Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಕಾಂತರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಕಾಂತರಾಜು

Bengaluru City

ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಕಾಂತರಾಜು

Public TV
Last updated: November 23, 2023 1:01 pm
Public TV
Share
2 Min Read
kantharaju
SHARE

ಬೆಂಗಳೂರು: ನಾನು ಕೊಟ್ಟಿರೋ ವರದಿ ನೈಜವಾಗಿದೆ ಮತ್ತು ವೈಜ್ಞಾನಿಕವಾಗಿದೆ ಎಂದು ಜಾತಿಗಣತಿ ಸಿದ್ಧ ಮಾಡಿದ್ದ ಆಯೋಗದ ಅಧ್ಯಕ್ಷ ಕಾಂತರಾಜು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕೊಟ್ಟ ವರದಿ ನೈಜವಾಗಿ ಇದೆ. ವೈಜ್ಞಾನಿಕವಾಗಿ ಇದೆ. ವರದಿ ನೋಡದೇ ವರದಿ ಅವೈಜ್ಞಾನಿಕ ಅನ್ನೋದು ಸರಿಯಲ್ಲ ಎಂದು ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.

SIDDARAMAIAH 3

40 ದಿನ ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಜಾತಿ, ಲಿಂಗ, ಧರ್ಮ, ಅಸ್ತಿ-ಪಾಸ್ತಿ ಎಲ್ಲವೂ ಸೇರಿ ‌ಗಣತಿ ವೇಳೆ 55 ಪ್ರಶ್ನೆ ಕೇಳಿದ್ದೇವೆ. 40 ದಿನ ಸಮೀಕ್ಷೆ ಆದ ಮೇಲೆ ಕೂಲಂಕಷವಾಗಿ ಅಂಕಿಅಂಶಗಳ ಸಮೇತ ವರದಿ ಸಿದ್ಧ ಮಾಡಲಾಗಿದೆ. ವರದಿ ಈಗ ಸರ್ಕಾರದ ಆಸ್ತಿ. ಸರ್ಕಾರ ವರದಿ ನೋಡಿದ ಬಳಿಕ ಮುಂದಿನ ತೀರ್ಮಾನ ಮಾಡಲಿ ಎಂದಿದ್ದಾರೆ.

ವರದಿಗೆ ಒಕ್ಕಲಿಗರು, ಲಿಂಗಾಯತರು ವಿರೋಧ ವಿಚಾರಕ್ಕೆ ಮಾತನಾಡಿದ ಅವರು, ಎರಡು ಸಮುದಾಯಗಳು ವಿರೋಧ ಮಾಡಬಹುದು‌. ಆದರೆ ವರದಿ ಮೊದಲು ನೋಡಲಿ. ಆಮೇಲೆ ಅದು ಸರಿಯಿಲ್ಲ ಎಂದರೆ ವಿರೋಧ ಮಾಡಲಿ. ವರದಿ ನೋಡಿ ಅದರಲ್ಲಿ ಏನಾದರು ತಪ್ಪು ಇದ್ದರೆ ನಾನು ಒಪ್ಪಿಕೊಳ್ತೀನಿ. ಆಯೋಗದಲ್ಲಿ ಕಷ್ಟ ಪಟ್ಟು ವರದಿ ಮಾಡೋ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಅನ್ನೋ ಆರೋಪಕ್ಕೆ ‌ಪ್ರತಿಕ್ರಿಯೆ ನೀಡಿದ ಅವರು, ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಅನ್ನೋದು ಸರಿಯಲ್ಲ. ವರದಿಯಲ್ಲಿ ತುಂಬಾ ವಾಲ್ಯೂಮ್‌ಗಳು ಇವೆ. ಆದರೆ ಒಂದು ವಾಲ್ಯೂಮ್‌ಗೆ ಕಾರ್ಯದರ್ಶಿ ಸಹಿ ಹಾಕಿಲ್ಲ ಅಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.

R ASHOK REACTION

ಮೂಲ ಪ್ರತಿ ಕಾಣೆ ಆಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂಲ ಪ್ರತಿ ಕಾಣೆಯಾಗಿದೆ ಅನ್ನೋದು ನನಗೆ ಗೊತ್ತಿಲ್ಲ. ನಾನು ವರದಿ ಕೊಟ್ಟಿದ್ದು 2019ರಲ್ಲಿ. ನಾನು ಇದ್ದಾಗ ಮೂಲ ಪ್ರತಿ ಇತ್ತು. ಈಗ ಇಲ್ಲ ಅನ್ನೋದು ನನಗೆ ಗೊತ್ತಿಲ್ಲ. ಈಗ ನಾನು ಹೊರಗೆ ಇದ್ದು ಮಾತಾಡೋದು‌ ಸರಿಯಲ್ಲ ಎಂದಿದ್ದಾರೆ.

ಇದು ಜಾತಿಗಣತಿ ಅಲ್ಲ. ಇದು ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಅಂತ ಸ್ಪಷ್ಟಪಡಿಸಿದರು. ಹಲವು ಸಚಿವರು ವರದಿ ರಿಜೆಕ್ಟ್ ಮಾಡಬೇಕು ಎಂಬ ಪತ್ರ ಸಹಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ವರದಿ ಕೊಟ್ಟಿದ್ದೇನೆ. ಯಾರು ಬೇಕಾದ್ರು ಅಭಿಪ್ರಾಯ ಹೇಳಬಹುದು. ರಿಜೆಕ್ಟ್ ಮಾಡಿ ಅಂತ ಹೇಳಬಹುದು. ಆದರೆ ಮೊದಲು ವರದಿ ನೋಡಲಿ, ಆಮೇಲೆ ಯಾರು ಏನು ಬೇಕಾದ್ರು ಹೇಳಲಿ. ವರದಿ ನೋಡದೇ ಸರಿಯಿಲ್ಲ ಅನ್ನೋದು‌ ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವಧಿಯಲ್ಲಿ ವರದಿ ಸ್ವೀಕಾರ ಮಾಡಲಿಲ್ಲವಾ ಎಂಬ ವಿಚಾರಕ್ಕೆ, ಕುಮಾರಸ್ವಾಮಿಗೆ ಅಪಾಯಿಂಟ್‌ಮೆಂಟ್ ಕೇಳಿದ್ವಿ. ಆದರೆ ಅವರು ಸಮಯ ಕೊಡಲಿಲ್ಲ ಅಂತ ತಿಳಿಸಿದರು. ಹಿಂದುಳಿದ ವರ್ಗಗಳ ಗಮನದಲ್ಲಿಟ್ಟುಕೊಂಡು ಈ ಸಮೀಕ್ಷೆ ನಡೆಸಲಾಗಿದೆ. ಇದು ಕಾಂತರಾಜು ವರದಿನಾ? ಜಯಪ್ರಕಾಶ್ ಹೆಗ್ಡೆ ವರದಿನಾ ಎಂಬ ಪ್ರಶ್ನೆಗೆ ವರದಿ ಕೊಟ್ಟಿದ್ದು, ಸಮೀಕ್ಷೆ ಮಾಡಿದ್ದು ನಾವು. ಈಗ ಸರ್ಕಾರ ಏನಾದ್ರು ತೀರ್ಮಾನ ಮಾಡಬಹುದು. ಆದರೆ ನಾವು ಮಾಡಿದ ಕೆಲಸಕ್ಕೆ ಅವರ ವರದಿ ಅಂತ‌ ಹೇಳೋಕೆ ಹೇಗೆ ಸಾಧ್ಯ. ಜನರು ಕೇಳೋ ಅನುಮಾನಗಳಿಗೆ ಈಗಿನ ಅಧ್ಯಕ್ಷರು ಹೇಗೆ ಉತ್ತರ ಕೊಡೋಕೆ ಸಾಧ್ಯ. ಈಗ ವರದಿ ಅವರು ರೆಡಿ ಮಾಡಿದ್ರೆ ನಾವು ಹೇಗೆ ಉತ್ತರ ಕೊಡೋಕೆ ಸಾಧ್ಯ. ಪರೋಕ್ಷವಾಗಿ ಕಾಂತರಾಜು ವರದಿ ಹೆಸರಿನಲ್ಲಿ ಇರಬೇಕು ಅಂತ ತಿಳಿಸಿದ್ದಾರೆ.

TAGGED:bjpCaste CensuscongressjdsKantharajuಕಾಂಗ್ರೆಸ್ಕಾಂತರಾಜುಜಾತಿಗಣತಿ ವರದಿಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
32 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?