ಮಡೀಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ ಚಲಿಸುತ್ತಿದ್ದ ಕಾರೊಂದರ ಟಯರ್ ಇದ್ದಕ್ಕಿದ್ದಂತೆ ಕಳಚಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಪಿರಿಯಪಟ್ಟಣದ ಸುರೇಶ್ ಎಂಬವರು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಪತ್ನಿಯೊಂದಿಗೆ ತಮ್ಮ ತುಂಬು ಗರ್ಭಿಣಿ ಮಗಳನ್ನು ವೈದ್ಯಕೀಯ ಚಿಕಿತ್ಸೆಗೊಳಪಡಿಸಿ ಇಂದು ಮಧ್ಯಾಹ್ನ 12.30ರ ಸಮಯದಲ್ಲಿ ಕೆಎ-13 ಎಂ-6661 ಇಂಡಿಕಾ ಕಾರಿನಲ್ಲಿ ಹಿಂತಿರುಗುತ್ತಿದ್ದರು.
ಮಾರ್ಗಮಧ್ಯೆ ಸುಂಟಿಕೊಪ್ಪ ಪಟ್ಟಣದ ಎ.ವಿ.ಎಂ. ಸ್ಟೋರ್ ಮುಂಭಾಗದಲ್ಲಿ ಕಾರಿನ ಹಿಂಬದಿಯ ಬಲಭಾಗದ ಟಯರ್ ಇದ್ದಕ್ಕಿದ್ದಂತೆ ಕಳಚಿಕೊಂಡು ರಸ್ತೆಯಲ್ಲಿ ಉರುಳಾಡಿದೆ. ಕಾರಿನ ಚಾಲಕ ಚಾಕಚಕ್ಯತೆಯಿಂದ ಕಾರನ್ನು ಹತೋಟಿಗೆ ತಂದು ರಸ್ತೆ ಬದಿ ನಿಲ್ಲಿಸಿದ್ದಾನೆ. ಇಲ್ಲವಾದಲ್ಲಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು.
ಅದೃಷ್ಟವಶಾತ್ ಚಾಲಕನ ಸಮೇತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುರೇಶ್ ಹಾಗೂ ಅವರ ಪತ್ನಿ ಮತ್ತು ತುಂಬು ಗರ್ಭಿಣಿಯಾಗಿರುವ ಮಗಳು ಯಾವುದೇ ಗಾಯಕ್ಕೊಳಗಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv