Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

Crime

ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

Public TV
Last updated: May 21, 2023 9:28 am
Public TV
Share
2 Min Read
MONEY
SHARE

ಜೈಪುರ: ರಾಜಸ್ಥಾನದ (Rajasthan) ಜೈಪುರದಲ್ಲಿರುವ (Jaipur) ಸರ್ಕಾರಿ ಕಟ್ಟಡದ ಯೋಜನ ಭವನದ ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಕಪಾಟಿನಲ್ಲಿ 2.31 ಕೋಟಿ ರೂ.ಗೂ ಅಧಿಕ ನಗದು ಹಾಗೂ 1 ಕೆಜಿ ಚಿನ್ನ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಾಳಿಗೆಗೆ (Basement) ಪ್ರವೇಶ ಹೊಂದಿರುವ ಯೋಜನಾ ಭವನದ ಏಳು ಉದ್ಯೋಗಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಕಪಾಟಿನಲ್ಲಿ ಇರಿಸಲಾಗಿದ್ದ ಟ್ರಾಲಿ ಸೂಟ್‌ಕೇಸ್‌ನಲ್ಲಿ 2,000 ರೂ. ಹಾಗೂ 500 ರೂ. ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದು, ಆರ್‌ಬಿಐ 2,000 ರೂ. ಕರೆನ್ಸಿ ಚಲಾವಣೆ ಹಿಂತೆಗೆದುಕೊಂಡ ದಿನ ಈ ಘಟನೆ ನಡೆದಿದೆ. ನಗದು ಹಾಗೂ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು ಈ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: MIG-21 ಫೈಟರ್‌ ಜೆಟ್‌ ಹಾರಾಟ ಬಂದ್ – IAF ಮಹತ್ವದ ನಿರ್ಧಾರ

ಮುಖ್ಯ ಕಾರ್ಯದರ್ಶಿ ಉಷಾ ಶರ್ಮಾ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಉಮೇಶ್ ಮಿಶ್ರಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದಿನೇಶ್ ಎಂಎನ್ ಮತ್ತು ಜೈಪುರ ಕಮಿಷನರ್ ಆನಂದ ಶ್ರೀವಾಸ್ತವ ಅವರು ಶುಕ್ರವಾರ ತಡರಾತ್ರಿ ಸಚಿವಾಲಯದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈಪುರ ಕಮೀಷನರ್ ಶ್ರೀವಾಸ್ತವ, ಕಪಾಟಿನಲ್ಲಿ ಅನೇಕ ಫೈಲ್‌ಗಳು ಮತ್ತು ಟ್ರಾಲಿ ಸೂಟ್‌ಕೇಸ್‌ನಲ್ಲಿ ಚಿನ್ನ ಮತ್ತು ನಗದು ತುಂಬಿದೆ ಎಂದು ಅಲ್ಲಿನ ನೌಕರರು ಅಶೋಕ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಆರ್ಥಿಕ ತಜ್ಞ ಮೋದಿಯವರೇ 500 ನೋಟು ಹಿಂಪಡೆಯುತ್ತೀರಾ?: ಓವೈಸಿ ಪ್ರಶ್ನೆ

ಇ-ಫೈಲಿಂಗ್ ಯೋಜನೆಯಡಿ ಕಡತಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಅಲ್ಲದೇ ಬೀಗ ಹಾಕಿದ್ದ ಎರಡು ಕಪಾಟುಗಳ ಕೀಗಳು ಪತ್ತೆಯಾದ ನಂತರ ಅವುಗಳನ್ನು ತೆರೆಯಲಾಗಿದೆ. ಏಳು ಮಂದಿ ನೌಕರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಸಂಪೂರ್ಣ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿ ಸಂಪೂರ್ಣ ವಿಷಯವನ್ನು ಬಹಿರಂಗಪಡಿಸಲಾಗುವುದು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಾಟ – ಎರಡು ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ಕಪಾಟಿಗೆ ಹಲವು ತಿಂಗಳುಗಳಿಂದ ಬೀಗ ಹಾಕಲಾಗಿತ್ತು. ಆಧಾರ್-ಯುಐಡಿ-ಸಂಯೋಜಿತ ಸಿಬ್ಬಂದಿಯ ಸಹಾಯದಿಂದ ನೆಲಮಾಳಿಗೆಯನ್ನು ಪ್ರವೇಶಿಸಿದ ಪೊಲೀಸರು ನೆಲಮಾಳಿಗೆಗೆ ಪ್ರವೇಶವಿರುವ ಉದ್ಯೋಗಿಗಳನ್ನು ಈ ಕುರಿತು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI

ಯಾರ ಹಣ? ಹೇಗೆ ಬಂತು ಎಂದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈ ಘಟನೆಯ ಬಳಿಕ ಪ್ರತಿಪಕ್ಷವಾದ ಬಿಜೆಪಿ ಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿದೆ. ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಇದು ಗೆಹ್ಲೋಟ್ ಸರ್ಕಾರ ಭ್ರಷ್ಟಾಚಾರದ ರಕ್ಷಕ ಎಂಬುವುದಕ್ಕೆ ಸಾಕ್ಷಿಯಾಗಿದೆ ಎಂದು ತಮ್ಮ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಯೋಜನಾ ಭವನಕ್ಕೆ ಇಷ್ಟು ದೊಡ್ಡ ಮೊತ್ತದ ನಗದು ಮತ್ತು ಚಿನ್ನ ಹೇಗೆ ತಲುಪಿತು ಎಂಬುದನ್ನು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

TAGGED:ashok gehlotBasementgoldJaipurmoneyrajasthanಅಶೋಕ್ ಗೆಹ್ಲೋಟ್ಚಿನ್ನಜೈಪುರನೆಲಮಾಳಿಗೆರಾಜಸ್ಥಾನಸರ್ಕಾರಿ ಕಟ್ಟಡಹಣ
Share This Article
Facebook Whatsapp Whatsapp Telegram

Cinema news

Rachita Ram 3
ಲ್ಯಾಂಡ್ ಲಾರ್ಡ್ ಚಿತ್ರದ `ನಿಂಗವ್ವ ನಿಂಗವ್ವ’ ಸಾಂಗ್ ರಿಲೀಸ್
Cinema Latest Sandalwood Top Stories
Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories

You Might Also Like

Honnavara Beach 4
Crime

ಹೊನ್ನಾವರ | ಅಲೆಗಳ ಅಬ್ಬರಕ್ಕೆ ಸಮುದ್ರದ ಪಾಲಾದ ಸಹೋದರರು

Public TV
By Public TV
22 minutes ago
Bangladesh 2
Latest

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ

Public TV
By Public TV
1 hour ago
Interstate thief wanted in 79 cases arrested 250 grams of gold seized
Crime

79 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ – 250 ಗ್ರಾಂ ಚಿನ್ನ ವಶ

Public TV
By Public TV
1 hour ago
CRIME
Crime

ಶಿರಾ | 3 ಕೋಟಿಯ ಜಾಗಕ್ಕಾಗಿ ಹರಿಯಿತು ನೆತ್ತರು – ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವಕನ ಹತ್ಯೆ

Public TV
By Public TV
2 hours ago
Mysuru Supari Case
Crime

ಹೆಂಡ್ತಿ ಮರ್ಯಾದೆ ಕೊಡ್ತಿಲ್ಲ ಅಂತ ಹತ್ಯೆಗೆ 5 ಲಕ್ಷ ಸುಪಾರಿ ಕೊಟ್ಟ ಪತಿ!

Public TV
By Public TV
2 hours ago
Karwar Port
Districts

ಕಾರವಾರ | ಕರಾವಳಿ ಭಾಗದಲ್ಲಿ ಕೋಲ್ಡ್ ವೇವ್ ಅಲರ್ಟ್‌ – 2 ದಿನ ತೀವ್ರ ಚಳಿ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?