– ಕಣ್ಮರೆಯಾದ ನಾಲ್ವರು ಸಿಬ್ಬಂದಿಗಾಗಿ ಶೋಧಕಾರ್ಯ
ತಿರುವನಂತಪುರಂ/ಮಂಗಳೂರು: ಕೇರಳದ (Kerala) ಬೇಪೂರ್ (Beypore) ಹಡಗು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಡಗಿನಲ್ಲಿದ್ದ (Cargo Ship) 18 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಇಬ್ಬರು ಗಂಭೀರ ಗಾಯಗೊಂಡಿದ್ದು, ನಾಲ್ವರಿಗೆ ಭಾಗಶಃ ಗಾಯಗಳಾಗಿದೆ. ಸದ್ಯ ಗಾಯಗೊಂಡ 6 ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ 12 ಮಂದಿಗೆ ನಗರದ ಹೋಟೆಲ್ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಐಎನ್ಎಸ್ ಸೂರತ್ (INS Surat) ಮೂಲಕ ಆಳಸಮುದ್ರದಿಂದ ಸಿಬ್ಬಂದಿಯನ್ನು ಮಂಗಳೂರಿನ ನವಬಂದರಿಗೆ ಕರೆತರಲಾಗಿದೆ. ಬಳಿಕ ಬಂದರಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ರವಾನಿಸಲಾಗಿದೆ. ಇನ್ನು ಎಜೆ ಆಸ್ಪತ್ರೆಯ ವೈದ್ಯ ದಿನೇಶ್ ಕಂದಮ್ ಗಾಯಾಳುಗಳ ಕುರಿತು ಮಾತನಾಡಿ, ಈಗಾಗಲೇ ಆರು ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಆರು ಜನರ ಪೈಕಿ ಮೂರು ಜನ ಚೀನಾ ದೇಶದವರು, ಇಬ್ಬರು ಬರ್ಮಾ ಹಾಗೂ ಒಬ್ಬರು ಇಂಡೋನೆಶೀಯದವರು. ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. 30% ರಿಂದ 40% ದೇಹದ ಭಾಗಗಳು ಸುಟ್ಟಿದೆ. ಜೊತೆಗೆ ಶ್ವಾಸಕೋಶದಲ್ಲೂ ಸುಟ್ಟಗಾಯಗಳಾಗಿದೆ. ಉಳಿದ ನಾಲ್ಕು ಜನರಿಗೆ ಅಲ್ಪಸ್ವಲ್ಪ ಗಾಯಗಳಾಗಿದೆ. ಗಂಭೀರ ಗಾಯಗೊಂಡ ಇಬ್ಬರಿಗೂ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Bengaluru | ಸರಣಿ ಅಪಘಾತದಲ್ಲಿ ಮಹಿಳೆ ಸಾವು
ಶ್ರೀಲಂಕಾದಿಂದ ಮುಂಬೈಗೆ ಸಾಗುತ್ತಿದ್ದ ಸಿಂಗಾಪುರ ಮೂಲದ ಹಡಗಿನಲ್ಲಿ ಪೈಂಟ್, ಗನ್ ಪೌಡರ್ ಸೇರಿದಂತೆ ಹಲವು ವಸ್ತುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಕೇರಳದ ಬೇಪೂರ್ ಕಡಲ ಕಿನಾರೆಯಿಂದ 78 ನಾಟಿಕಲ್ ಮೈಲ್ ದೂರದಲ್ಲಿ ಹಡಗಿಗೆ ಬೆಂಕಿ ಆವರಿಸಿದೆ. 22 ಮಂದಿ ಸಿಬ್ಬಂದಿಯಿದ್ದ ಹಡಗಿನಲ್ಲಿ 18 ಮಂದಿಯನ್ನು ರಕ್ಷಣೆ ಮಾಡಿದ್ದು, ನಾಲ್ವರು ಕಣ್ಮರೆಯಾಗಿದ್ದಾರೆ. ಕಣ್ಮರೆಯಾದ ಸಿಬ್ಬಂದಿಗಾಗಿ ಕೋಸ್ಟ್ ಗಾರ್ಡ್ ಶೋಧಕಾರ್ಯ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್ – 13.91 ಕೋಟಿ ಆಸ್ತಿ ಮುಟ್ಟುಗೋಲು
ತೈವಾನ್ನ ಸೆಕೆಂಡ್ ಎಂಜಿನಿಯರ್ ಯು ಬೊ ಫಾಂಗ್, ಮ್ಯಾನ್ಮರ್ನ ಕಾರ್ಪೆಂಟರ್ ಸಾನ್ ವಿನ್, ಇಂಡೋನೇಷ್ಯಾದ ಎಬಿ ಜಾನಲ್ ಅಹಿದಿನ್, ತೈವಾನ್ನ ಮೋಟರ್ ಮ್ಯಾನ್ ಸಿಹ್ ಚಾಯ್ ವೆನ್ ಕಣ್ಮರೆಯಾಗಿದ್ದಾರೆ. ಚೀನಾ ಮೂಲದ ನಂ 1 ಆಯ್ಲಿರ್ ಲೂಯನ್ಲಿ ಮತ್ತು ಇಂಡೋನೇಷ್ಯಾದ ಫಿಟ್ಟರ್ ಸೋನಿಟೂರ್ ಹೆನಿಗೆ ಗಂಭೀರ ಗಾಯಗಳಾಗಿದೆ. ಚೈನಾದ ಸೆಕೆಂಡ್ ಫಿಟ್ಟರ್ಗಳಾದ ಕ್ಸೂ ಪಬೋ, ಗೋ ಲಿನಿಂಗ್, ಮ್ಯಾನ್ಮರ್ನ ಎಬಿಗಳಾದ ಥೆನ್ ಥಾನ್ ತ್ವಾಯ್, ಕಿ ಜಾವ್ ತ್ವೂ ಗೆ ಗಾಯಗಳಾಗಿವೆ. ಉಳಿದ 12 ಜನ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇದನ್ನೂ ಓದಿ: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ