Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ

Bengaluru City

ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ

Public TV
Last updated: September 20, 2025 6:26 pm
Public TV
Share
2 Min Read
Nirmalanandanatha Swamiji
SHARE
  • ಹೊಸ ಜಾತಿ ಸೇರ್ಪಡೆ ಮಾಡಿರುವುದು ಸರಿ ಇಲ್ಲ: ನಂಜಾವಧೂತ ಶ್ರೀ
  • ಅಗತ್ಯವಿದ್ರೆ ಮಾತ್ರ ಉಪಜಾತಿ ಬರೆಸಿ: ನಿಶ್ಚಲಾನಂದ ಶ್ರೀ

ಬೆಂಗಳೂರು: ತರಾತುರಿ ಜಾತಿಗಣತಿ (Caste Census) ಹಾಗೂ ಜಾತಿಗಳ ಜೊತೆ ಕ್ರಿಶ್ಚಿಯನ್ ದರ್ಮ ಸೇರಿಸುವುದು ಬೇಡ ಎಂದು ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Nirmalanandanatha Swamiji Nischalananda Sri Nanjavadhutha Swamiji

ಒಕ್ಕಲಿಗ ಸಮುದಾಯದ ಸಭೆ (Vokkaliga) ಬಳಿಕ ಅವರು ಮಾತನಾಡಿದರು. ಈ ವೇಳೆ, ಸಮೀಕ್ಷೆ ಮುಂದೂಡಬೇಕು, ಕಾಲಮಿತಿ ಹೆಚ್ಚು ಮಾಡಿ ಸಮೀಕ್ಷೆ ನಡೆಸಬೇಕು. ನಾವು ಕೂಡ ಸಮೀಕ್ಷೆ ಸ್ವಾಗತಿಸುತ್ತೇವೆ, ಕೆಲ ನ್ಯೂನತೆ ಸರಿಪಡಿಸಬೇಕು. ಕ್ರಿಶ್ಚಿಯನ್, ಜೈನ ಈ ರೀತಿ ಧರ್ಮಗಳ ಜಾತಿಗಳಿಗೆ ಸೇರಿಸುವುದು ಸರಿ ಇಲ್ಲ ಎಂದು ಅವರು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಒಕ್ಕಲಿಗ ಸಭೆಯಲ್ಲಿ ಹೆಚ್‌ಡಿಕೆ-ಡಿಕೆಶಿ ಮುಖಾಮುಖಿ

15 ದಿನಗಳ ಕಾಲ ಸಮೀಕ್ಷೆ ಮಾಡಲು ಹೊರಟಿದ್ದಾರೆ. ಅದರಲ್ಲಿ, 9 ದಿನಗಳು ನವರಾತ್ರಿ, ಎಲ್ಲರೂ ಶ್ರದ್ಧೆಯಿಂದ ಆಚರಣೆ ಮಾಡ್ತಾರೆ. ಹೀಗಾಗಿ ಸಮೀಕ್ಷೆಯಿಂದ ಯಾವ ಮಟ್ಟಕ್ಕೆ ಪೂರ್ಣ ಆಗುತ್ತೆ. ರಜೆಯ ಕಾರಣ ಎಲ್ಲರೂ ಅವರವರ ಊರಿಗೆ ಹೋಗ್ತಾರೆ. ಸಮೀಕ್ಷೆಯ ಸದ್ದುದ್ದೇಶ ಅರ್ಥಪೂರ್ಣ ಆಗಬೇಕು. ಎಲ್ಲರೂ ಒಕ್ಕಲಿಗ ಎಂದು ಬರೆಸಬೇಕು. ಕೋಡ್ ಎ 1545 ಎಂದು ಬರೆಸಬೇಕು. ಜಾತಿಗಣತಿ ಮುಂದೂಡಿ ಅನ್ನೋದು ನಮ್ಮ ನಿರ್ಣಯ, ಸರ್ಕಾರ ಸ್ಪಂದಿಸುವ ಭರವಸೆ ಇದೆ ಎಂದರು.

Nirmalanandanatha Swamiji Nischalananda Sri Nanjavadhutha Swamiji 1

ಇದೇ ವೇಳೆ ಧರ್ಮ ಸೇರಿಸುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಶ್ರೀಗಳು, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಕುರುಬ ಸರಿ ಇಲ್ಲ. ಇದು ಮುಂದೆ ಮುಸ್ಲಿಂ ಒಕ್ಕಲಿಗ, ಮುಸ್ಲಿಂ ಲಿಂಗಾಯತ ಅಂದ್ರೆ ಹೇಗೆ? ಮುಸ್ಲಿಂ ಹಿಂದೂ ಅಂತಾ ಮಾಡಿದ್ರೆ.? ಇದನ್ನ ಸಹಿಸಲು ಆಗಲ್ಲ.

ಇನ್ನು ಸಭೆ ಬಳಿಕ ಮಾತನಾಡಿದ ನಂಜಾವಧೂತ ಸ್ವಾಮೀಜಿ (Nanjavadhutha Swamiji), ಈ ಹಿಂದೆ ಮರುಸಮೀಕ್ಷೆಗೆ ಒತ್ತಾಯಿಸಿದ್ದೆವು. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ ಹೊಸ ಗಣತಿ ಮಾಡ್ತಿದ್ದಾರೆ. ಅದಕ್ಕೆ ನಮ್ಮವರ ತಕಾರರು ಇಲ್ಲ. ಆದ್ರೆ ಧರ್ಮದ ಹೆಸರು ತಳುಕು ಹಾಕುವುದು, ಹೊಸ ಜಾತಿ ಹಾಕಿ ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ಯಾವುದೇ ಪ್ರಕ್ರಿಯೆ ನಡೆಯದೇ ಹೊಸ ಜಾತಿ ಸೇರ್ಪಡೆ ಮಾಡಿರುವುದು ಸರಿ ಇಲ್ಲ ಎಂದು ಕಿಡಿಕಾರಿದರು.

ಕೃಷಿ ಚಟುವಟಿಕೆಗಳು, ಸಾಲು ಸಾಲು ಹಬ್ಬ, ಪಿತೃಪಕ್ಷ ಎಲ್ಲರೂ ಒಂದೇ ದಿನ ಆಚರಣೆ ಮಾಡಲ್ಲ. 9 ದಿನಗಳ ನವರಾತ್ರಿ ಇರುತ್ತೆ, ಸ್ವಾಮೀಜಿಗಳು ಪೂಜೆಯಲ್ಲಿ ಇರ್ತಾರೆ. ಆಯೋಗದ್ದು ಅವಸರದ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ನಿರ್ಧಾರ ಏಕಪಕ್ಷೀಯ. ತರಾತುರಿಯಲ್ಲಿ ಜಾತಿಗಣತಿಗೆ ಮುಂದಾಗಿದೆ. ಏಳೂವರೆ ಕೋಟಿ ಜನರ ಸಮೀಕ್ಷೆಯನ್ನ 15 ದಿನದಲ್ಲಿ ಹೇಗೆ ಪೂರ್ಣಗೊಳಿಸ್ತೀರಾ? ಸರ್ಕಾರ ಮಧ್ಯಪ್ರವೇಶ ಮಾಡಬೇಕು. ಸಮೀಕ್ಷೆಯನ್ನ ಮುಂದೂಡಬೇಕು. ನಮಗೆ ಭಯ ಇಲ್ಲ, ಆದರೆ ಕಾಲಾವಕಾಶ ಕೊಡಿ ಎಂದರು.

ಸಭೆ ಬಳಿಕ ನಿಶ್ಚಲಾನಂದ ಸ್ವಾಮೀಜಿಗಳು (Nischalananda Sri) ಮಾತನಾಡಿ, ಜಾತಿಗಣತಿಯನ್ನ ಸ್ವಾಗತಿಸುತ್ತೇವೆ. ಆದರೆ ಕೃಷಿ, ದಸರಾ ಕೆಲಸ ಇದೆ, ತರಾತುರಿಯಲ್ಲಿ ಜಾತಿಗಣತಿ ಮಾಡಬಾರದು. ಕನಿಷ್ಠ 60 ದಿನ ಮುಂದೂಡುವಂತೆ ಸರ್ಕಾರಕ್ಕೆ ಮನವಿ ಮಾಡಿ ನಿರ್ಣಯ ಕೈಗೊಂಡಿದ್ದೇವೆ. ಅಲ್ಲದೇ ಒಕ್ಕಲಿಗ ಮೊದಲು ಬರೆಸಬೇಕು, ಅಗತ್ಯ ಇದ್ರೆ ಉಪಜಾತಿ ಬರೆಸಬೇಕು ಅಂತಾ ನಿರ್ಣಯ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಾತಿ ಗಣತಿಯಲ್ಲಿ ಸಾಕಷ್ಟು ದೋಷಗಳಿವೆ, ಸಮೀಕ್ಷೆ ಮುಂದೂಡಬೇಕು: ವಚನಾನಂದ ಸ್ವಾಮೀಜಿ

TAGGED:Caste Censusnirmalanandanatha swamijipoliticsVokkaliga
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
3 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
29 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?