ನವದೆಹಲಿ: ಸರ್ಕಾರವು ದತ್ತಾಂಶದ ಕಾರಣಕ್ಕೆ ಜಾತಿ ಜನಗಣತಿಯನ್ನು (Caste Census) ಮಾಡಬೇಕು ಅದನ್ನು ಜನಪರ ಕಲ್ಯಾಣ ಯೋಜನೆಗಳಿಗೆ ಬಳಸಬೇಕು ಆದರೆ ರಾಜಕೀಯಕ್ಕೆ, ಚುನಾವಣೆಗೆ ಬಳಸಿಕೊಳ್ಳಬಾರದು ಎಂದು ಆರ್ಎಸ್ಎಸ್ ಹೇಳಿದೆ. ಜಾತಿ ಗಣತಿಗೆ ಸಂಬಂಧಿಸಿದಂತೆ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಮಹತ್ವದ ಹೇಳಿಕೆ ಹೊರಬಂದಿದೆ.
ಈ ಬಗ್ಗೆ ಮಾತನಾಡಿರುವ ಆರ್ಎಸ್ಎಸ್ನ (RSS) ಮುಖ್ಯ ವಕ್ತಾರ ಸುನೀಲ್ ಅಂಬೇಕರ್, ಜಾತಿ ಪ್ರತಿಕ್ರಿಯೆಗಳು (Sunil Ambekar) ನಮ್ಮ ಸಮಾಜದಲ್ಲಿ ಸೂಕ್ಷ್ಮ ವಿಷಯವಾಗಿದೆ ಮತ್ತು ಅವು ರಾಷ್ಟ್ರೀಯ ಏಕೀಕರಣಕ್ಕೆ ಮುಖ್ಯವಾಗಿದೆ. ಆದರೆ ಜಾತಿ ಗಣತಿಯನ್ನು ಚುನಾವಣಾ ಪ್ರಚಾರ ಮತ್ತು ಚುನಾವಣಾ ಉದ್ದೇಶಗಳಿಗಾಗಿ ಬಳಸಬಾರದು ಎಂದು ಹೇಳಿದ್ದಾರೆ.ಇದನ್ನೂ ಓದಿ: ಹುದ್ದೆ ಸದ್ಯ ಖಾಲಿ ಇಲ್ಲ, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಡಿಕೆಶಿ
ಕಳೆದ ವರ್ಷ ಡಿಸೆಂಬರ್ನಲ್ಲಿ ಬಿರುಸಿನ ಚರ್ಚೆ ನಡುವೆಯೇ ಆರ್ಎಸ್ಎಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿ, ಜಾತಿ ಗಣತಿಗೆ ತಾನು ವಿರೋಧವಿಲ್ಲ ಎಂದು ಪ್ರತಿಪಾದಿಸಿತ್ತು. ಈಗ ಮತ್ತೆ ಈ ಬಗ್ಗೆ ಚರ್ಚೆ ಶುರುವಾದ ಬೆನ್ನಲ್ಲೇ ಹೇಳಿಕೆ ನೀಡಿದ್ದು, ಜಾತಿ ಜನಗಣತಿ ಸಮಾಜದ ಸರ್ವತೋಮುಖ ಪ್ರಗತಿಗೆ ಬಳಸಬೇಕು, ಎಲ್ಲಾ ಕಡೆಯವರು ಸಾಮಾಜಿಕ ಸಾಮರಸ್ಯ ಮತ್ತು ಸಮಗ್ರತೆಗೆ ಭಂಗವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಆರ್ಎಸ್ಎಸ್ ಕಾರ್ಯಾಧ್ಯಕ್ಷ ಶ್ರೀಧರ್ ಗಾಡ್ಗೆ (Shridhar Gadge), ಜಾತಿ ಗಣತಿಯನ್ನು “ನಿಷ್ಫಲ ವ್ಯಾಯಾಮ” ಎಂದು ಹೇಳುವ ಮೂಲಕ ವಿದರ್ಭ ಪ್ರದೇಶದ ವಿವಾದ ಹುಟ್ಟು ಹಾಕಿದ್ದರು. ಜಾತಿ ಗಣತಿಯು ಜಾತಿವಾರು ಜನಸಂಖ್ಯೆಯನ್ನು ಅಳೆಯುತ್ತದೆ ಆದರೆ ಅದು ಸಮಾಜ ಅಥವಾ ರಾಷ್ಟ್ರದ ಹಿತಾಸಕ್ತಿಯಲ್ಲಿರುವುದಿಲ್ಲ ಎಂದು ಹೇಳಿದ್ದರು.ಇದನ್ನೂ ಓದಿ: ನನಗೂ ಸಿಎಂ ಆಗೋ ಆಸೆ ಇದೆ : ಜಮೀರ್ ಅಹ್ಮದ್