Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

Districts

ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

Public TV
Last updated: March 5, 2023 10:22 pm
Public TV
Share
2 Min Read
water tap 1
SHARE

ಯಾದಗಿರಿ: ಕಲುಷಿತ ನೀರು (Polluted Water) ಪೂರೈಕೆ ಮಾಡಿ, ಮೂವರು ಮಹಿಳೆಯರ (Woman) ಸಾವಿಗೆ ಕಾರಣರಾದ ಅಧಿಕಾರಿಗಳ ಮೇಲೆ 21 ದಿನ ಕಳೆದರೂ ಕ್ರಮ ಕೈಗೊಳ್ಳಲು ಸರ್ಕಾರ ಹಾಗೂ ಯಾದಗಿರಿ (Yadgiri) ಜಿಲ್ಲಾಡಳಿತ ಮೀನಾಮೇಷ ಎಣಿಸುತ್ತಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಫೆ. 15ರಂದು ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಿಂದ ಬಳಲಿ ವಿವಿಧ ಆಸ್ಪತ್ರೆಯಲ್ಲಿ 85ಕ್ಕೂ ಹೆಚ್ಚು ಜನರು ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೂವರು ಮಹಿಳೆಯರು ಮೃತಪಟ್ಟಿದ್ದರು. ಈಗ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳಿಗೆ ಬ್ರೇಕ್ ಬಿದ್ದಿದೆ. ಅನಪುರ ಕಹಿ ಘಟನೆಯು ರಾಜ್ಯದಲ್ಲಿ ಸದ್ದು ಮಾಡಿತ್ತು. ಸಾವಿತ್ರಮ್ಮ, ನರಸಮ್ಮ, ಸಾಯಮ್ಮ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದರು. ಈ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿ ಸದ್ದು ಮಾಡಿತ್ತು. ಸರ್ಕಾರ ಕೂಡ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಘೋಷಣೆ ಮಾಡಿದೆ. ಆದರೆ ಇದುವರೆಗೂ ಆ ಪರಿಹಾರ ಹಣ ಮೃತ ಕುಟುಂಬಗಳಿಗೆ ತಲುಪಿಲ್ಲ.

water tap

ಈ ಎಲ್ಲ ಅವಘಡಕ್ಕೆ ಅನಪುರ ಗ್ರಾಮದಲ್ಲಿ ಪೈಪ್ ಲೀಕೆಜ್ ಆಗಿ ಮಲ ಮಿಶ್ರಿತ ನೀರು ಪೂರೈಕೆ ಮಾಡಲಾಗಿರುವುದು ಸಹ ದೃಢಪಟ್ಟಿದೆ. ಕಲುಷಿತ ನೀರು ಸೇವಿಸಿ ಗ್ರಾಮದಲ್ಲಿ ವಾಂತಿ, ಭೇದಿ ಉಲ್ಬಣಗೊಂಡಿತ್ತು. ಸರ್ಕಾರ ಪಂಚಾಯಿತಿ ಅಧಿಕಾರಿಗಳ ಮೂಲಕ ಹಳ್ಳಿ ಜನರಿಗೆ ಶುದ್ಧ ನೀರು ಪೂರೈಕೆ ಮಾಡಿ ಜನರಿಗೆ ನೀರಿನ ದಾಹ ತಣಿಸಬೇಕಿತ್ತು. ಆದರೆ, ಪಂಚಾಯಿತಿ ಅಧಿಕಾರಿಗಳು ತಾನು ಮಾಡಿದ್ದೆ ಸರಿ ಎನ್ನುವಂತೆ, ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆಯಾದರೂ ಆರಂಭದಲ್ಲಿ ಕಡಿವಾಣ ಹಾಕಿಲ್ಲ. ಅನಪುರ ಪಿಡಿಓ ವಿಜಯಲಕ್ಷ್ಮಿ, ಪಂಚಾಯಿತಿ ಕಾರ್ಯದರ್ಶಿ, ನೀರು ಪೂರೈಸುವ ಆಪರೇಟರ್ ಸಂಪೂರ್ಣ ನಿರ್ಲಕ್ಷ್ಯ ತೋರಿರುವ ಕುರಿತು ತಪ್ಪಿತಸ್ಥ ಪಂಚಾಯಿತಿ ಹಾಗೂ ಸಿಬ್ಬಂದಿ ವರ್ಗದವರ ಮೇಲೆ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲುಷಿತ ನೀರು ಪೂರೈಕೆ ಮಾಡಿ 3 ಜನರ ಸಾವಿಗೆ ಕಾರಣರಾದವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಪೊಲೀಸರು ಸ್ವಯಂಪ್ರೇರಿತವಾಗಿ ಗುರುಮಠಕಲ್ ಠಾಣೆಯಲ್ಲಿ ಪಿಡಿಓ, ಕಾರ್ಯದರ್ಶಿ, ಪಂಪ್ ಆಪರೇಟರ್, ಸಿಬ್ಬಂದಿ ವರ್ಗದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಾದರು. ಪಿಡಿಓ ವಿಜಯಲಕ್ಷ್ಮಿ ಸೇರಿ ಉಳಿದವರ ಮೇಲೆ ಕ್ರಮಕೈಗೊಂಡಿಲ್ಲ. ತಪ್ಪಿತಸ್ಥರ ತಲೆದಂಡವಾಗಿಲ್ಲ. ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಲು ಮೀನಾಮೇಷ ಮಾಡಲಾಗುತ್ತಿದೆ. ಘಟನೆ ಜರುಗಿ ಬರೋಬ್ಬರಿ 21 ದಿನಗಳು ಕಳೆದರು ಕ್ರಮಕೈಗೊಳ್ಳದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಪತ್ರ ಬರೆದ 8 ಪಕ್ಷಗಳು – ಏನಿದೆ ಅದರಲ್ಲಿ? – ಪತ್ರ ಬರೆದವರಿಂದ ದೂರ ಉಳಿದ ಕಾಂಗ್ರೆಸ್‌

Tap Water

ಅನಪುರ ಘಟನೆ ನಂತರ ಈಗ ಚಿನ್ನಕಾರ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಚಿನ್ನಕಾರ ಗ್ರಾಮದಲ್ಲಿ ಪಂಚಾಯಿತಿ ಅಧಿಕಾರಿಗಳು ಕಲುಷಿತ ನೀರು ಪೂರೈಕೆ ಮಾಡಿದ ಹಿನ್ನಲೆ ವಾಂತಿ ಭೇದಿ ಕಾಣಿಸಿಕೊಂಡಿದೆ ಅಂತೆ. ಪದೇ ಪದೇ ಕಲುಷಿತ ನೀರು ಸೇವಿಸಿ ಜನರು ವಾಂತಿ ಭೇದಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ, ಸರ್ಕಾರ, ತಪ್ಪಿತಸ್ಥರ ಮೇಲೆ ಕ್ರಮಕೈಗೊಂಡರೆ ಮತ್ತೆ ಇಂತಹ ಘಟನೆಗಳು ಮರುಕಳಿಸುವದಿಲ್ಲ. ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡು ಖಡಕ್ ನಿರ್ಧಾರ ಕೈಗೊಳ್ಳಬೇಕಿದೆ. ಇದನ್ನೂ ಓದಿ: ಅಶೋಕ್‌ ಜೊತೆ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ: ಡಿ.ಕೆ.ಸುರೇಶ್

TAGGED:waterwomanYadgiriನೀರುಮಹಿಳೆಯಾದಗಿರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
47 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?