Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಣ್ಯ ಇಲಾಖೆ ಸಿಬ್ಬಂದಿಯಿಂದ ಏಲಕ್ಕಿ ಬೆಳೆ ನಾಶ – ಲಕ್ಷಾಂತರ ರೂಪಾಯಿ ನಷ್ಟ, ರೈತರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅರಣ್ಯ ಇಲಾಖೆ ಸಿಬ್ಬಂದಿಯಿಂದ ಏಲಕ್ಕಿ ಬೆಳೆ ನಾಶ – ಲಕ್ಷಾಂತರ ರೂಪಾಯಿ ನಷ್ಟ, ರೈತರ ಆಕ್ರೋಶ

Districts

ಅರಣ್ಯ ಇಲಾಖೆ ಸಿಬ್ಬಂದಿಯಿಂದ ಏಲಕ್ಕಿ ಬೆಳೆ ನಾಶ – ಲಕ್ಷಾಂತರ ರೂಪಾಯಿ ನಷ್ಟ, ರೈತರ ಆಕ್ರೋಶ

Public TV
Last updated: September 10, 2025 6:31 pm
Public TV
Share
3 Min Read
Kodagu 2
SHARE

– ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರೋ ಕೃಷಿಕ ದಂಪತಿ ಕಂಗಾಲು

ಮಡಿಕೇರಿ: 2018-19ರಲ್ಲಿ ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿದ ಮಡಿಕೇರಿ ತಾಲೂಕಿನ ಮುಕೋಡ್ಲು ಗ್ರಾಮದಲ್ಲಿ ಮತ್ತೆ ರೈತರ ಬದುಕು ಚಿಗುರೊಡೆದಿತ್ತು. ಅಳಿದುಳಿದ ಕೃಷಿ ಭೂಮಿಯಲ್ಲಿ ಕೃಷಿ ಚಟುವಟಿಕೆ ಗರಿಬಿಚ್ಚಿತ್ತು. ಕಾಫಿ, ಏಲಕ್ಕಿ (Cardamom And Coffee crop) ಬೆಳೆದು ಬದುಕು ಕಟ್ಟಿಕೊಳ್ಳುತ್ತಿದ್ರು. ಆದ್ರೆ ಏಕಾಏಕಿ ಬಂದ ಅರಣ್ಯ ಸಿಬ್ಬಂದಿ ರೈತನ ಕಾಫಿ‌ತೋಟ, ಏಲಕ್ಕಿ ತೋಟಕ್ಕೆ ನುಗ್ಗಿ ಈ ಜಾಗ ಅರಣ್ಯ ಪ್ರದೇಶಕ್ಕೆ ಸೇರಿದೆ ಅಂತ ತಕರಾರು ತೆಗೆದಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೇ ಕಾಫಿ ಗಿಡಗಳನ್ನ ಕಡಿದುಹಾಕಿದ್ದಾರೆ.

ಅರಣ್ಯ ಸಿಬ್ಬಂದಿಯ ದುರ್ವರ್ತನೆಯಿಂದ ರೈತರಿಗೆ (Farmers) ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದರಿಂದಾಗಿ ಬೆಳೆಗಾರರು, ಗ್ರಾಮಸ್ಥರು ಅರಣ್ಯ ಇಲಾಖೆಯ ನಡೆಯನ್ನ ತೀವ್ರವಾಗಿ ಖಂಡಿಸಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ನಿರಂತರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು – ಬಿಜೆಪಿ ನಿಯೋಗದಿಂದ ಸರ್ವೇ ಕಾರ್ಯ

Kodagu 3

ಏಲಕ್ಕಿ ತೋಟದಲ್ಲಿ ನಡೆದಿದ್ದೇನು?
ಮಡಿಕೇರಿ ತಾಲೂಕಿನ ಮುಕೋಡ್ಲು ಗ್ರಾಮ 2018-19 ರಲ್ಲಿ ಸಂಪೂರ್ಣವಾಗಿ ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿತ್ತು. ಈ ಗ್ರಾಮದಲ್ಲಿ ಅಳಿದುಳಿದ ತೋಟಗಳಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಿಕೊಂಡು ಇಲ್ಲಿನ ನೂರಾರು ಜನ ರೈತರು, ಬೆಳೆಗಾರರು ಮತ್ತೆ ಬದುಕು ಕಟ್ಟಿಕೊಳ್ಳುತ್ತಿದ್ದರು. ಇಂತಹ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಈ ಗ್ರಾಮದ ಕಲ್ಸೋಡ್ಸ್ ಎಂಬ ಪೈಸಾರಿ ಜಾಗದಲ್ಲಿ ಬೆಳೆದಿದ್ದ ನಾಣಿಯಪ್ಪ ಅವರಿಗೆ ಸೇರಿದ್ದ ಏಲಕ್ಕಿ ತೋಟದಲ್ಲಿ ಬೆಳೆಯನ್ನ ನಾಶ ಮಾಡಿದ್ದಾರೆ. ಏಲಕ್ಕಿ ತೋಟ ಹಾಗೂ ಕಾಫಿ ತೋಟದ ಜಾಗ ಅರಣ್ಯ ಪ್ರದೇಶಕ್ಕೆ ಒಳಪಟ್ಟಿದೆ ಅಂತ ಹೇಳಿದವರೇ ಭೂಮಾಲೀಕರಿಗೆ ಯಾವುದೇ ನೋಟಿಸ್ ಕೂಡ ಕೊಡದೇ ಏಕಾಏಕಿ ತೋಟಕ್ಕೆ ನುಗ್ಗಿ ಏಲಕ್ಕಿ ಮತ್ತು ಕಾಫಿ ಗಿಡಗಳನ್ನು ಕಡಿದು ಹಾಕಿದ್ದಾರೆ. ಇದರಿಂದ ಮಾಲೀಕರಿಗೆ 5 ಲಕ್ಷರೂಗಿಂಗಳೂ ಅಧಿಕ ವರಮಾನ ನಷ್ಟವಾಗಿದ್ದು, ಕಣ್ಣೀರಿಡುವಂತಾಗಿದೆ.

Kodagu

ಕೃಷಿಕ ದಂಪತಿ ವೃದ್ಧರಾಗಿದ್ದಾರೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಪ್ರಸ್ತುತ ಕೃಷಿ ಕೈಗೊಂಡಿರುವ ಜಾಗವು ಪೈಸಾರಿ ಎಂಬ ದಾಖಲೆ ಲಭಿಸಿದೆ. ಆದರೂ ಸಹ ಅರಣ್ಯ ಇಲಾಖೆಯವರು ದೌರ್ಜನ್ಯ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿರಂತರ ಮಳೆಯಿಂದ ಕೊಡಗಿನಲ್ಲಿ ಮತ್ತೆ ಭೂಕುಸಿತದ ಭೀತಿ

ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಮಾಜಿ‌ ಸ್ಪೀಕರ್ ಕೆ.ಜಿ ಬೋಪಯ್ಯ, ಕೃಷಿಕ ದಂಪತಿಗಳೊಂದಿಗೆ ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ. ಅರಣ್ಯ ಇಲಾಖೆ ಪರಿಹಾರ ನೀಡಬೇಕು. ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಖುದ್ದಾಗಿ ಜಾಗ ಪರಿಶೀಲನೆ ಮಾಡಬೇಕು. ಏಲಕ್ಕಿ ಕೊಯ್ಲು ಮಾಡುವ ಸಂದರ್ಭವೇ ಗಿಡಗಳನ್ನು ತುಂಡರಿಸಿದ್ದಾರೆ. ಜಿಲ್ಲಾಧಿಕಾರಿ ತಕ್ಷಣ ಮಧ್ಯೆ ಪ್ರವೇಶಿಸಿ ಈ ಜಾಗ ಪೈಸಾರಿಯೋ ಅಥವಾ ಅರಣ್ಯ ಇಲಾಖೆಗೆ ಸೇರಿದ್ದೂ ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ಆಗ್ರಹಿಸಿದ್ದಾರೆ.

Kodagu 4

50 ವರ್ಷದಿಂದ ಕೃಷಿ ಮಾಡಿಕೊಂಡು ಬಂದಿರುವ ಜಾಗಕ್ಕೆ ದಾಖಲೆ ಒದಗಿಸುವಂತೆ ಈಗಾಗಲೇ ಕಂದಾಯ ಇಲಾಖೆಗೆ 50, 53, 57ರಡಿ ಅರ್ಜಿ ಹಾಕಿದ್ದಾರೆ. ಭೋಗ್ಯದ ಯೋಜನೆಗೂ ಅರ್ಜಿ ಹಾಕಿದ್ದಾರೆ. ಈ ನಡುವೆ ಅರಣ್ಯ ಇಲಾಖೆ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧ. ಈಗಾಗಲೇ 33/2 ಸರ್ವೆ ನಂಬರ್‌ನಲ್ಲಿ ವಿಭಾಗ ಮಾಡಿ 60 ಎಕ್ರೆ ಜಾಗದ ಪೈಕಿ 4.50 ಸೆಂಟ್ ಜಾಗವನ್ನು ಸ್ಥಳೀಯ ವ್ಯಕ್ತಿಗೆ ದಾಖಲಾತಿ ಮಾಡಿಕೊಟ್ಟಿದ್ದಾರೆ. ಇವರಿಗೆ ಮಾತ್ರ ಮಾಡಿಕೊಟ್ಟಿಲ್ಲ. ರೈತರನ್ನು ಕೆರಳಿಸಲು, ಉದ್ದೇಶಪೂರ್ವಕವಾಗಿ ರೈತರನ್ನು ಕೆಣಕುವ ಯತ್ನಕ್ಕೆ ಅರಣ್ಯ ಇಲಾಖೆ ಕೈ ಹಾಕಿದೆ ಎಂದು ಅಕ್ರೋಶ ಹೋರ ಹಾಕಿದ್ರು. ಇದನ್ನೂ ಓದಿ: ಕೊಡಗಿನಲ್ಲಿ ನಿರಂತರ ಗಾಳಿ ಮಳೆಯಿಂದ ಹರಡುತ್ತಿದೆ ವೈರಲ್ ಫೀವರ್‌ – ಒಂದೇ ತಿಂಗಳಲ್ಲಿ 3,000 ಕೇಸ್‌

\

TAGGED:Cardamom cropcoffee cropfarmersforest departmentKodaguಅರಣ್ಯ ಇಲಾಖೆಏಲಕ್ಕಿ ಬೆಳೆಕಾಫಿ ಬೆಳೆಕೊಡಗುರೈತರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
7 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
7 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
8 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
8 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
9 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?