ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಕಾವೇರಿ ರಸ್ತೆಯ ಚರಂಡಿ ಬಳಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.
ಕಾವೇರಿ ರಸ್ತೆಯ ಅಂಗನವಾಡಿ ಮುಂಭಾಗದ ಚರಂಡಿ ಬಳಿ ಚೀಲವೊಂದರಲ್ಲಿ ನವಜಾತ ಶಿಶುವನ್ನು ಇಟ್ಟು ಬಿಸಾಡಲಾಗಿತ್ತು. ಚೀಲ ತೆಗೆದು ನೋಡಿದಾಗ ನವಜಾತ ಶಿಶು ಕಂಡು ಗಾಬರಿಗೊಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ
ಸ್ಥಳಕ್ಕೆ ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದು, ಹೆತ್ತವರೇ ಚೀಲದಲ್ಲಿಟ್ಟು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು