ಚಿಕ್ಕಮಗಳೂರು: ನಗರಸಭೆ ಸದಸ್ಯರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ಪ್ರಕರಣ ದಾಖಲಾಗಿದೆ.
ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ಆಯುಕ್ತ ಬಸವರಾಜ್ ಮೇಲೆ ದೂರು ದಾಖಲಿಸಲಾಗಿದೆ. ನಗರಸಭೆ ಸದಸ್ಯ ಗೋಪಿ ಅವರನ್ನು ಜಿಲ್ಲೆಯ ನಗರಸಭೆಯ ಅಧಿಕೃತ ವಾಟ್ಸಾಪ್ ಗ್ರೂಪಿನಿಂದ ತೆಗೆದು ಹಾಕಲಾಗಿತ್ತು. ಆ ವಿಚಾರದ ಬಗ್ಗೆ ಹಾಗೂ ತಮ್ಮ ವಾರ್ಡಿನ ಕೆಲಸದ ನಿಮಿತ್ತ ಅಧ್ಯಕ್ಷರ ಬಳಿ ಚರ್ಚಿಸಲು ಹೋಗಿದ್ದರು. ಈ ವೇಳೆ ನಗರಸಭೆ ಆಯುಕ್ತ ಬಸವರಾಜ್ ಕೂಡ ಅಲ್ಲೇ ಇದ್ದರು. ಇದನ್ನೂ ಓದಿ: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ
ಈ ವೇಳೆ ಅಧ್ಯಕ್ಷರು ಗೋಪಿ ಅವರಿಗೆ ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆಗ ಅಲ್ಲೇ ಇದ್ದ ಆಯುಕ್ತ ಬಸವರಾಜ್ ಕೂಡಾ ನೀನು ಸಿಎಂಸಿ ಗ್ರೂಪಿನಲ್ಲಿ ಇರಲು ಲಾಯಕ್ಕಿಲ್ಲ. ಅದಕ್ಕೆ ತೆಗೆದು ಹಾಕಿದ್ದೇನೆ. ನಿನ್ನ ಕೈಯಲ್ಲಿ ಏನು ಮಾಡಲು ಸಾಧ್ಯ. ಏನು ಬೇಕಾದರು ಮಾಡಿಕೋ ಎಂದು ಅವರೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ
ನಗರಸಭೆ ಸದಸ್ಯರ ದೂರಿನ ಅನ್ವಯ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಧ್ಯಕ್ಷ ವೇಣು ಹಾಗೂ ಆಯುಕ್ತ ಬಸವರಾಜ್ ವಿರುದ್ಧ ಕಲಂ 504, (ಉದ್ದೇಶಪೂರ್ವಕ ಅವಮಾನ) 506 (ವಂಚನೆ)ರ ಅಡಿ ಪ್ರಕರಣ ದಾಖಲಾಗಿದೆ.