Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

Crime

ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

Public TV
Last updated: May 21, 2023 9:28 am
Public TV
Share
2 Min Read
MONEY
SHARE

ಜೈಪುರ: ರಾಜಸ್ಥಾನದ (Rajasthan) ಜೈಪುರದಲ್ಲಿರುವ (Jaipur) ಸರ್ಕಾರಿ ಕಟ್ಟಡದ ಯೋಜನ ಭವನದ ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಕಪಾಟಿನಲ್ಲಿ 2.31 ಕೋಟಿ ರೂ.ಗೂ ಅಧಿಕ ನಗದು ಹಾಗೂ 1 ಕೆಜಿ ಚಿನ್ನ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಾಳಿಗೆಗೆ (Basement) ಪ್ರವೇಶ ಹೊಂದಿರುವ ಯೋಜನಾ ಭವನದ ಏಳು ಉದ್ಯೋಗಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಕಪಾಟಿನಲ್ಲಿ ಇರಿಸಲಾಗಿದ್ದ ಟ್ರಾಲಿ ಸೂಟ್‌ಕೇಸ್‌ನಲ್ಲಿ 2,000 ರೂ. ಹಾಗೂ 500 ರೂ. ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದು, ಆರ್‌ಬಿಐ 2,000 ರೂ. ಕರೆನ್ಸಿ ಚಲಾವಣೆ ಹಿಂತೆಗೆದುಕೊಂಡ ದಿನ ಈ ಘಟನೆ ನಡೆದಿದೆ. ನಗದು ಹಾಗೂ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು ಈ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: MIG-21 ಫೈಟರ್‌ ಜೆಟ್‌ ಹಾರಾಟ ಬಂದ್ – IAF ಮಹತ್ವದ ನಿರ್ಧಾರ

ಮುಖ್ಯ ಕಾರ್ಯದರ್ಶಿ ಉಷಾ ಶರ್ಮಾ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಉಮೇಶ್ ಮಿಶ್ರಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದಿನೇಶ್ ಎಂಎನ್ ಮತ್ತು ಜೈಪುರ ಕಮಿಷನರ್ ಆನಂದ ಶ್ರೀವಾಸ್ತವ ಅವರು ಶುಕ್ರವಾರ ತಡರಾತ್ರಿ ಸಚಿವಾಲಯದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈಪುರ ಕಮೀಷನರ್ ಶ್ರೀವಾಸ್ತವ, ಕಪಾಟಿನಲ್ಲಿ ಅನೇಕ ಫೈಲ್‌ಗಳು ಮತ್ತು ಟ್ರಾಲಿ ಸೂಟ್‌ಕೇಸ್‌ನಲ್ಲಿ ಚಿನ್ನ ಮತ್ತು ನಗದು ತುಂಬಿದೆ ಎಂದು ಅಲ್ಲಿನ ನೌಕರರು ಅಶೋಕ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಆರ್ಥಿಕ ತಜ್ಞ ಮೋದಿಯವರೇ 500 ನೋಟು ಹಿಂಪಡೆಯುತ್ತೀರಾ?: ಓವೈಸಿ ಪ್ರಶ್ನೆ

ಇ-ಫೈಲಿಂಗ್ ಯೋಜನೆಯಡಿ ಕಡತಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಅಲ್ಲದೇ ಬೀಗ ಹಾಕಿದ್ದ ಎರಡು ಕಪಾಟುಗಳ ಕೀಗಳು ಪತ್ತೆಯಾದ ನಂತರ ಅವುಗಳನ್ನು ತೆರೆಯಲಾಗಿದೆ. ಏಳು ಮಂದಿ ನೌಕರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಸಂಪೂರ್ಣ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿ ಸಂಪೂರ್ಣ ವಿಷಯವನ್ನು ಬಹಿರಂಗಪಡಿಸಲಾಗುವುದು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಾಟ – ಎರಡು ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ಕಪಾಟಿಗೆ ಹಲವು ತಿಂಗಳುಗಳಿಂದ ಬೀಗ ಹಾಕಲಾಗಿತ್ತು. ಆಧಾರ್-ಯುಐಡಿ-ಸಂಯೋಜಿತ ಸಿಬ್ಬಂದಿಯ ಸಹಾಯದಿಂದ ನೆಲಮಾಳಿಗೆಯನ್ನು ಪ್ರವೇಶಿಸಿದ ಪೊಲೀಸರು ನೆಲಮಾಳಿಗೆಗೆ ಪ್ರವೇಶವಿರುವ ಉದ್ಯೋಗಿಗಳನ್ನು ಈ ಕುರಿತು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI

ಯಾರ ಹಣ? ಹೇಗೆ ಬಂತು ಎಂದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈ ಘಟನೆಯ ಬಳಿಕ ಪ್ರತಿಪಕ್ಷವಾದ ಬಿಜೆಪಿ ಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿದೆ. ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಇದು ಗೆಹ್ಲೋಟ್ ಸರ್ಕಾರ ಭ್ರಷ್ಟಾಚಾರದ ರಕ್ಷಕ ಎಂಬುವುದಕ್ಕೆ ಸಾಕ್ಷಿಯಾಗಿದೆ ಎಂದು ತಮ್ಮ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಯೋಜನಾ ಭವನಕ್ಕೆ ಇಷ್ಟು ದೊಡ್ಡ ಮೊತ್ತದ ನಗದು ಮತ್ತು ಚಿನ್ನ ಹೇಗೆ ತಲುಪಿತು ಎಂಬುದನ್ನು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್

TAGGED:ashok gehlotBasementgoldJaipurmoneyrajasthanಅಶೋಕ್ ಗೆಹ್ಲೋಟ್ಚಿನ್ನಜೈಪುರನೆಲಮಾಳಿಗೆರಾಜಸ್ಥಾನಸರ್ಕಾರಿ ಕಟ್ಟಡಹಣ
Share This Article
Facebook Whatsapp Whatsapp Telegram

Cinema news

bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows
BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows

You Might Also Like

Excavation at Lakkundi Metal Shivalinga discovered
Districts

ಲಕ್ಕುಂಡಿಯಲ್ಲಿ ಉತ್ಖನನ – ಲೋಹದ ಶಿವಲಿಂಗ ಪತ್ತೆ

Public TV
By Public TV
26 minutes ago
G Parameshwar 1
Bengaluru City

ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ IPL ಆಡೋದಕ್ಕೆ ಷರತ್ತುಬದ್ಧ ಅನುಮತಿ – ಪರಮೇಶ್ವರ್

Public TV
By Public TV
28 minutes ago
SATISH JARKIHOLI 1
Davanagere

ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ – ಸತೀಶ್ ಜಾರಕಿಹೊಳಿ

Public TV
By Public TV
57 minutes ago
parappana agrahara
Bengaluru City

ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ – ಕೇಸ್‌ ದಾಖಲು

Public TV
By Public TV
1 hour ago
Eknath Shinde Sena corporators
Latest

ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ – ಶಿಂಧೆ ಸೇನಾ ಕಾರ್ಪೊರೇಟರ್‌ಗಳು ಫೈವ್‌ ಸ್ಟಾರ್ ಹೋಟೆಲ್‌ಗೆ ಸ್ಥಳಾಂತರ

Public TV
By Public TV
1 hour ago
Money
Bengaluru City

CL-7 ಲೈಸೆನ್ಸ್‌ಗೆ ಲಂಚಕ್ಕೆ ಬೇಡಿಕೆಯಿಟ್ಟ ಕೇಸ್ – ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?