– ಕಪ್ಪತ್ತಗುಡ್ಡ ಹೋರಾಟಕ್ಕೂ ಸಿಕ್ತು ಜಯ
- Advertisement 1-
ಬೆಂಗಳೂರು: ಮಹದಾಯಿ ಹೋರಾಟದಲ್ಲಿ ರೈತರ ಮೇಲೆ ಹಾಕಲಾಗಿದ್ದ ಎಲ್ಲಾ ಪ್ರಕರಣಗಳನ್ನ ಕೊನೆಗೂ ರಾಜ್ಯ ಸರ್ಕಾರ ಹಿಂಪಡೆದಿದೆ. 94 ಪ್ರಕರಣಗಳನ್ನ ವಾಪಸ್ ಪಡೆಯಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯಿಸಲಾಯಿತು. ಇದರ ಜೊತೆಗೆ ಮೇಕೆದಾಟು ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ್ದು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಯೋಜಿಸಲಾಗಿದೆ.
- Advertisement 2-
ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದ್ರಲ್ಲಿ ಪ್ರಮುಖವಾದ ಅಂಶಗಳು ಹೀಗಿವೆ.
* ಮಹದಾಯಿ ಹೋರಾಟದ 94 ಪ್ರಕರಣಗಳು ವಾಪಸ್ ಆಗಿವೆ.
* ಮೇಕೆದಾಟು ವಿದ್ಯುತ್ ಯೋಜನೆಗೆ ತಾತ್ವಿಕ ಒಪ್ಪಿಗೆ.
* 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಯೋಜನೆ.
* 5,912 ಕೋಟಿ ರೂ. ವೆಚ್ಚದಲ್ಲಿ ಮೇಕೆದಾಟು ಯೋಜನೆ.
* ಮೇಕೆದಾಟು ಬಳಿ 60 ಟಿಎಂಸಿ ನೀರು ಸಂಗ್ರಹದ ಗುರಿ.
* ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್.
* ಕೂಡಲಸಂಗಮದಲ್ಲಿ 44.94 ಕೋಟಿ ವೆಚ್ಚದ ಬಸವೇಶ್ವರ ಮ್ಯೂಸಿಯಂ.
* ಅಕ್ರಮ ಸಕ್ರಮದಲ್ಲಿ ಚದರಡಿ ಮಿತಿ 30*40ಗೆ ಏರಿಕೆ.
* ಬೆಂಗಳೂರು ಉಪನಗರ ರೈಲ್ವೇ ಯೋಜನೆಗೆ ಒಪ್ಪಿಗೆ.
- Advertisement 3-
- Advertisement 4-
ಕಪ್ಪತ್ತಗುಡ್ಡ ಹೋರಾಟಕ್ಕೂ ಸಿಕ್ತು ಜಯ: ಗದಗ ಜಿಲ್ಲೆಯ ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬೇಕೆಂದು ನಡೆಸಿದ ಅಹೋರಾತ್ರಿ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಹೋರಾಟಕ್ಕೆ ನೇತೃತ್ವ ವಹಿಸಿದ್ದ ತೋಂಟದಾರ್ಯ ಸ್ವಾಮಿಜಿಗಳಿಗೆ ಸಚಿವ ಎಚ್.ಕೆ.ಪಾಟೀಲ್ ಈ ಕುರಿತು ಭರವಸೆ ನೀಡಿದ್ದಾರೆ.
ಫೆಬ್ರವರಿ 20 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ ಕರೆದಿದ್ದು, ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶ ಅಂತಾ ಘೋಷಣೆ ಬಗ್ಗೆ ತಿರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಸಚಿವರು ದೂರವಾಣಿ ಮೂಲಕ ಶ್ರೀಗಳಿಗೆ ಭರವಸೆ ನೀಡಿದ್ದಾರೆ. ಆ ಮೂಲಕ ಕಳೆದ ಮೂರು ದಿನಗಳಿಂದ ಕಪ್ಪತ್ತಗುಡ್ಡ ರಕ್ಷಣೆಗಾಗಿ ನಡೆದ ಬೃಹತ್ ಆಂದೋಲನ ಗುರಿ ಈಡೇರಿಕೆಯಲ್ಲಿ ತಾತ್ಕಾಲಿಕ ಯಶ ಕಂಡಿದೆ.