ್ ಪೇಟೆ ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಕಿಡಿಗೇಡಿಗಳು ಚಲಿಸುತ್ತಿದ್ದ ಇನ್ನೋವಾ ಕಾರನ್ನ, ಸ್ವಾಮೀಜಿಗಳು ಚಲಿಸುತ್ತಿದ್ದ ಇನ್ನೋವಾ ಕಾರು ಓವರ್ ಟೇಕ್ ಮಾಡಿತ್ತು.

vlcsnap 2019 06 20 19h55m05s622

ಹೀಗಾಗಿ ಕುಡಿದ ಅಮಲಿನಲ್ಲಿ ಕಾರಿನಲ್ಲಿದ್ದ ಇಬ್ಬರು ಕಿಡಿಗೇಡಿಗಳು ಮತ್ತೆ ಸ್ವಾಮೀಜಿಗಳ ಇನ್ನೋವಾ ಕಾರನ್ನ ಓವರ್ ಟೇಕ್ ಮಾಡಿ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಬಳಿಕ ಕಾರ್ ಚಾಲಕನ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಸ್ವಾಮೀಜಿಗಳು ಕಿಡಿಗೇಡಿಗಳಿಗೆ ಬುದ್ಧಿ ಮಾತು ಹೇಳಿ ಸೇಬು ಹಣ್ಣು ಕೊಟ್ಟು ಆಶೀರ್ವಾದ ಮಾಡಿ ಕಾರು ಬಿಡುವಂತೆ ತಿಳಿಸಿದ್ದಾರೆ. ಆದರೆ ಇದಕ್ಕೊಪ್ಪದ ಕಿಡಿಗೇಡಿಗಳು ಚಾಲಕನ ಜೊತೆ ಕಿರಿಕ್ ಮಾಡಿ ಕೆನ್ನೆಗೆ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.

vlcsnap 2019 06 20 19h54m42s712

ಈ ಸಂಬಂಧ ಸ್ಥಳೀಯ ದೊಡ್ಡಬೆಳವಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಇಬ್ಬರು ಕಿಡಿಗೇಡಿಗಳನ್ನ ದೊಡ್ಡಬೆಳವಂಗಲ ಪಿಎಸ್‍ಐ ಗಜೇಂದ್ರ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಕಿಡಿಗೇಡಿಗಳ ಇನ್ನೋವಾ ಕಾರನ್ನು ಸಹ ವಶಪಡಿಸಿಕೊಂಡಿದ್ದಾರೆ.

ಇಬ್ಬರು ಪುಂಡರು ಹೊಸಕೋಟೆ ಮೂಲದವರು ಎಂದು ತಿಳಿದು ಬಂದಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *