ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ.
ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್ಸಿಆರ್ ( ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದಾರೆ.
ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ. ನೀಡಿದ್ದಾರೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಓರ್ವ ಸ್ಟಾರ್ ನಟಿಯ ಬಳಿ ಬಿಲ್ ಕಟ್ಟಲೂ ಹಣ ಇರಲಿಲ್ಲವೇ. ನಾಲ್ಕೂವರೆ ಲಕ್ಷ ಹಣ ಕೊಡದೇ ಎಸ್ಕೇಪ್ ಆಗಿದ್ದು ಯಾಕೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ.